ಕುಂದಾಪುರ:ಜೋಗಿ ಮನೆ ಟ್ರಸ್ಟ್ ಹಳಗೇರಿ ತಂಕಬೆಟ್ಟು ,ಜೆ.ಸಿ.ಐ.ಉಪ್ಪುಂದ ಹಾಗೂ ಆಯುಷ್ಮಾನ್ ಆರೋಗ್ಯ ಮಂದಿರ (ಆಯುಷ್) ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೋಡು ಅವರ ಸಂಯುಕ್ತ ಆಶ್ರಯದಲ್ಲಿ 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಆಯೋಜಿಸಿದ 10 ದಿನಗಳ ಉಚಿತ ಯೋಗ ತರಬೇತಿಯ ಸಮಾರೋಪ ಸಮಾರಂಭ ಹಳಗೇರಿ ಜೋಗಿ ಮನೆ ವಠಾರದಲ್ಲಿ ನಡೆಯಿತು.
ಸಿದ್ಧಪೀಠ ಕೊಡಾಚಾದ್ರಿ ಪ್ರಧಾನ ಕಾರ್ಯದರ್ಶಿ
ಡಾ.ಕೇಶವ ಕೋಟೇಶ್ವರ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ.ಯೋಗ ತರಬೇತಿ ಶಿಬಿರದಂತಹ ಕಾರ್ಯಕ್ರಮಗಳು ಎಲ್ಲಾ ಪರಿಸರದಲ್ಲಿ ನಡೆಯಬೇಕು.ಸಮಾಜ ಸೇವೆ ಮಾಡುವಂತಹ ಮನೋಭಾವವನ್ನು ಎಲ್ಲರೂ ಬೆಳೆಸಿಕೊಳ್ಳುವುದರಿಂದ ಸಮಾಜ ಸುಧಾರಣೆಯನ್ನು ಮಾಡಬಹುದಾಗಿದೆ ಎಂದು ಹೇಳಿದರು.
ಯೋಗ ತರಬೇತುದಾರರಾದ ಶೇಖರ್ ಶೆಟ್ಟಿ ಅವರು ಯೋಗದ ಮಹತ್ವ ಕುರಿತು ಮಾತನಾಡಿ,ಭಾರತೀಯ ಪರಂಪರೆಯಿಂದ ನಡೆದುಬಂದಂತಹ ಯೋಗಕ್ಕೆ ಇಂದು ವಿಶ್ವ ಮಟ್ಟದಲ್ಲಿ ಮನ್ನಣೆ ದೊರೆತಿದೆ ಎಂದು ಹೇಳಿದರು.ನಿತ್ಯವೂ ಯೋಗ ಮಾಡುವುದರಿಂದ ದೈಹಿಕ ಆರೋಗ್ಯ ಕಾಪಾಡಿಕೊಳ್ಳುವುದರ ಜತೆಗೆ ಮಾನಸಿಕವಾಗಿ ನೆಮ್ಮದಿ ಜೀವನ ಕಾಣಬಹುದಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಜೋಗಿ ಮನೆ ಟ್ರಸ್ಟ್ ಅಧ್ಯಕ್ಷರಾದ ವಸಂತ ಜೋಗಿ ಅವರು ಮಾತನಾಡಿ,ಗ್ರಾಮೀಣ ಪ್ರದೇಶದಲ್ಲಿ ಯೋಗ ಶಿಬಿರಗಳನ್ನು ಆಯೋಜನೆ ಮಾಡುವುದರಿಂದ ಹಳ್ಳಿ ಭಾಗದ ಜನರಿಗೆ ಬಹಳಷ್ಟು ಪ್ರಯೋಜನ ವಾಗಲಿದೆ.ಯೋಗ ಶಿಬಿರಕ್ಕೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದರು.
ಆಯುಷ್ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಕಾಲ್ತೋಡು ಡಾ.ವೀಣಾ ಕಾರಂತ ಅವರು ಮಾತನಾಡಿ,ನಮ್ಮ ಸುತ್ತಲಿನ ಜನರಿಗೆ ಅನುಕೂರಕರ ಚಟುವಟಿಕೆಗಳನ್ನು ಮಾಡಿಕೊಂಡಿರುವುದರಿಂದ ಜನರ ಜೀವನ ಕ್ರಮ ಸುಧಾರಿಸುವುದರ ಜೊತೆಗೆ ಆದರ್ಶ ವ್ಯಕ್ತಿಯಾಗಿ ಬದುಕುಕಲು ಸಹಕಾರಿ ಆಗುತ್ತದೆ ಎಂದರು.
ಡಾ.ಸುರೇಶ್ ಕೆ.ಎನ್.ಅಧ್ಯಕ್ಷ ರು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಘಟಕ ತೀರ್ಥಹಳ್ಳಿ,S.S.L.C ಯಲ್ಲಿ ಹೆಚ್ಚಿನ ಅಂಕ ಗಳಿಸಿದ ಜೋಗಿ ಕುಟುಂಬದ ಕುಮಾರಿ ಕನ್ನಿಕಾ ಜೋಗಿ ಹಾಗೂ ಸರಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿಗಳಾದ ಡಾ.ವೀಣಾ ಕಾರಂತರವರನ್ನು ಸನ್ಮಾನಿಸಲಾಯಿತು. ತರಬೇತಿಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರ ಹಾಗೂ ಆಯುರ್ವೇದ, ಆಹಾರ,ಯೋಗ ಮಾಹಿತಿ ಐಯನ್ನೊಳಗೊಂಡ ಪುಸ್ತಕಗಳನ್ನು ವಿತರಿಸಲಾಯಿತು.JCI ಉಪ್ಪುಂದ ಇದರ ಅಧ್ಯಕ್ಷ ಮಂಜುನಾಥ ದೇವಾಡಿಗ, ಉದಯ ಡಿ.ಆರ್, ಪುರುಷೋತ್ತಮ ದಾಸ್ ಉಪ್ಪುಂದ
ಉಪಸ್ಥಿತರಿದ್ದರು.
ಶ್ವೇತಾ ಜೋಗಿ ಪ್ರಾರ್ಥಿಸಿದರು.ರಾಜೇಶ್ ಜೋಗಿ ಬಂಟಕಲ್ಲು ಸ್ವಾಗತಿಸಿದರು.
ಸಂತೋಷ ಮೊಗವೀರ ನಿರೂಪಿಸಿದರು.ಮಂಜುನಾಥ ಕೊಡೇರಿ ವಂದಿಸಿದರು.
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…
ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…
ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…
ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…