ಕುಂದಾಪುರ

ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ

Share

ಕುಂದಾಪುರ:ಮನೋಸೋ ಇಚ್ಛೆ ಮರಗಳನ್ನು ಕಡಿದು ಭೂಮಿಯನ್ನು ಬಗೆದಿದ್ದರ ಪರಿಣಾಮ ಪ್ರಕೃತಿಯಲ್ಲಿ ಅಸಮಾತೋಲನ ಉಂಟಾಗಿ ಮಳೆ,ಬೆಳೆ ಕುಂಠಿತವಾಗುತ್ತಿದೆ.ಶುದ್ಧ ಗಾಳಿ ಸೇವನೆಗೂ ಪರಿತಪಿಸುವಂತೆ ಆಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.
ಬೈಂದೂರು ವಲಯದ ಬಡಾಕೆರೆ ಉತ್ತರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡಗಳನ್ನು ವಿತರಿಸಿ ಅವರು ಮಾತನಾಡಿದರು.
ಭೂಮಿ ಹಸಿರಾಗಿದ್ದಾರೆ ಮಾತ್ರ ಮಾನವ ಸಹಿತ ಜೀವಿ ಸಂಕುಲಗಳು ಬದುಕಬಹುದಾಗಿದೆ.ಗಿಡಗಳನ್ನು ನೆಟ್ಟು ಬೆಳೆಸಿ ಪೋಷಿಸುವುದರ ಮೂಲಕ ಪ್ರಕೃತಿ ಉಳಿವಿಗೆ ಎಲ್ಲರೂ ಕೈಜೋಡಿಸಬೇಕೆಂದು ಹೇಳಿದರು.
ವಲಯಾ ಅರಣ್ಯಾಧಿಕಾರಿ ಕಿರಣ್ ಬಾಬು,ಬಡಾಕೆರೆಯನ್ನು ಶಾಲೆಯನ್ನು ದತ್ತು ಸ್ವೀಕಾರ ಮಾಡಿರುವ ಪ್ರಾಂತೀಯ ಧರ್ಮಾಧಿಕಾರಿಗಳು ಶ್ರೀಶಾರದ ಪೀಠಂ ಶೃಂಗೇರಿ ವೇದ ಮೂರ್ತಿ ಲೋಕೇಶ್ ಅಡಿಗ,ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಾದ ಬಾಬು ದೇವಾಡಿಗ,ಆರ್.ಎಫ್.ಒ ದಿಲೀಫ್,ವಕೀಲರಾದ ವಿಶ್ವನಾಥ ಶೆಟ್ಟಿ ಗಂಟಿಹೊಳೆ,ಮಹೇಂದ್ರ ಪೂಜಾರಿ,ಅಬ್ದುಲ್ ಖಾದರ್,ಯೂಸಫ್,ವಾಸು ಪೂಜಾರಿ,ವೇದ ಮೂರ್ತಿ ನಾಗೇಂದ್ರ ಅಡಿಗ,ಪೆÇೀಷಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಶ್ರೀಧರ ಬಡಾಕೆರೆ ಸ್ವಾಗತಿಸಿದರು.ವೇದ ಮೂರ್ತಿ ಲೋಕೇಶ್ ಅಡಿಗ ನಿರೂಪಿಸಿದರು.ಮುಖ್ಯೋಪಾಧ್ಯಾಯಿನಿ ರೇಣುಕಾ ವಂದಿಸಿದರು.ಶಾಲಾ ಆವರಣದಲ್ಲಿ ಹೊಸ ಕೈ ತೋಟವನ್ನು ರಚಿಸಲಾಯಿತು.ಹಣ್ಣಿನ ಗಿಡಗಳನ್ನು ವಿತರಿಸಲಾಯಿತು.ಆರ್ಯ ಬಿಲ್ಡ್‍ಕೇರ್ ಮಾಲೀಕರಾದ ನಾಗೇಂದ್ರ ದೇವಾಡಿಗ,ಲಂಬೋದರ ಶೆಟ್ಟಿ,ಆರ್.ಕೆ ರಾಘು ಉಪ್ಪುಂದ ಅವರು ಗಿಡಗಳನ್ನು ಕೊಡುಗೆಯಾಗಿ ನೀಡಿದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago