ಕುಂದಾಪುರ:ಅನಾರೋಗ್ಯ ಪೀಡಿತರಾಗಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ಶಂಕರನಾರಾಯಣ ಗ್ರಾಮದ ಉದಯ ಆಚಾರ್ಯ ಎನ್ನುವ ವ್ಯಕ್ತಿಗೆ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಖುದ್ದಾಗಿ ರಕ್ತದಾನವನ್ನು ಮಾಡುವುದರ ಮುಖೇನ ಸಾಮಾಜಿಕ ಕಾಳಜಿ ಮೆರೆದಿದ್ದಾರೆ.
ಕುಂದಾಪುರ ತಾಲೂಕಿನ ಶಂಕರನಾರಾಯಣ ಭಾಗದ ಉದಯ್ ಆಚಾರ್ಯ ಎಂಬವರು ಅನಾರೋಗ್ಯ ನಿಮಿತ್ತ ಕುಂದಾಪ್ರದ ಆಸ್ಪತ್ರೆಗೆ ದಾಖಲಾಗಿದ್ದರು.ಅವರಿಗೆ ತುರ್ತಾಗಿ ರಕ್ತದ ಅವಶ್ಯಕತೆವಿದ್ದು.ಬ್ಲಡ್ ಬ್ಯಾಂಕ್ಗಳಲ್ಲಿ ವಿಚಾರಿಸಿದಾಗ ರಕ್ತದ ಕೊರತೆಯಿಂದ ಸೂಕ್ತ ಸಮಯದಲ್ಲಿ ರೋಗಿಗೆ ರಕ್ತ ಸಿಗಲಿಲ್ಲ.ರೋಗಿಗೆ ತುರ್ತು ಸಂದರ್ಭದಲ್ಲಿ ರಕ್ತ ನೀಡಲೆ ಬೇಕಾಗಿದ್ದರಿಂದ ಕುಟುಂಬ ಸಂಕಷ್ಟಕ್ಕೆ ಸಿಲುಕಿತ್ತು.ಯಾವುದೇ ರೀತಿಯ ಪ್ರಯತ್ನದ ನಡುವೆ ರಕ್ತ ಸಿಗದ ಕಾರಣ ರೋಗಿಯ ನೆರವಿಗೆ ನಿಂತವರೇ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು.
ರೋಗಿಯ ಕುಟುಂಬದವರ ತುರ್ತು ಕೆರೆಗೆ ಸ್ಪಂದಿಸಿದ
ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರೇ ಖುದ್ದಾಗಿ ರಾತ್ರಿಗೆ ಕುಂದಾಪ್ರ ಸರ್ಕಾರಿ ಆಸ್ಪತ್ರೆಗೆ ಆಗಮಿಸಿ ರಕ್ತದಾನ ಮಾಡಿದ್ದಾರೆ.ಶಾಸಕರ ಕಾರ್ಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ.
ರಕ್ತದ ಅವಶ್ಯಕತೆ ಬಹಳಷ್ಟು ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ರಕ್ತದಾನ ಮಾಡಲು ಮುಂದೆ ಬರಬೇಕೆಂದು ಶಾಸಕರು ವಿನಂತಿಸಿ ಕೊಂಡಿದ್ದಾರೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…