ಕುಂದಾಪುರ

ಯೋಗ ತರಬೇತಿ ಸಮಾರೋಪ ಸಮಾರಂಭ

Share

ಕುಂದಾಪುರ:ಜೋಗಿ ಮನೆ ಟ್ರಸ್ಟ್ ಹಳಗೇರಿ ತಂಕಬೆಟ್ಟು ,ಜೆ.ಸಿ.ಐ.ಉಪ್ಪುಂದ ಹಾಗೂ ಆಯುಷ್ಮಾನ್ ಆರೋಗ್ಯ ಮಂದಿರ (ಆಯುಷ್) ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೋಡು ಅವರ ಸಂಯುಕ್ತ ಆಶ್ರಯದಲ್ಲಿ 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಆಯೋಜಿಸಿದ 10 ದಿನಗಳ ಉಚಿತ ಯೋಗ ತರಬೇತಿಯ ಸಮಾರೋಪ ಸಮಾರಂಭ ಹಳಗೇರಿ ಜೋಗಿ ಮನೆ ವಠಾರದಲ್ಲಿ ನಡೆಯಿತು.
ಸಿದ್ಧಪೀಠ ಕೊಡಾಚಾದ್ರಿ ಪ್ರಧಾನ ಕಾರ್ಯದರ್ಶಿ
ಡಾ.ಕೇಶವ ಕೋಟೇಶ್ವರ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ.ಯೋಗ ತರಬೇತಿ ಶಿಬಿರದಂತಹ ಕಾರ್ಯಕ್ರಮಗಳು ಎಲ್ಲಾ ಪರಿಸರದಲ್ಲಿ ನಡೆಯಬೇಕು.ಸಮಾಜ ಸೇವೆ ಮಾಡುವಂತಹ ಮನೋಭಾವವನ್ನು ಎಲ್ಲರೂ ಬೆಳೆಸಿಕೊಳ್ಳುವುದರಿಂದ ಸಮಾಜ ಸುಧಾರಣೆಯನ್ನು ಮಾಡಬಹುದಾಗಿದೆ ಎಂದು ಹೇಳಿದರು.
ಯೋಗ ತರಬೇತುದಾರರಾದ ಶೇಖರ್ ಶೆಟ್ಟಿ ಅವರು ಯೋಗದ ಮಹತ್ವ ಕುರಿತು ಮಾತನಾಡಿ,ಭಾರತೀಯ ಪರಂಪರೆಯಿಂದ ನಡೆದುಬಂದಂತಹ ಯೋಗಕ್ಕೆ ಇಂದು ವಿಶ್ವ ಮಟ್ಟದಲ್ಲಿ ಮನ್ನಣೆ ದೊರೆತಿದೆ ಎಂದು ಹೇಳಿದರು.ನಿತ್ಯವೂ ಯೋಗ ಮಾಡುವುದರಿಂದ ದೈಹಿಕ ಆರೋಗ್ಯ ಕಾಪಾಡಿಕೊಳ್ಳುವುದರ ಜತೆಗೆ ಮಾನಸಿಕವಾಗಿ ನೆಮ್ಮದಿ ಜೀವನ ಕಾಣಬಹುದಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಜೋಗಿ ಮನೆ ಟ್ರಸ್ಟ್ ಅಧ್ಯಕ್ಷರಾದ ವಸಂತ ಜೋಗಿ ಅವರು ಮಾತನಾಡಿ,ಗ್ರಾಮೀಣ ಪ್ರದೇಶದಲ್ಲಿ ಯೋಗ ಶಿಬಿರಗಳನ್ನು ಆಯೋಜನೆ ಮಾಡುವುದರಿಂದ ಹಳ್ಳಿ ಭಾಗದ ಜನರಿಗೆ ಬಹಳಷ್ಟು ಪ್ರಯೋಜನ ವಾಗಲಿದೆ.ಯೋಗ ಶಿಬಿರಕ್ಕೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದರು.
ಆಯುಷ್ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಕಾಲ್ತೋಡು ಡಾ.ವೀಣಾ ಕಾರಂತ ಅವರು ಮಾತನಾಡಿ,ನಮ್ಮ ಸುತ್ತಲಿನ ಜನರಿಗೆ ಅನುಕೂರಕರ ಚಟುವಟಿಕೆಗಳನ್ನು ಮಾಡಿಕೊಂಡಿರುವುದರಿಂದ ಜನರ ಜೀವನ ಕ್ರಮ ಸುಧಾರಿಸುವುದರ ಜೊತೆಗೆ ಆದರ್ಶ ವ್ಯಕ್ತಿಯಾಗಿ ಬದುಕುಕಲು ಸಹಕಾರಿ ಆಗುತ್ತದೆ ಎಂದರು.
ಡಾ.ಸುರೇಶ್ ಕೆ.ಎನ್.ಅಧ್ಯಕ್ಷ ರು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಘಟಕ ತೀರ್ಥಹಳ್ಳಿ,S.S.L.C ಯಲ್ಲಿ ಹೆಚ್ಚಿನ ಅಂಕ ಗಳಿಸಿದ ಜೋಗಿ ಕುಟುಂಬದ ಕುಮಾರಿ ಕನ್ನಿಕಾ ಜೋಗಿ ‌ಹಾಗೂ ಸರಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿಗಳಾದ ಡಾ.ವೀಣಾ ಕಾರಂತರವರನ್ನು ಸನ್ಮಾನಿಸಲಾಯಿತು. ತರಬೇತಿಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರ ಹಾಗೂ ಆಯುರ್ವೇದ, ಆಹಾರ,ಯೋಗ ಮಾಹಿತಿ ಐಯನ್ನೊಳಗೊಂಡ ಪುಸ್ತಕಗಳನ್ನು ವಿತರಿಸಲಾಯಿತು.JCI ಉಪ್ಪುಂದ ಇದರ ಅಧ್ಯಕ್ಷ ಮಂಜುನಾಥ ದೇವಾಡಿಗ, ಉದಯ ಡಿ.ಆರ್, ಪುರುಷೋತ್ತಮ ದಾಸ್ ಉಪ್ಪುಂದ
ಉಪಸ್ಥಿತರಿದ್ದರು.
ಶ್ವೇತಾ ಜೋಗಿ ಪ್ರಾರ್ಥಿಸಿದರು.ರಾಜೇಶ್ ಜೋಗಿ ಬಂಟಕಲ್ಲು ಸ್ವಾಗತಿಸಿದರು.
ಸಂತೋಷ ಮೊಗವೀರ ನಿರೂಪಿಸಿದರು.ಮಂಜುನಾಥ ಕೊಡೇರಿ ವಂದಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago