ಉಡುಪಿ:ಉಡುಪಿಯಿಂದ ಬ್ರಹ್ಮಾವರದ ಕಡೆಗೆ ಚಲಿಸುತ್ತಿದ್ದ ಬಸ್ಸೊಂದು ಸ್ವರ್ಣ ನದಿ ಕಲ್ಯಾಣ್ಪುರ ಸೇತುವೆಯ ಗಾರ್ಡ್ ಗೆ ಡಿಕ್ಕಿ ಹೊಡೆದಿದೆ.ಅಪಘಾತದ ರಭಸಕ್ಕೆ ಸೇತುವೆ ಗಾರ್ಡ್ ಮುರಿದು ನದಿಗೆ ಬಿದ್ದಿದೆ.ನದಿಗೆ ಉರುಳಿ ಬೀಳುವ ಪರಿಸ್ಥಿತಿಯಲ್ಲಿದ್ದ ಬಸ್ ಅಪಾಯದಿಂದ ಪಾರಾಗಿದೆ.ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.
ಅದೆ ಸಮಯದಲ್ಲಿ ಸೇತುವೆ ಕೆಳಗಡೆ ದೋಣಿಯಲ್ಲಿ ಮೀನುಗಾರಿಕೆ ಮಾಡುತಿದ್ದ ಶಂಕರ ಎನ್ನುವವರ ಮೇಲೆ ಸಿಮೆಂಟು ಕಂಬದ ತುಂಡ್ಡು ಮುರಿದು ಬಿದ್ದು ಕೈಗೆ ಹೊಡೆತ ಬಿದ್ದಿದೆ.
ರಾಷ್ಟ್ರೀಯ ಹೆದ್ದಾರಿ 66 ರ ಕಲ್ಯಾಣಪುರ ಸೇತುವೆ 1963 ರಲ್ಲಿ ನಿರ್ಮಾಣವಾಗಿದ್ದು 6 ದಶಗಳಷ್ಟು ಹಳೆಯದಾಗಿದೆ. ಬಹಳಷ್ಟು ಅಪಘಾತಗಳು ಆಗಾಗ್ಗೆ ಸಂಭವಿಸುತ್ತಿದ್ದು ಸೇತುವೆ ಶಿಥಿಲಾವಸ್ಥೆಗೆ ತಲುಪಿದೆ.ಸೇತುವೆ ಅಡಿ ಭಾಗದಲ್ಲಿ ಅಲ್ಲಲ್ಲಿ ಕಾಂಕ್ರೇಟ್ ಬಿರುಕು ಬಿಟ್ಟಿದ್ದು ಸೇತುವೆಯನ್ನು ದುರುಸ್ಥಿಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…