ಕುಂದಾಪುರ

ಯೋಗ ತರಬೇತಿ ಸಮಾರೋಪ ಸಮಾರಂಭ

Share

ಕುಂದಾಪುರ:ಜೋಗಿ ಮನೆ ಟ್ರಸ್ಟ್ ಹಳಗೇರಿ ತಂಕಬೆಟ್ಟು ,ಜೆ.ಸಿ.ಐ.ಉಪ್ಪುಂದ ಹಾಗೂ ಆಯುಷ್ಮಾನ್ ಆರೋಗ್ಯ ಮಂದಿರ (ಆಯುಷ್) ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೋಡು ಅವರ ಸಂಯುಕ್ತ ಆಶ್ರಯದಲ್ಲಿ 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಆಯೋಜಿಸಿದ 10 ದಿನಗಳ ಉಚಿತ ಯೋಗ ತರಬೇತಿಯ ಸಮಾರೋಪ ಸಮಾರಂಭ ಹಳಗೇರಿ ಜೋಗಿ ಮನೆ ವಠಾರದಲ್ಲಿ ನಡೆಯಿತು.
ಸಿದ್ಧಪೀಠ ಕೊಡಾಚಾದ್ರಿ ಪ್ರಧಾನ ಕಾರ್ಯದರ್ಶಿ
ಡಾ.ಕೇಶವ ಕೋಟೇಶ್ವರ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ.ಯೋಗ ತರಬೇತಿ ಶಿಬಿರದಂತಹ ಕಾರ್ಯಕ್ರಮಗಳು ಎಲ್ಲಾ ಪರಿಸರದಲ್ಲಿ ನಡೆಯಬೇಕು.ಸಮಾಜ ಸೇವೆ ಮಾಡುವಂತಹ ಮನೋಭಾವವನ್ನು ಎಲ್ಲರೂ ಬೆಳೆಸಿಕೊಳ್ಳುವುದರಿಂದ ಸಮಾಜ ಸುಧಾರಣೆಯನ್ನು ಮಾಡಬಹುದಾಗಿದೆ ಎಂದು ಹೇಳಿದರು.
ಯೋಗ ತರಬೇತುದಾರರಾದ ಶೇಖರ್ ಶೆಟ್ಟಿ ಅವರು ಯೋಗದ ಮಹತ್ವ ಕುರಿತು ಮಾತನಾಡಿ,ಭಾರತೀಯ ಪರಂಪರೆಯಿಂದ ನಡೆದುಬಂದಂತಹ ಯೋಗಕ್ಕೆ ಇಂದು ವಿಶ್ವ ಮಟ್ಟದಲ್ಲಿ ಮನ್ನಣೆ ದೊರೆತಿದೆ ಎಂದು ಹೇಳಿದರು.ನಿತ್ಯವೂ ಯೋಗ ಮಾಡುವುದರಿಂದ ದೈಹಿಕ ಆರೋಗ್ಯ ಕಾಪಾಡಿಕೊಳ್ಳುವುದರ ಜತೆಗೆ ಮಾನಸಿಕವಾಗಿ ನೆಮ್ಮದಿ ಜೀವನ ಕಾಣಬಹುದಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಜೋಗಿ ಮನೆ ಟ್ರಸ್ಟ್ ಅಧ್ಯಕ್ಷರಾದ ವಸಂತ ಜೋಗಿ ಅವರು ಮಾತನಾಡಿ,ಗ್ರಾಮೀಣ ಪ್ರದೇಶದಲ್ಲಿ ಯೋಗ ಶಿಬಿರಗಳನ್ನು ಆಯೋಜನೆ ಮಾಡುವುದರಿಂದ ಹಳ್ಳಿ ಭಾಗದ ಜನರಿಗೆ ಬಹಳಷ್ಟು ಪ್ರಯೋಜನ ವಾಗಲಿದೆ.ಯೋಗ ಶಿಬಿರಕ್ಕೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದರು.
ಆಯುಷ್ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಕಾಲ್ತೋಡು ಡಾ.ವೀಣಾ ಕಾರಂತ ಅವರು ಮಾತನಾಡಿ,ನಮ್ಮ ಸುತ್ತಲಿನ ಜನರಿಗೆ ಅನುಕೂರಕರ ಚಟುವಟಿಕೆಗಳನ್ನು ಮಾಡಿಕೊಂಡಿರುವುದರಿಂದ ಜನರ ಜೀವನ ಕ್ರಮ ಸುಧಾರಿಸುವುದರ ಜೊತೆಗೆ ಆದರ್ಶ ವ್ಯಕ್ತಿಯಾಗಿ ಬದುಕುಕಲು ಸಹಕಾರಿ ಆಗುತ್ತದೆ ಎಂದರು.
ಡಾ.ಸುರೇಶ್ ಕೆ.ಎನ್.ಅಧ್ಯಕ್ಷ ರು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಘಟಕ ತೀರ್ಥಹಳ್ಳಿ,S.S.L.C ಯಲ್ಲಿ ಹೆಚ್ಚಿನ ಅಂಕ ಗಳಿಸಿದ ಜೋಗಿ ಕುಟುಂಬದ ಕುಮಾರಿ ಕನ್ನಿಕಾ ಜೋಗಿ ‌ಹಾಗೂ ಸರಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿಗಳಾದ ಡಾ.ವೀಣಾ ಕಾರಂತರವರನ್ನು ಸನ್ಮಾನಿಸಲಾಯಿತು. ತರಬೇತಿಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರ ಹಾಗೂ ಆಯುರ್ವೇದ, ಆಹಾರ,ಯೋಗ ಮಾಹಿತಿ ಐಯನ್ನೊಳಗೊಂಡ ಪುಸ್ತಕಗಳನ್ನು ವಿತರಿಸಲಾಯಿತು.JCI ಉಪ್ಪುಂದ ಇದರ ಅಧ್ಯಕ್ಷ ಮಂಜುನಾಥ ದೇವಾಡಿಗ, ಉದಯ ಡಿ.ಆರ್, ಪುರುಷೋತ್ತಮ ದಾಸ್ ಉಪ್ಪುಂದ
ಉಪಸ್ಥಿತರಿದ್ದರು.
ಶ್ವೇತಾ ಜೋಗಿ ಪ್ರಾರ್ಥಿಸಿದರು.ರಾಜೇಶ್ ಜೋಗಿ ಬಂಟಕಲ್ಲು ಸ್ವಾಗತಿಸಿದರು.
ಸಂತೋಷ ಮೊಗವೀರ ನಿರೂಪಿಸಿದರು.ಮಂಜುನಾಥ ಕೊಡೇರಿ ವಂದಿಸಿದರು.

Advertisement

Share
Team Kundapur Times

Recent Posts

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

5 hours ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 days ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 weeks ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 weeks ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

3 weeks ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

3 weeks ago