ಕುಂದಾಪುರ

ವಿದ್ಯಾ ಪೋಷಕ್ ಮನೆ ಹಸ್ತಾಂತರ

Share

ಕುಂದಾಪುರ:ಯಕ್ಷಗಾನ ಕಲಾರಂಗ ಉಡುಪಿ,ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‍ಮೆಂಟ್,ಟ್ರೈನಿಂಗ್ ಆ್ಯಂಡ್ ರಿಸರ್ಚ್ ಸೆಂಟರ್,ಯಕ್ಷನಿಧಿ,ವಿದ್ಯಾ ಪೋಷಕ್ ಮನೆ ಹಸ್ತಾಂತರ ,ಯಕ್ಷಶಿಕ್ಷಣ ಹಾಗೂ ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ ಗಂಟಿಹೊಳೆ ಅವರ ಪ್ರಾಯೋಜಕತ್ವದಲ್ಲಿ ದಾನಿಗಳ ನೆರವಿನಿಂದ ಹೆಮ್ಮಾಡಿ ಗ್ರಾಮದ ಕಟ್ಟು ಎಂಬಲ್ಲಿ ನಿರ್ಮಿಸಿದ ನೂತನೆ ಮನೆ ಸರಸ್ವತಿ ನಿಲಯ ಅದರ ಹಸ್ತಾಂತ ಕಾರ್ಯಕ್ರಮ ಗುರುವಾರ ನಡೆಯಿತು.
ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಜ್ಯೋತಿ ಬೆಳಗಿಸುವುದರ ಮುಖೇನ ನೂತನ ಮನೆಯನ್ನು ಉದ್ಘಾಟಿಸಿ ಮಾತನಾಡಿ,ಅತ್ಯಂತ ಬಡತನದಲ್ಲಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ವಾಸಕ್ಕೆ ಯೋಗ್ಯವಾದ ಮನೆಯನ್ನು ನಿರ್ಮಿಸಿಕೊಡುವುದರ ಮುಖೇನ ವಿಶಿಷ್ಟವಾದ ರೀತಿಯಲ್ಲಿ ಸಾಮಾಜಿಕ ಕಾರ್ಯವನ್ನು ಮಾಡುತ್ತಿರುವ ಯಕ್ಷಗಾನ ಕಲಾರಂಗ ಅವರ ಸೇವೆ ಅನನ್ಯವಾದದ್ದು ಎಂದು ಶ್ಲಾಘಿಸಿದರು.
ಕೃಷ್ಣಪ್ರಸಾದ್ ಅಡ್ಯಂತಾಯ ಅಧ್ಯಕ್ಷತೆ ವಹಿಸಿದ್ದರು.ಬಿ.ಎಸ್ ಸುರೇಶ್ ಶೆಟ್ಟಿ,ವೆಂಕಟೇಶ ಕಿಣಿ,ಯು.ವಿಶ್ವನಾಥ ಶೆಣೈ,ಯು.ಎಸ್ ರಾಜಗೋಪಾಲ ಆಚಾರ್ಯ,ಹೆಮ್ಮಾಡಿ ಪಂಚಾಯಿತಿ ಅಧ್ಯಕ್ಷೆ ನೇತ್ರಾವತಿ,ರಾಜೇಶ್,ಗೋಪಾಲ ಶೆಟ್ಟಿ,ಎಸ್.ವಿ ಭಟ್,ವಿ.ಜಿ ಶೆಟ್ಟಿ,ಪ್ರೋ.ಕೆ ಸದಾಶಿವ ರಾವ್,ಶೋಭಾ ಜಿ ಪುತ್ರನ್,ಹೆಮ್ಮಾಡಿ ಶಾಲಾ ಮುಖ್ಯೋಪಾಧ್ಯಾಯ ಮಂಜು ಕಾಳವಾರ,ನರಸಿಂಹ ಮೂರ್ತಿ,ಬಿ.ಭುವನಪ್ರಸಾದ್ ಹೆಗ್ಡೆ,ಅನಂತ ರಾಜ್ ಉಪಾಧ್ಯಾಯ,ಸಂತೋಷ ಕುಮಾರ್ ಶೆಟ್ಟಿ,ಎ.ಅಜಿತ್ ಕುಮಾರ್,ಸುದರ್ಶನ ಬಾಯರಿ ಉಪಸ್ಥಿತರಿದ್ದರು.ಎಂ.ಗಂಗಾಧರ ರಾವ್ ಸ್ವಾಗತಿಸಿದರು.ಮುರಲಿ ಕಡೆಕಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಎಚ್.ಎನ್ ಶೃಂಗೇಶ್ವರ ಸಹಕರಿಸಿದರು.ನಾರಾಯಣ ಹೆಗಡೆ ವಂದಿಸಿದರು.ದ್ವಿತೀಯ ಪಿ.ಯು.ಸಿ ಯಲ್ಲಿ ವ್ಯಾಸಂಗ ಮಾಡುತ್ತಿರುವ ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮದ ಕಟ್ಟು ನಿವಾಸಿ ಸಿಂಚನಾ ಅವರಿಗೆ ವಿದ್ಯಾ ಪೋಷಕ್ ಮನೆಯನ್ನು ಹಸ್ತಾಂತರ ಮಾಡಲಾಯಿತು.

Advertisement

Share
Team Kundapur Times

Recent Posts

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

1 month ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

1 month ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

2 months ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…

2 months ago