ಕುಂದಾಪುರ

ಶ್ರೀಗಣೇಶ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ 10% ಡಿವಿಡೆಂಟ್ ಘೋಷಣೆ

Share

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಶ್ರೀಗಣೇಶ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅದರ ಸಭೆ ಜಿ.ಎಸ್.ಆಚಾರ್ಯ ಸ್ಮಾರಕ ಸಭಾಭನದಲ್ಲಿ ಸಂಘದ ಅಧ್ಯಕ್ಷ ಮುರಳೀಧರ ಐತಾಳ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು.
ಕೃಷಿಕರು,ಕೂಲಿ ಕಾರ್ಮಿಕರು,ಬಡ ವರ್ಗದ ಜನರಿಗೆ ಅನುಕೂಲವಾಗುವ ಉದ್ದೇಶದಿಂದ ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ಕಳೆದ ಏಳು ವರ್ಷಗಳ ಹಿಂದೆ ಆರಂಭಗೊಂಡಿರುವ ಶ್ರೀಗಣೇಶ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಜನೋಪಯೋಗಿ ಕೆಲಸಗಳ ಮುಖಾಂತರ ಹೆಸರನ್ನು ಗಳಿಸಿದೆ.ಅಶಕ್ತರಿಗೆ ನೆರವು,ವಿದ್ಯಾರ್ಥಿ ವೇತನ,ಆರೋಗ್ಯ ಶಿಬಿರ ಆಯೋಜನೆ,ಶಾಲೆಗಳಿಗೆ ಪಿಠೋಪಕರಣಗಳನ್ನು ಕೊಡುಗೆಯಾಗಿ ನೀಡುತ್ತಾ ಸಂಘವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದೆ.
ಶ್ರೀಗಣೇಶ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಮುರಳೀಧರ ಐತಾಳ್ ಮಾತನಾಡಿ,ಪ್ರಸ್ತುತ ಸಂಘವು 900 ಸದಸ್ಯರುಗಳನ್ನು ಹೊಂದಿದ್ದು ವಾರ್ಷಿಕವಾಗಿ 8.ಕೋಟಿ ವ್ಯವಾಹಾರವನ್ನು ನಡೆಸಲಾಗಿದೆ.ವರದಿ ವರ್ಷದಲ್ಲಿ 7,19,000 ಲಾಭಾಂಶವನ್ನು ಗಳಿಸಲಾಗಿದ್ದು ಸಂಘದ ಸದಸ್ಯರಿಗೆ 10% ಡಿವಿಡೆಂಟ್ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು.ಕ್ಲಪ್ತ ಸಮಯದಲ್ಲಿ ಸಾಲ ಮರುಪಾತಿ ಮಾಡುವವರಿಗೆ 1% ರಿಯಾತಿ ದರದಲ್ಲಿ ಬಡ್ಡಿ ನೀಡಲಾಗುತ್ತಿದೆ ಎಂದರು.5,98,18,000 ರೂ ಅನ್ನು ಸಾಲ ನೀಡಲಾಗಿದ್ದು.96 ಶೇಕಡಾ ಸಾಲವನ್ನು ವಸೂಲಾತಿ ಮಾಡಲಾಗಿದೆ.ಸಂಘವು ವಿವಿಧ ಸಹಕಾರ ಸಂಘಗಳಲ್ಲಿ 1,59,11,000 ರಷ್ಟು ಹೂಡಿಕೆಯನ್ನು ಮಾಡಿದೆ.13,20,400 ರೂ ಅನ್ನು ಪಾಲು ಹಣ ಹೊಂದಲಾಗಿದೆ ಎಂದು ವಿವಿರಿಸಿದರು.
ಈ ಸಂದರ್ಭದ್ಲಲಿ ಸಂಘದ ಉಪಾಧ್ಯಕ್ಷ ರವೀಶ ಹೊಳ್ಳ,ಸಿ.ಇ.ಒ ಅಶ್ವಿನಿ,ಗೌರವ ಸಲಹೆಗಾರ ವಿಶ್ವಂಭರ ಐತಾಳ್,ಲೆಕ್ಕಿಕ ಶ್ರೀಕರ ಐತಾಳ್ ಮತ್ತು ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 days ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 days ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago