ಕುಂದಾಪುರ

ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮ ಬ್ರಹ್ಮವಾರದಲ್ಲಿ ಉದ್ಘಾಟನೆ

Share

ಬ್ರಹ್ಮಾವರ:ಯುನೈಟೆಡ್ ಟೊಯೊಟ ವತಿಯಿಂದ ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮ ಬ್ರಹ್ಮಾವರದಲ್ಲಿ ಸೋಮವಾರ ನಡೆಯಿತು.
ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮ ಜೂ.10 ರಿಂದ ಜೂ.16 ರ ವರೆಗೆ ಬ್ರಹ್ಮವಾರದಲ್ಲಿ ನಡೆಯಲಿದೆ.
ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮದ ಅಂಗವಾಗಿ ಗ್ರಾಹಕರಿಗೆ ಆಕರ್ಷಕ ಆಫರ್ ಗಳನ್ನು ನೀಡಲಾಗುತ್ತಿದ್ದು.ತಮ್ಮ ಹಳೆ ಕಾರನ್ನು ನೀಡಿ ಉತ್ತಮ ಬೆಲೆಯನ್ನು ಪಡೆದುಕೊಂಡು ಹೊಸ ಕಾರನ್ನು ಖರೀದಿಸಲು ಅವಕಾಶವನ್ನು ಕಲ್ಪಿಸಲಾಗಿದೆ.ಕಡಿಮೆ ಬಡ್ಡಿ ದರದಲ್ಲಿ ಸ್ಥಳದಲ್ಲೆ ಕಾರ್ ಲೋನ್ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ.
ಗ್ಲಾಂಝಾ ಕಾರ್ ಮೇಲೆ ಒಂದು ಲಕ್ಷದ ವರೆಗೆ ಹಾಗೂ ಹೈರೈಡರ್ ಕಾರ್ ಮೇಲೆ 75 ಸಾವಿರ ರೂಪಾಯಿ ವರೆಗೆ ಡಿಸ್ಕೌಂಟ್ ಆಫರ್ ಕಂಪನಿ ಕಡೆಯಿಂದ ನೀಡಲಾಗುತ್ತಿದೆ.
ಪೋರ್ರ್ಚುನರ್ ಕಾರ್ ಖರೀದಿಸುವವರಿಗೆ ಒಂದು ಲಕ್ಷದ ವರೆಗೆ ರೀಯಾತಿ ದೊರಕಲಿದೆ.
ಬ್ರಹ್ಮಾವರದಲ್ಲಿ
ಇದೆ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ನಡೆಯುತ್ತಿರುವ ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಭಾಗವಹಿಸಿ ಟೊಯೊಟಾ ಕಂಪನಿ ಕೊಡ ಮಾಡುವ ವಿಶೇಷ ಆಫರ್ ಸೌಲಭ್ಯವನ್ನು ಪಡೆಯಬಹುದಾಗಿದೆ.ಕಾರ್ ಟೆಸ್ಟ್ ಡ್ರೈವ್ ಕೂಡ ಮಾಡಲು ಅವಕಾವನ್ನು ಕೂಡ ಕಲ್ಪಿಸಲಾಗಿದೆ.
ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮಾ ಆರ್ ಹೆಗ್ಡೆ ಅವರು ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.
ಕಾರೋತ್ಸವ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.
ಹೊಸದಾಗಿ ಬಿಡುಗಡೆ ಗೊಂಡಿರುವ ಟೈಸರ್ ಕಾರನ್ನು ಲಾಂಚ್ ಮಾಡಲಾಯಿತು.
ಉದ್ಯಾವರದ
ಯುನೈಟೆಡ್ ಟೊಯೊಟಾ ಬ್ರಾಂಚ್ ನ ಎಚ್.ಆರ್ ಮೇಘಾಚಂದ್ರ ಅವರು ಮಾತನಾಡಿ,ಟೊಯೊಟಾ ಕಂಪನಿ ಯಿಂದ ಆಯೋಜನೆ ಮಾಡುತ್ತಿರುವ ಕಾರೋತ್ಸವ ಕಾರ್ಯಕ್ರಮ ಜೂನ್.16 ರ ತನಕ ನಡೆಯಲಿದೆ.
ಇದೆ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮವನ್ನು ಬ್ರಹ್ಮವಾರ ಜಂಕ್ಷನ್ ನಲ್ಲಿ ಆಯೋಜನೆ ಮಾಡಲಾಗಿದ್ದು.ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಭಾಗವಹಿಸಬೇಕೆಂದು ಕೇಳಿಕೊಂಡರು.
ಬ್ಯಾಂಕ್ ಆಫ್ ಬರೋಡ ಬ್ರಹ್ಮಾವರ ಶಾಖೆ ಮ್ಯಾನೇಜರ್ ಭರತ್ ಅವರು ಮಾತನಾಡಿ, ಗುಣಮಟ್ಟದ ಸೇವೆ ಮತ್ತು ಉತ್ತಮ ರೀತಿಯ ಕಾರ್ ಅನ್ನು ಉತ್ಪಾದನೆ ಮಾಡುವ ಟೊಯೊಟಾ ಕಂಪನಿ ಜನ ಪ್ರೀತಿಗೆ ಒಳಗಾಗಿದೆ.ಬ್ಯಾಂಕ್ ಆಫ್ ಬರೋಡ ಮತ್ತು ಟೊಯೊಟಾ ಕಂಪನಿ ಒಂಡಬಂಡಿಕೆಯನ್ನು ಮಾಡಿಕೊಂಡಿದ್ದು ಗ್ರಾಹಕರಿಗೆ ಕಡಿಮೆ ಬಡ್ಡಿ ದರದಲ್ಲಿ ಸ್ಥಳದಲ್ಲೆ ಲೋನ್ ಕೊಡುವ ವ್ಯವಸ್ಥೆಯನ್ನು ಮಾಡಲಾಗಿದೆ.ಗ್ರಾಹಕರು ತಮ್ಮ ನೆಚ್ಚಿನ ಕಾರ್ ಅನ್ನು ಸ್ಥಳದಲ್ಲೇ ಕೊಂಡು ಕೊಳ್ಳಬಹುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಂಬಾ ಹೋಟೆಲ್ ಟೂರ್ ಮತ್ತು ಟ್ರಾವೆಲ್ಸ್ ಮಾಲೀಕರಾದ ಸುರೇಶ,ಬಸ್ ಮಾಲೀಕರಾದ ಸತೀಶ್ ಶೆಟ್ಟಿ, ಟ್ಯಾಕ್ಸಿ ಮಾಲೀಕರ ಸಂಘದ ಗೌರವಾಧ್ಯಕ್ಷರಾದ ಸಂತೋಷ, ಟೊಯೊಟಾ ಕಂಪನಿ ಸಿಬ್ಬಂದಿಗಳಾದ ಶರೋನ್, ಯೋಗೀಶ್ ಮತ್ತಿತರರು ಉಪಸ್ಥಿತರಿದ್ದರು.
ದೇಶ ವಿದೇಶಗಳಲ್ಲಿ ಮನೆ ಮಾತಾಗಿರುವ ಯುನಿಟೆಡ್ ಟೋಯೊಟ ಕಂಪನಿ ಕಾರ್ ಉದ್ಯಮದಲ್ಲಿ ತನ್ನದೇ ರೀತಿಯಲ್ಲಿ ಕೊಡುಗೆಯನ್ನು ನೀಡಿದೆ.ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಕಾರ್ ಗಳನ್ನು ಮಾರಾಟ ಮಾಡಿ ಕೊಂಡು ಬಂದಿರುವ ಯುನಿಟೆಡ್ ಟೋಯೊಟ ಕಂಪನಿ ಗ್ರಾಹಕರ ನೆಚ್ಚಿನ ಕಂಪೆನಿಗಳಲ್ಲಿ ಒಂದಾಗಿದೆ.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago