ಕುಂದಾಪುರ

ಊರಾಗ್ ಒಂದ ಕಾರ್ ಹಬ್ಬ ಕಾರ್ಯಕ್ರಮ ಉದ್ಘಾಟನೆ

Share

ಕುಂದಾಪುರ:ಯುನೆಟೈಡ್ ಟೊಯೋಟ ಕಂಪೆನಿ ವತಿಯಿಂದ ಉಡುಪಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಊರಾಗ್ ಒಂದ ಕಾರ್ ಹಬ್ಬ ಎನ್ನುವ ವಿನೂತ ಕಾರ್ಯಕ್ರಮವನ್ನು ಬಸ್ರೂರು ಜಂಕ್ಷನ್‍ನಲ್ಲಿ ಸೋಮವಾರ ಉದ್ಘಾಟಿಸಲಾಯಿತು.
ಊರಾಗ್ ಒಂದ ಕಾರ್ ಹಬ್ಬದ ಪ್ರಯುಕ್ತ ಟೊಯೋಟ ಕಂಪೆನಿಯ ವಿವಿಧ ಬಗೆಯ ಕಾರ್‍ಗಳನ್ನು ಪ್ರದರ್ಶನಕ್ಕೆ ಇಡಲಾಯಿತು.ದುಬಾರಿ ಬೆಲೆಯ ಕಾರ್‍ಗಳನ್ನು ನೋಡಿ ಜನರು ಖುಷಿಪಟ್ಟರು.ಗ್ರಾಹಕರು ಕಾರ್ ಹಬ್ಬದಲ್ಲಿ ಭಾಗವಹಿಸಿ ಟೊಯೋಟ ಸಿಬ್ಬಂದಿಗಳಿಂದ ಮಾಹಿತಿಯನ್ನು ಪಡೆದುಕೊಂಡು.ಹೊಸ ಕಾರ್ ಖರೀದಿಗೆ ಬುಕ್ಕಿಂಗ್ ಕೂಡ ಮಾಡಿದರು.ಗ್ರಾಹಕರಿಗೆ ಟೆಸ್ಟ್ ಡ್ರೈ ವ್ಯವಸ್ಥೆಯನ್ನು ಕೂಡ ಅಚ್ಚುಕಟ್ಟಾಗಿ ಮಾಡಲಾಯಿತು.
ಬಸ್ರೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿಗಳಾದ ಮಾಜಿ ಶಾಸಕ ಅಪ್ಪಣ್ಣ ಹೆಗ್ಡೆ ಅವರು ದೀಪ ಬೆಳಗಿಸುವುದರ ಮೂಲಕ ಊರಾಗ್ ಒಂದ ಕಾರ್ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಅಷ್ಟೇನು ಅನುಕೂಲತೆಗಳು ಇಲ್ಲದಂತಹ ಆಗಿನ ಕಾಲದಲ್ಲಿ ಕುಂದಾಪುರ ತಾಲೂಕಿನಲ್ಲಿ ಬರೆ ಎರಡು ಕಾರುಗಳು ಮಾತ್ರ ಓಡಾಟ ಮಾಡುತ್ತಿದ್ದವು.ಬಹಳಷ್ಟು ವೇಗವಾಗಿ ಬೆಳೆಯುತ್ತಿರುವ ಕುಂದಾಪುರ ತಾಲೂಕಿನಲ್ಲಿ ಇಂದು ಬದಲಾವಣೆಯ ಪರ್ವವನ್ನು ನೋಡಬಹುದಾಗಿದೆ.ಗ್ರಾಮೀಣ ಪ್ರದೇಶದಲ್ಲಿ ಕಾರ್ ಮೇಳವನ್ನು ಆಯೋಜನೆ ಮಾಡಿರುವುದರಿಂದ ಹಳ್ಳಿ ಜನರು ಕೂಡ ತಮ್ಮ ಊರಿನಲ್ಲೆ ಉತ್ತಮ ದರ್ಜೆ ಕಾರ್‍ಗಳನ್ನು ನೋಡಿ ಕೊಂಡು ಕೊಳ್ಳಲು ಅವಕಾಶವನ್ನು ಕಲ್ಪಿಸಿದಂತೆ ಆಗಿದೆ ಎಂದರು.
ಬಸ್ರೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನಕರ ಶೆಟ್ಟಿ ಮಾತನಾಡಿ,ಕಾರ್‍ಗಳನ್ನು ಕೊಂಡು ಕೊಳ್ಳಬೇಕಾಗಿದ್ದರೆ ಈ ಹಿಂದೆ ನಗರ ಪ್ರದೇಶಗಳಿಗೆ ಹೊಗಬೇಕಾಗಿತ್ತು.ಕುಂದಾಪುರದಂತಹ ಪ್ರದೇಶದಲ್ಲಿ ತಮ್ಮ ಕಂಪೆನಿ ಶೋರೂಂ ಅನ್ನು ಆರಂಭಿಸುವುದರ ಮೂಲಕ ತಮ್ಮ ಊರಿನಲ್ಲೆ ಆಕರ್ಷಕ ಕಾರ್‍ಗಳನ್ನು ನೋಡಿ ಕೊಂಡು ಕೊಳ್ಳಲು ಜನರಿಗೆ ಟೊಯೋಟ ಕಂಪೆನಿ ಅವಕಾಶವನ್ನು ಮಾಡಿಕೊಟ್ಟಿದೆ ಎಂದರು.
ಯೂಟ್ರಸ್ಟ್ ಮ್ಯಾನೇಜರ್ ಪ್ರತಾಪ ಅವರು ಕಾರ್ ಮೇಳವನ್ನು ಕುರಿತು ಮಾತನಾಡಿ,ಯುನೈಟೆಡ್ ಕಂಪೆನಿ ವತಿಯಿಂದ ಊರಾಗ್ ಒಂದ ಕಾರ ಹಬ್ಬವನ್ನು ಬಸ್ರೂರುನಲ್ಲಿ ಆಯೋಜನೆ ಮಾಡಲಾಗಿದೆ.ಇವೊಂದು ಕಾರ್ ಹಬ್ಬ ಮೇ.26 ರ ತನಕ ನಡೆಯಲಿದೆ ಎಂದು ಹೇಳಿದರು.ಜನರ ಪ್ರತಿಕ್ರಿಯೆ ಉತ್ತಮ ರೀತಿಯಲ್ಲಿ ವ್ಯಕ್ತವಾಗುತ್ತಿದೆ ಎಂದರು.ಒನ್ ಸ್ಪಾಟ್‍ನಲ್ಲಿ ಹಳೆ ಕಾರನ್ನು ಉತ್ತಮ ಬೆಲೆಗೆ ಖರೀದಿಸಿ ಹೊಸಕಾರಿಗೆ ಲೊನ್ ವ್ಯವಸ್ಥೆ ಕೂಡ ಸ್ಥಳದಲ್ಲೆ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದೇವೆ ಜನರು ಕಾರ್ ಹಬ್ಬ ಪ್ರಯೋಜನ ಪಡೆದುಕೊಳ್ಳಬೇಕೆಂದರು.ಗ್ಲಾಂಝಾ ಮತ್ತು ಹೈರೆಡರ್ ಕಾರ್ ಮೇಲೆ ಒಂದು ಲಕ್ಷ ಹಾಗೂ ಪಾರ್ಚೂನರ್ ಕಾರ್ ಮೇಲೆ 3 ಲಕ್ಷ ಡಿಸ್ಕೌಂಟ್ ಆಫರ್ ಇಡಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಯುನೈಟೆಡ್ ಟೊಯೋಟ ಕುಂದಾಪುರ ಜಾಲಾಡಿ ಬ್ರಾಂಚ್ ಮ್ಯಾನೇಜರ್ ರವೀಂದ್ರ,ಮಾರ್ಕೆಂಟಿಗ್ ಗ್ರೂಪ್ ಮ್ಯಾನೇಜರ್ ಸೋನಿಯ,ಕುಂದಾಪುರ ಟೀಮ್ ಲೀಡರ್ ಆದರ್ಶ ಮತ್ತು ಸಿಬ್ಬಂದಿಗಳು ಉಪಸ್ಥಿತಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 weeks ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago