ಕುಂದಾಪುರ

ಯೋಗ ತರಬೇತಿ ಸಮಾರೋಪ ಸಮಾರಂಭ

Share

ಕುಂದಾಪುರ:ಜೋಗಿ ಮನೆ ಟ್ರಸ್ಟ್ ಹಳಗೇರಿ ತಂಕಬೆಟ್ಟು ,ಜೆ.ಸಿ.ಐ.ಉಪ್ಪುಂದ ಹಾಗೂ ಆಯುಷ್ಮಾನ್ ಆರೋಗ್ಯ ಮಂದಿರ (ಆಯುಷ್) ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೋಡು ಅವರ ಸಂಯುಕ್ತ ಆಶ್ರಯದಲ್ಲಿ 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಆಯೋಜಿಸಿದ 10 ದಿನಗಳ ಉಚಿತ ಯೋಗ ತರಬೇತಿಯ ಸಮಾರೋಪ ಸಮಾರಂಭ ಹಳಗೇರಿ ಜೋಗಿ ಮನೆ ವಠಾರದಲ್ಲಿ ನಡೆಯಿತು.
ಸಿದ್ಧಪೀಠ ಕೊಡಾಚಾದ್ರಿ ಪ್ರಧಾನ ಕಾರ್ಯದರ್ಶಿ
ಡಾ.ಕೇಶವ ಕೋಟೇಶ್ವರ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ.ಯೋಗ ತರಬೇತಿ ಶಿಬಿರದಂತಹ ಕಾರ್ಯಕ್ರಮಗಳು ಎಲ್ಲಾ ಪರಿಸರದಲ್ಲಿ ನಡೆಯಬೇಕು.ಸಮಾಜ ಸೇವೆ ಮಾಡುವಂತಹ ಮನೋಭಾವವನ್ನು ಎಲ್ಲರೂ ಬೆಳೆಸಿಕೊಳ್ಳುವುದರಿಂದ ಸಮಾಜ ಸುಧಾರಣೆಯನ್ನು ಮಾಡಬಹುದಾಗಿದೆ ಎಂದು ಹೇಳಿದರು.
ಯೋಗ ತರಬೇತುದಾರರಾದ ಶೇಖರ್ ಶೆಟ್ಟಿ ಅವರು ಯೋಗದ ಮಹತ್ವ ಕುರಿತು ಮಾತನಾಡಿ,ಭಾರತೀಯ ಪರಂಪರೆಯಿಂದ ನಡೆದುಬಂದಂತಹ ಯೋಗಕ್ಕೆ ಇಂದು ವಿಶ್ವ ಮಟ್ಟದಲ್ಲಿ ಮನ್ನಣೆ ದೊರೆತಿದೆ ಎಂದು ಹೇಳಿದರು.ನಿತ್ಯವೂ ಯೋಗ ಮಾಡುವುದರಿಂದ ದೈಹಿಕ ಆರೋಗ್ಯ ಕಾಪಾಡಿಕೊಳ್ಳುವುದರ ಜತೆಗೆ ಮಾನಸಿಕವಾಗಿ ನೆಮ್ಮದಿ ಜೀವನ ಕಾಣಬಹುದಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಜೋಗಿ ಮನೆ ಟ್ರಸ್ಟ್ ಅಧ್ಯಕ್ಷರಾದ ವಸಂತ ಜೋಗಿ ಅವರು ಮಾತನಾಡಿ,ಗ್ರಾಮೀಣ ಪ್ರದೇಶದಲ್ಲಿ ಯೋಗ ಶಿಬಿರಗಳನ್ನು ಆಯೋಜನೆ ಮಾಡುವುದರಿಂದ ಹಳ್ಳಿ ಭಾಗದ ಜನರಿಗೆ ಬಹಳಷ್ಟು ಪ್ರಯೋಜನ ವಾಗಲಿದೆ.ಯೋಗ ಶಿಬಿರಕ್ಕೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದರು.
ಆಯುಷ್ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಕಾಲ್ತೋಡು ಡಾ.ವೀಣಾ ಕಾರಂತ ಅವರು ಮಾತನಾಡಿ,ನಮ್ಮ ಸುತ್ತಲಿನ ಜನರಿಗೆ ಅನುಕೂರಕರ ಚಟುವಟಿಕೆಗಳನ್ನು ಮಾಡಿಕೊಂಡಿರುವುದರಿಂದ ಜನರ ಜೀವನ ಕ್ರಮ ಸುಧಾರಿಸುವುದರ ಜೊತೆಗೆ ಆದರ್ಶ ವ್ಯಕ್ತಿಯಾಗಿ ಬದುಕುಕಲು ಸಹಕಾರಿ ಆಗುತ್ತದೆ ಎಂದರು.
ಡಾ.ಸುರೇಶ್ ಕೆ.ಎನ್.ಅಧ್ಯಕ್ಷ ರು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಘಟಕ ತೀರ್ಥಹಳ್ಳಿ,S.S.L.C ಯಲ್ಲಿ ಹೆಚ್ಚಿನ ಅಂಕ ಗಳಿಸಿದ ಜೋಗಿ ಕುಟುಂಬದ ಕುಮಾರಿ ಕನ್ನಿಕಾ ಜೋಗಿ ‌ಹಾಗೂ ಸರಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿಗಳಾದ ಡಾ.ವೀಣಾ ಕಾರಂತರವರನ್ನು ಸನ್ಮಾನಿಸಲಾಯಿತು. ತರಬೇತಿಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರ ಹಾಗೂ ಆಯುರ್ವೇದ, ಆಹಾರ,ಯೋಗ ಮಾಹಿತಿ ಐಯನ್ನೊಳಗೊಂಡ ಪುಸ್ತಕಗಳನ್ನು ವಿತರಿಸಲಾಯಿತು.JCI ಉಪ್ಪುಂದ ಇದರ ಅಧ್ಯಕ್ಷ ಮಂಜುನಾಥ ದೇವಾಡಿಗ, ಉದಯ ಡಿ.ಆರ್, ಪುರುಷೋತ್ತಮ ದಾಸ್ ಉಪ್ಪುಂದ
ಉಪಸ್ಥಿತರಿದ್ದರು.
ಶ್ವೇತಾ ಜೋಗಿ ಪ್ರಾರ್ಥಿಸಿದರು.ರಾಜೇಶ್ ಜೋಗಿ ಬಂಟಕಲ್ಲು ಸ್ವಾಗತಿಸಿದರು.
ಸಂತೋಷ ಮೊಗವೀರ ನಿರೂಪಿಸಿದರು.ಮಂಜುನಾಥ ಕೊಡೇರಿ ವಂದಿಸಿದರು.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

4 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

4 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

5 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

5 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago