ಕುಂದಾಪುರ

ಅನುಮಾನಾಸ್ಪದ ಸಾವು ಶಂಕೆ,ಹೂತ ಮೃತದೇಹ ಮೇಲಕ್ಕೆತ್ತಿ ಮರುತನಿಖೆ

Share

ಮಂಗಳೂರು:ತಮ್ಮನ ಸಾವಿನ ಬಗ್ಗೆ ಅಣ್ಣ ಅನುಮಾನ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಮರು ತನಿಖೆಗಾಗಿ ನ್ಯಾಯಾಲಯಲದ ಆದೇಶದಂತೆ ಮಂಜೇಶ್ವರ-ವಿಟ್ಲ ಪೊಲೀಸರು ಹಾಗೂ ಆರೋಗ್ಯಾಧಿಕಾರಿಗಳ ಸಮ್ಮುಖದಲ್ಲಿ ಕನ್ಯಾನ ಮಸೀದಿಯ ದಫನ ಭೂಮಿಯಿಂದ ಮೃತದೇಹವನ್ನು ಮೇಲಕ್ಕೆತ್ತಿದ್ದ ಘಟನೆ ನಡೆದಿದೆ.
ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನ ನಿವಾಸಿ ಅಶ್ರಫ್(44)ಎಂಬವರು ಮಂಜೇಶ್ವರ ಠಾಣಾ ವ್ಯಾಪ್ತಿಯ ಸುಂಕದಕಟ್ಟೆ ಮಜೀರ್ ಪಳ್ಳದಲ್ಲಿ ಪತ್ನಿಯ ಜೊತೆ ವಾಸವಾಗಿದ್ದು ಗೂಡಂಗಡಿ ವ್ಯವಹಾರ ನಡೆಸಿಕೊಂಡಿದ್ದರು.
ಮೇ 5ರಂದು ಮನೆಯಲ್ಲಿ ಊಟ ಮಾಡಿ ಮಲಗಿದ್ದ ಅಶ್ರಫ್ ಅವರು ಮರುದಿನ ಅಂದರೆ ಮೇ 6ರಂದು ಮೃತಪಟ್ಟಿದ್ದರು.ಆದರೆ ತರಾತುರಿಯಲ್ಲಿ ಪತ್ನಿ ಕಡೆಯವರು ಅಶ್ರಫ್ ಮೃತದೇಹವನ್ನು ಕನ್ಯಾನದ ಬಂಡಿಯ ರಹ್ಮಾನಿಯಾ ಜುಮ್ಮಾ ಮಸೀದಿ ಆವರಣದ ದಫನ ಭೂಮಿಗೆ ತಂದು ಅಂತ್ಯಕ್ರಿಯೆ ನಡೆಸಿದ್ದರು. ಮೃತರ ಅಣ್ಣ ಮಹಾರಾಷ್ಟ್ರದ ಪೂನಾದಲ್ಲಿದ್ದ ಇಬ್ರಾಹಿಂ ಅವರು ತಮ್ಮನ ಸಾವು ಸಹಜ ಸಾವಲ್ಲ ಎಂದು ಬಲವಾದ ಅನುಮಾನ ವ್ಯಕ್ತಪಡಿಸಿ ಮಂಜೇಶ್ವರ ಪೊಲೀಸರಿಗೆ ಮೂರು ತನಿಖೆ ಮಾಡುವಂತೆ ದೂರು ನೀಡಿದ್ದರು. ದೂರಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶ ಪಡೆದ ಮಂಜೇಶ್ವರ ಪೊಲೀಸರು ಮಂಗಳೂರು ಯೇನಪೋಯ ಆಸ್ಪತ್ರೆಯ ಫಾರೆನ್ಸಿಕ್ ತಜ್ಞರು, ಬಂಟ್ವಾಳ ತಹಶೀಲ್ದಾರ್ ಮತ್ತು ವಿಟ್ಲ ಪೊಲೀಸರ ಸಹಕಾರದಲ್ಲಿ ಮಸೀದಿಯ ದಫನ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಿದ್ದ ಸ್ಥಳದಿಂದ ಅಶ್ರಫ್ ಅವರ ಮೃತದೇಹವನ್ನು ಮೇಲಕ್ಕೆತ್ತಿ ದ್ದಾರೆ. ಸುದ್ಧಿ ತಿಳಿದು ಸಾಕಷ್ಟು ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು ಅಶ್ರಫ್ ಸಾವಿನ ಸತ್ಯಾಂಶ ತನಿಖೆಯಲ್ಲಿ ಬಯಲಾಗಬೇಕಿದೆ.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

3 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago