ಕುಂದಾಪುರ

ಸಮುದ್ರದಲ್ಲಿ ಛದ್ರಗೊಂಡ ಮೀನುಗಾರಿಕಾ ಬೋಟ್

Share

ಗಂಗೊಳ್ಳಿ:ಭಟ್ಕಳ ತಾಲೂಕಿನ ವ್ಯಾಪ್ತಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸಮಯದಲ್ಲಿ ಅಪಘಾತಕ್ಕೆ ಈಡಾಗಿದ್ದ ಮಾಲ್ತೀದೇವಿ-2 ಎನ್ನುವ ಬೋಟ್ ಗಂಗೊಳ್ಳಿ ಸಮುದ್ರ ಕಿನಾರೆಯಲ್ಲಿ ಅಲೆಗಳ ಹೊಡೆತಕ್ಕೆ ಮಂಗಳವಾರ ಛದ್ರಗೊಂಡಿದೆ.ಬೋಟ್‍ನ ಪ್ರಮುಖ ಭಾಗಗಳು ಸಮುದ್ರ ಪಾಲಾಗಿದೆ.
ಮೇ.16 ರಂದು ಮಲ್ಪೆಯಿಂದ ಭಟ್ಕಳ ಭಾಗಗಕ್ಕೆ ಮೀನುಗಾರಿಕೆಗೆ ತೆರಳಿದ್ದ ಮಾಲ್ತೀ ದೇವಿ-2 ಎನ್ನುವ ಬೋಟ್‍ಗೆ ಮೇ.17 ರಂದು ಬೆಳಗಿನ ಜಾವಾ 5 ಗಂಟೆ ಸುಮಾರಿಗೆ ಅದೆ ಜಾಗದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ದುರ್ಗಾ ಎನ್ನುವ ಬೋಟ್ ಡಿಕ್ಕಿ ಹೊಡೆದಿದೆ.ಅಪಘಾತಕ್ಕೆ ಈಡಾಗಿದ್ದ ಬೋಟ್‍ನ್ನು ಪಾಂಚಜನ್ಯ ಹಾಗೂ ದುರ್ಗಾ ಎನ್ನುವ ಬೋಟ್‍ನ ಸಹಾಯದಿಂದ ಕಚೇರಿಗೆ ಕಟ್ಟಲೆಂದು ಗಂಗೊಳ್ಳಿ ಸಮೀಪ ಕರೆಗೆ ತರುವಾಗ ಗಂಗೊಳ್ಳಿ ಅಳಿವೆ ಯಿಂದ ಸುಮಾರು 10 ಮಾರು ದೂರದಲ್ಲಿ ಮಾಲ್ತೀ ದೇವಿ-2 ಬೋಟ್‍ನ ಮುಕ್ಕಾಲು ಭಾಗ ನೀರಿನಲ್ಲಿ ಮುಳುಗಿ ಹೋಗಿತ್ತು.ವಿಶೇಷ ಕಾರ್ಯಾಚರಣೆ ಮೂಲಕ ಬೋಟ್‍ನ್ನು ಸುರಕ್ಷಿತವಾಗಿ ದಡಕ್ಕೆ ತರಬೇಕ್ಕೆನ್ನುವ ಪ್ರಯತ್ನ ವಿಫಲವಾಗಿದ್ದು.ಹವಾಮಾನ ವೈಪರಿತ್ಯದಿಂದಾಗಿ ಸಮುದ್ರದಲ್ಲಿ ಅಲೆಗಳ ಅಬ್ಬರ ಅಧಿಕವಾಗಿದ್ದ ಕಾರಣ.ಅಲೆಗಳ ಹೊಡೆತಕ್ಕೆ ಬೋಟ್ ಛದ್ರಗೊಂಡಿದೆ.
ಡಿಸೇಲ್ ಟ್ಯಾಂಕ್ ಸಮುದ್ರ ಪಾಲು:ದುರಂತದಲ್ಲಿ ಬೋಟ್‍ನಲ್ಲಿದ್ದ 2,500 ಲೀಟರ್ ತುಂಬಿದ್ದ ಡಿಸೇಲ್ ಟ್ಯಾಂಕ್ ಸಮುದ್ರ ಪಾಲಾಗಿದೆ.ಸಮದ್ರದಲ್ಲಿ ಡಿಸೇಲ್ ಸೋರಿಕೆ ಆಗುವ ಭೀತಿ ಎದುರಾಗಿದೆ.ಬೋಟ್ ದುರಂತದಲ್ಲಿ ಮಾಲೀಕರಿಗೆ 20 ಲಕ್ಷ.ಕ್ಕೂ ಅಧಿಕ ನಷ್ಟ ಉಂಟಾಗಿದೆ.

Advertisement

Share
Team Kundapur Times

Recent Posts

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 days ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 week ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 weeks ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 weeks ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

3 weeks ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

3 weeks ago