ಕುಂದಾಪುರ

ವಿದ್ಯಾ ಪೋಷಕ್ ಮನೆ ಹಸ್ತಾಂತರ

Share

Advertisement
Advertisement
Advertisement

ಕುಂದಾಪುರ:ಯಕ್ಷಗಾನ ಕಲಾರಂಗ ಉಡುಪಿ,ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‍ಮೆಂಟ್,ಟ್ರೈನಿಂಗ್ ಆ್ಯಂಡ್ ರಿಸರ್ಚ್ ಸೆಂಟರ್,ಯಕ್ಷನಿಧಿ,ವಿದ್ಯಾ ಪೋಷಕ್ ಮನೆ ಹಸ್ತಾಂತರ ,ಯಕ್ಷಶಿಕ್ಷಣ ಹಾಗೂ ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ ಗಂಟಿಹೊಳೆ ಅವರ ಪ್ರಾಯೋಜಕತ್ವದಲ್ಲಿ ದಾನಿಗಳ ನೆರವಿನಿಂದ ಹೆಮ್ಮಾಡಿ ಗ್ರಾಮದ ಕಟ್ಟು ಎಂಬಲ್ಲಿ ನಿರ್ಮಿಸಿದ ನೂತನೆ ಮನೆ ಸರಸ್ವತಿ ನಿಲಯ ಅದರ ಹಸ್ತಾಂತ ಕಾರ್ಯಕ್ರಮ ಗುರುವಾರ ನಡೆಯಿತು.
ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಜ್ಯೋತಿ ಬೆಳಗಿಸುವುದರ ಮುಖೇನ ನೂತನ ಮನೆಯನ್ನು ಉದ್ಘಾಟಿಸಿ ಮಾತನಾಡಿ,ಅತ್ಯಂತ ಬಡತನದಲ್ಲಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ವಾಸಕ್ಕೆ ಯೋಗ್ಯವಾದ ಮನೆಯನ್ನು ನಿರ್ಮಿಸಿಕೊಡುವುದರ ಮುಖೇನ ವಿಶಿಷ್ಟವಾದ ರೀತಿಯಲ್ಲಿ ಸಾಮಾಜಿಕ ಕಾರ್ಯವನ್ನು ಮಾಡುತ್ತಿರುವ ಯಕ್ಷಗಾನ ಕಲಾರಂಗ ಅವರ ಸೇವೆ ಅನನ್ಯವಾದದ್ದು ಎಂದು ಶ್ಲಾಘಿಸಿದರು.
ಕೃಷ್ಣಪ್ರಸಾದ್ ಅಡ್ಯಂತಾಯ ಅಧ್ಯಕ್ಷತೆ ವಹಿಸಿದ್ದರು.ಬಿ.ಎಸ್ ಸುರೇಶ್ ಶೆಟ್ಟಿ,ವೆಂಕಟೇಶ ಕಿಣಿ,ಯು.ವಿಶ್ವನಾಥ ಶೆಣೈ,ಯು.ಎಸ್ ರಾಜಗೋಪಾಲ ಆಚಾರ್ಯ,ಹೆಮ್ಮಾಡಿ ಪಂಚಾಯಿತಿ ಅಧ್ಯಕ್ಷೆ ನೇತ್ರಾವತಿ,ರಾಜೇಶ್,ಗೋಪಾಲ ಶೆಟ್ಟಿ,ಎಸ್.ವಿ ಭಟ್,ವಿ.ಜಿ ಶೆಟ್ಟಿ,ಪ್ರೋ.ಕೆ ಸದಾಶಿವ ರಾವ್,ಶೋಭಾ ಜಿ ಪುತ್ರನ್,ಹೆಮ್ಮಾಡಿ ಶಾಲಾ ಮುಖ್ಯೋಪಾಧ್ಯಾಯ ಮಂಜು ಕಾಳವಾರ,ನರಸಿಂಹ ಮೂರ್ತಿ,ಬಿ.ಭುವನಪ್ರಸಾದ್ ಹೆಗ್ಡೆ,ಅನಂತ ರಾಜ್ ಉಪಾಧ್ಯಾಯ,ಸಂತೋಷ ಕುಮಾರ್ ಶೆಟ್ಟಿ,ಎ.ಅಜಿತ್ ಕುಮಾರ್,ಸುದರ್ಶನ ಬಾಯರಿ ಉಪಸ್ಥಿತರಿದ್ದರು.ಎಂ.ಗಂಗಾಧರ ರಾವ್ ಸ್ವಾಗತಿಸಿದರು.ಮುರಲಿ ಕಡೆಕಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಎಚ್.ಎನ್ ಶೃಂಗೇಶ್ವರ ಸಹಕರಿಸಿದರು.ನಾರಾಯಣ ಹೆಗಡೆ ವಂದಿಸಿದರು.ದ್ವಿತೀಯ ಪಿ.ಯು.ಸಿ ಯಲ್ಲಿ ವ್ಯಾಸಂಗ ಮಾಡುತ್ತಿರುವ ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮದ ಕಟ್ಟು ನಿವಾಸಿ ಸಿಂಚನಾ ಅವರಿಗೆ ವಿದ್ಯಾ ಪೋಷಕ್ ಮನೆಯನ್ನು ಹಸ್ತಾಂತರ ಮಾಡಲಾಯಿತು.

Advertisement
Advertisement
Advertisement

Share
Team Kundapur Times

Recent Posts

ಬ್ಯಾಗ್ ಮರಳಿಸುವಂತೆ ಮನವಿ

ಕುಂದಾಪುರ:ಮಾರಣಕಟ್ಟೆ ಮೇಳದ ಯಕ್ಷಗಾನ ಕಲಾವಿದರಾದ ಐರ್ಬೈಲು ಆನಂದ ಶೆಟ್ಟಿ ಅವರ ಮಗಳು ಸೀಮಾ ಶೆಟ್ಟಿ ಎಂಬುವರು ಏ.೨೩ ರ ಬುಧವಾರ…

1 week ago

ಕುಂದಾಪುರ\ತೀರ್ಥಹಳ್ಳಿ:ಸ್ಕೂಟಿಗೆ ಬಸ್ ಡಿಕ್ಕಿ,ವ್ಯಕ್ತಿ ಸಾವು

ಕುಂದಾಪುರ:ಆಗುAಬೆ ಕಡೆ ಯಿಂದ ತೀರ್ಥ ಹಳ್ಳಿಗೆ ಸಾಗುತ್ತಿದ್ದ ಬಸ್ ತೀರ್ಥಹಳ್ಳಿ ಎಂಬಲ್ಲಿ ಕುಂದಾಪುರ ಕಡೆಗೆ ಸಾಗುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದ…

2 weeks ago

ಆಲಸ್ಯಕರ ಜೀವನ ಪದ್ಧತಿಯಿಂದ ಹಣದುಬ್ಬರ ಏರಿಕೆ, ದುಡಿಯುವ ಕೈಗಳಿಂದ ಅಭಿವೃದ್ಧಿ:ಡಾ. ಹೆಚ್.ಎಸ್.ಶೆಟ್ಟಿ

ಕುಂದಾಪುರ:ನಮ್ಮ ದೇಶದಲ್ಲಿ ಆಹಾರ ಹಣದುಬ್ಬರ ಕ್ಕೆ ಸರ್ಕಾರ ಕೈಗೊಳ್ಳುವ ಕ್ರಮಗಳ ಜೊತೆಗೆ ದುಡಿಯುವ ಕೈಗಳಿಗಿಂತ ಉಣ್ಣುವ ಕೈಗಳು ಹೆಚ್ಚಾಗಿದೆ.ಆಲಸ್ಯಕರ ಜೀವನ…

2 weeks ago

ಫಿಯರ್ಲೆಸ್ ಸೆಕ್ಯೂರಿಟಿ ಸಿಸ್ಟಮ್ ಕುಂದಾಪುರದಲ್ಲಿ ಶುಭಾರಂಭ

ಕುಂದಾಪುರ:ಸಿಸಿಟಿವಿ ಮತ್ತು ಮಾನಿಟರಿಂಗ್ ಕ್ಷೇತ್ರದಲ್ಲಿ ಈಗಾಗಲೇ ಬಹಳಷ್ಟು ಹೆಸರನ್ನು ಗಳಿಸಿರುವ ದಿಗಂತ ಶೆಟ್ಟಿ ಮತ್ತು ದಿಕ್ಷೀತ್ ಶೆಟ್ಟಿ ಮಾಲಿಕತ್ವದಲ್ಲಿ ಫಿಯರ್ಲೆಸ್…

3 weeks ago

ಕೆಸಿಡಿಸಿ ವಿಭಾಗೀಯ ವ್ಯವಸ್ಥಾಪಕ ಉದಯ ಜೋಗಿ ಹೃದಯಘಾತದಿಂದ ನಿಧನ

ಕುಂದಾಪುರ:ಕೆಸಿಡಿಸಿ ವಿಭಾಗೀಯ ವ್ಯವಸ್ಥಾಪಕ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಕುಂದಾಪುರ ತಾಲೂಕಿನ ಕಟ್‌ಬೇಲ್ತೂರು ನಿವಾಸಿಯಾಗಿರುವ ಬೈಂದೂರಿನ ಉದಯ ಕುಮಾರ್ ಜೋಗಿ…

4 weeks ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ತಂತ್ರಜ್ಞಾನ ಮಾಹಿತಿ ಕಾರ್ಯಗಾರ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಉದಯೋನ್ಮುಖ ತಂತ್ರಜ್ಞಾನಗಳು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಡೈರೆಕ್ಟರ್ ಇಂಚಾರ್ಜ್,ಪಿಪಿಸಿ…

4 weeks ago