ಕುಂದಾಪುರ

ಯೋಗ ತರಬೇತಿ ಸಮಾರೋಪ ಸಮಾರಂಭ

Share

Advertisement
Advertisement

ಕುಂದಾಪುರ:ಜೋಗಿ ಮನೆ ಟ್ರಸ್ಟ್ ಹಳಗೇರಿ ತಂಕಬೆಟ್ಟು ,ಜೆ.ಸಿ.ಐ.ಉಪ್ಪುಂದ ಹಾಗೂ ಆಯುಷ್ಮಾನ್ ಆರೋಗ್ಯ ಮಂದಿರ (ಆಯುಷ್) ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೋಡು ಅವರ ಸಂಯುಕ್ತ ಆಶ್ರಯದಲ್ಲಿ 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಆಯೋಜಿಸಿದ 10 ದಿನಗಳ ಉಚಿತ ಯೋಗ ತರಬೇತಿಯ ಸಮಾರೋಪ ಸಮಾರಂಭ ಹಳಗೇರಿ ಜೋಗಿ ಮನೆ ವಠಾರದಲ್ಲಿ ನಡೆಯಿತು.
ಸಿದ್ಧಪೀಠ ಕೊಡಾಚಾದ್ರಿ ಪ್ರಧಾನ ಕಾರ್ಯದರ್ಶಿ
ಡಾ.ಕೇಶವ ಕೋಟೇಶ್ವರ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ.ಯೋಗ ತರಬೇತಿ ಶಿಬಿರದಂತಹ ಕಾರ್ಯಕ್ರಮಗಳು ಎಲ್ಲಾ ಪರಿಸರದಲ್ಲಿ ನಡೆಯಬೇಕು.ಸಮಾಜ ಸೇವೆ ಮಾಡುವಂತಹ ಮನೋಭಾವವನ್ನು ಎಲ್ಲರೂ ಬೆಳೆಸಿಕೊಳ್ಳುವುದರಿಂದ ಸಮಾಜ ಸುಧಾರಣೆಯನ್ನು ಮಾಡಬಹುದಾಗಿದೆ ಎಂದು ಹೇಳಿದರು.
ಯೋಗ ತರಬೇತುದಾರರಾದ ಶೇಖರ್ ಶೆಟ್ಟಿ ಅವರು ಯೋಗದ ಮಹತ್ವ ಕುರಿತು ಮಾತನಾಡಿ,ಭಾರತೀಯ ಪರಂಪರೆಯಿಂದ ನಡೆದುಬಂದಂತಹ ಯೋಗಕ್ಕೆ ಇಂದು ವಿಶ್ವ ಮಟ್ಟದಲ್ಲಿ ಮನ್ನಣೆ ದೊರೆತಿದೆ ಎಂದು ಹೇಳಿದರು.ನಿತ್ಯವೂ ಯೋಗ ಮಾಡುವುದರಿಂದ ದೈಹಿಕ ಆರೋಗ್ಯ ಕಾಪಾಡಿಕೊಳ್ಳುವುದರ ಜತೆಗೆ ಮಾನಸಿಕವಾಗಿ ನೆಮ್ಮದಿ ಜೀವನ ಕಾಣಬಹುದಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಜೋಗಿ ಮನೆ ಟ್ರಸ್ಟ್ ಅಧ್ಯಕ್ಷರಾದ ವಸಂತ ಜೋಗಿ ಅವರು ಮಾತನಾಡಿ,ಗ್ರಾಮೀಣ ಪ್ರದೇಶದಲ್ಲಿ ಯೋಗ ಶಿಬಿರಗಳನ್ನು ಆಯೋಜನೆ ಮಾಡುವುದರಿಂದ ಹಳ್ಳಿ ಭಾಗದ ಜನರಿಗೆ ಬಹಳಷ್ಟು ಪ್ರಯೋಜನ ವಾಗಲಿದೆ.ಯೋಗ ಶಿಬಿರಕ್ಕೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದರು.
ಆಯುಷ್ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಕಾಲ್ತೋಡು ಡಾ.ವೀಣಾ ಕಾರಂತ ಅವರು ಮಾತನಾಡಿ,ನಮ್ಮ ಸುತ್ತಲಿನ ಜನರಿಗೆ ಅನುಕೂರಕರ ಚಟುವಟಿಕೆಗಳನ್ನು ಮಾಡಿಕೊಂಡಿರುವುದರಿಂದ ಜನರ ಜೀವನ ಕ್ರಮ ಸುಧಾರಿಸುವುದರ ಜೊತೆಗೆ ಆದರ್ಶ ವ್ಯಕ್ತಿಯಾಗಿ ಬದುಕುಕಲು ಸಹಕಾರಿ ಆಗುತ್ತದೆ ಎಂದರು.
ಡಾ.ಸುರೇಶ್ ಕೆ.ಎನ್.ಅಧ್ಯಕ್ಷ ರು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಘಟಕ ತೀರ್ಥಹಳ್ಳಿ,S.S.L.C ಯಲ್ಲಿ ಹೆಚ್ಚಿನ ಅಂಕ ಗಳಿಸಿದ ಜೋಗಿ ಕುಟುಂಬದ ಕುಮಾರಿ ಕನ್ನಿಕಾ ಜೋಗಿ ‌ಹಾಗೂ ಸರಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿಗಳಾದ ಡಾ.ವೀಣಾ ಕಾರಂತರವರನ್ನು ಸನ್ಮಾನಿಸಲಾಯಿತು. ತರಬೇತಿಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರ ಹಾಗೂ ಆಯುರ್ವೇದ, ಆಹಾರ,ಯೋಗ ಮಾಹಿತಿ ಐಯನ್ನೊಳಗೊಂಡ ಪುಸ್ತಕಗಳನ್ನು ವಿತರಿಸಲಾಯಿತು.JCI ಉಪ್ಪುಂದ ಇದರ ಅಧ್ಯಕ್ಷ ಮಂಜುನಾಥ ದೇವಾಡಿಗ, ಉದಯ ಡಿ.ಆರ್, ಪುರುಷೋತ್ತಮ ದಾಸ್ ಉಪ್ಪುಂದ
ಉಪಸ್ಥಿತರಿದ್ದರು.
ಶ್ವೇತಾ ಜೋಗಿ ಪ್ರಾರ್ಥಿಸಿದರು.ರಾಜೇಶ್ ಜೋಗಿ ಬಂಟಕಲ್ಲು ಸ್ವಾಗತಿಸಿದರು.
ಸಂತೋಷ ಮೊಗವೀರ ನಿರೂಪಿಸಿದರು.ಮಂಜುನಾಥ ಕೊಡೇರಿ ವಂದಿಸಿದರು.

Advertisement
Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

17 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

17 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

18 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

21 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago