ಗಂಗೊಳ್ಳಿ:ಭಟ್ಕಳ ತಾಲೂಕಿನ ವ್ಯಾಪ್ತಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸಮಯದಲ್ಲಿ ಅಪಘಾತಕ್ಕೆ ಈಡಾಗಿದ್ದ ಮಾಲ್ತೀದೇವಿ-2 ಎನ್ನುವ ಬೋಟ್ ಗಂಗೊಳ್ಳಿ ಸಮುದ್ರ ಕಿನಾರೆಯಲ್ಲಿ ಅಲೆಗಳ ಹೊಡೆತಕ್ಕೆ ಮಂಗಳವಾರ ಛದ್ರಗೊಂಡಿದೆ.ಬೋಟ್ನ ಪ್ರಮುಖ ಭಾಗಗಳು ಸಮುದ್ರ ಪಾಲಾಗಿದೆ.
ಮೇ.16 ರಂದು ಮಲ್ಪೆಯಿಂದ ಭಟ್ಕಳ ಭಾಗಗಕ್ಕೆ ಮೀನುಗಾರಿಕೆಗೆ ತೆರಳಿದ್ದ ಮಾಲ್ತೀ ದೇವಿ-2 ಎನ್ನುವ ಬೋಟ್ಗೆ ಮೇ.17 ರಂದು ಬೆಳಗಿನ ಜಾವಾ 5 ಗಂಟೆ ಸುಮಾರಿಗೆ ಅದೆ ಜಾಗದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ದುರ್ಗಾ ಎನ್ನುವ ಬೋಟ್ ಡಿಕ್ಕಿ ಹೊಡೆದಿದೆ.ಅಪಘಾತಕ್ಕೆ ಈಡಾಗಿದ್ದ ಬೋಟ್ನ್ನು ಪಾಂಚಜನ್ಯ ಹಾಗೂ ದುರ್ಗಾ ಎನ್ನುವ ಬೋಟ್ನ ಸಹಾಯದಿಂದ ಕಚೇರಿಗೆ ಕಟ್ಟಲೆಂದು ಗಂಗೊಳ್ಳಿ ಸಮೀಪ ಕರೆಗೆ ತರುವಾಗ ಗಂಗೊಳ್ಳಿ ಅಳಿವೆ ಯಿಂದ ಸುಮಾರು 10 ಮಾರು ದೂರದಲ್ಲಿ ಮಾಲ್ತೀ ದೇವಿ-2 ಬೋಟ್ನ ಮುಕ್ಕಾಲು ಭಾಗ ನೀರಿನಲ್ಲಿ ಮುಳುಗಿ ಹೋಗಿತ್ತು.ವಿಶೇಷ ಕಾರ್ಯಾಚರಣೆ ಮೂಲಕ ಬೋಟ್ನ್ನು ಸುರಕ್ಷಿತವಾಗಿ ದಡಕ್ಕೆ ತರಬೇಕ್ಕೆನ್ನುವ ಪ್ರಯತ್ನ ವಿಫಲವಾಗಿದ್ದು.ಹವಾಮಾನ ವೈಪರಿತ್ಯದಿಂದಾಗಿ ಸಮುದ್ರದಲ್ಲಿ ಅಲೆಗಳ ಅಬ್ಬರ ಅಧಿಕವಾಗಿದ್ದ ಕಾರಣ.ಅಲೆಗಳ ಹೊಡೆತಕ್ಕೆ ಬೋಟ್ ಛದ್ರಗೊಂಡಿದೆ.
ಡಿಸೇಲ್ ಟ್ಯಾಂಕ್ ಸಮುದ್ರ ಪಾಲು:ದುರಂತದಲ್ಲಿ ಬೋಟ್ನಲ್ಲಿದ್ದ 2,500 ಲೀಟರ್ ತುಂಬಿದ್ದ ಡಿಸೇಲ್ ಟ್ಯಾಂಕ್ ಸಮುದ್ರ ಪಾಲಾಗಿದೆ.ಸಮದ್ರದಲ್ಲಿ ಡಿಸೇಲ್ ಸೋರಿಕೆ ಆಗುವ ಭೀತಿ ಎದುರಾಗಿದೆ.ಬೋಟ್ ದುರಂತದಲ್ಲಿ ಮಾಲೀಕರಿಗೆ 20 ಲಕ್ಷ.ಕ್ಕೂ ಅಧಿಕ ನಷ್ಟ ಉಂಟಾಗಿದೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…