ಕುಂದಾಪುರ:ಕಳೆದ ಮೂರು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಕುಂದಾಪುರ ತಾಲೂಕಿನ ಹೊಸಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚುಗೋಡು ಭಗತ್ ನಗರ ನಿವಾಸಿ ವಾಸುದೇವ ಖಾರ್ವಿ ಅವರ ಮನೆ ಹಿಂಭಾಗದ ಕಂಪೌಂಡ್ ಕುಸಿದ ಪರಿಣಾಮ ಮನೆ ಹಿಂಬದಿ ರೂಂ ಸಹಿತ ಒಂದು ಶೆಡ್ಡ್ ನೆಲಕ್ಕೆ ಉರುಳಿ ಬಿದ್ದು ಧಾರಾಶಯವಾಗಿದೆ.ಅವರ ಆರ್ಸಿಸಿ ಮನೆಗೆ ಭಾಗಶಃ ಹಾನಿ ಉಂಟಾಗಿದ್ದು ಅಂದಾಜು 10.ಲಕ್ಷ.ಕ್ಕೂ ಅಧಿಕ ನಷ್ಟ ಸಂಭವಿಸಿದ ಘಟನೆ ಶನಿವಾರ ನಡೆದಿದೆ.
ಜೂನ್ ಆರಂಭದಲ್ಲೆ ಚುರುಕುನಿಂದ ಕೂಡಿದ ಮಳೆ ಕಳೆದ ಮೂರು ದಿನಗಳಿಂದ ಜೋರಾಗಿ ಸುರಿಯುತ್ತಿದೆ.ಮಳೆ ಆರ್ಭಟಕ್ಕೆ ಕಂಚುಗೋಡು ಭಗತ್ ನಗರ ವಾಸುದೇವ ಖಾರ್ವಿ ಅವರ ಮನೆ ಕಂಪೌಂಡ್ ಕುಸಿದು ಬಿದ್ದು ಒಂದು ರೂಂ ಸಹಿತ,ಶೆಡ್ಡ್ ನೆಲಕ್ಕೆ ಉರುಳಿ ಬಿದ್ದಿದೆ.ಆರ್ಸಿಸಿ ಮನೆ ಬಿರುಕು ಬಿಟ್ಟಿದೆ.ಶೌಚಾಲಯ ಬೀಳುವ ಹಂತದಲ್ಲಿದೆ.ಸದ್ಯ ಮನೆಯವರು ಸಂಬಂಧಿಕರ ಮನೆಯಲ್ಲಿ ಆಶ್ರಯವನ್ನು ಪಡೆದಿದ್ದಾರೆ.ಘಟನಾ ಸ್ಥಳಕ್ಕೆ ಕುಂದಾಪುರ ತಹಶೀಲ್ದಾರ್ ಶೋಭಾ ಲಕ್ಷ್ಮೀ,ಆರ್.ಐ ರಾಘವೇಂದ್ರ,ಹೊಸಾಡು ವಿ.ಎ ಮಾಧವ ಕೊಠಾರಿ,ಉಗ್ರಾಣಿ ಕುಶಲ ಪೂಜಾರಿ,ಪಂಚಾಯಿತಿ ಸಿಬ್ಬಂದಿ ಶಿವನಂದಾ ಭೇಟಿ ಪರಿಶೀಲನೆ ನಡೆಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…