ಕುಂದಾಪುರ

ಜೂ.15 ರಂದು ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಪ್ರಧಾನ ಕಛೇರಿ ನವೀಕೃತ ಮೇಲಂತಸ್ತಿನ ಕಟ್ಟಡ ಉದ್ಘಾಟನಾ ಸಮಾರಂಭ

Share

ಕುಂದಾಪುರ:ಬೈಂದೂರು ತಾಲೂಕಿನ ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಪ್ರಧಾನ ಕಛೇರಿ ಅದರ ಮೇಲಂತಸ್ತಿನ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ಜೂನ್.15 ರ ಶನಿವಾರ ದಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘವು ಉತ್ತಮ ರೀತಿಯಲ್ಲಿ ಬ್ಯಾಂಕಿಂಗ್ ಸೇವೆಯನ್ನು ನೀಡುವುದರ ಮುಖೇನ ಜನಪ್ರೀತಿ ಗಳಿಸಿದೆ.

ಸಂಘದ ಸದಸ್ಯರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡುವುದರ ಜತೆಗೆ ಆರೋಗ್ಯ ಶಿಬಿರ,ರಕ್ತದಾನ ಶಿಬಿರ,ಐ ಕ್ಯಾಂಪ್ ಆಯೋಜನೆ ಮಾಡುವುದರ ಮುಖೇನ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದೆ.ರಾಷ್ಟ್ರೀಕೃತ ಬ್ಯಾಂಕ್‍ಗಳಿಗಿಂತಲೂ ಗುಣಮಟ್ಟದ ಸೇವೆಯನ್ನು ನೀಡುತ್ತಿರುವ ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ಜನರ ಅಚ್ಚುಮೆಚ್ಚಿನ ಸಂಘಗಳೊಂದಾಗಿ ಗುರುತಿಸಿಕೊಂಡಿದೆ.ಜೂ.15 ರ ಶನಿವಾರ ದಂದು ಸಂಘದ ಪ್ರಧಾನ ಕಛೇರಿ ನಾವುಂದ ಅದರ ಮೇಲಂತಸ್ತಿನ ನವೀಕೃತ ಕಟ್ಟಡದ ಉದ್ಘಾಟನಾ ಕಾರ್ಯ ನಡೆಯಲಿದೆ.
ಸಂಘದ ಪ್ರಧಾನ ಕಛೇರಿ ನವೀಕೃತ ಕಟ್ಟಡ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಸಭಾ ಕಾರ್ಯಕ್ರಮ ಜರುಗಲಿದೆ.ಮಧ್ಯಾಹ್ನ 2 ಗಂಟೆ ಯಿಂದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಯಕ್ಷ ರಾಘವ ಜನ್ಸಾಲೆ ಪ್ರತಿಷ್ಠಾನ ವತಿಯಿಂದ ನಾಗಶ್ರೀ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ.

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ನವೀಕೃತ ಕಟ್ಟಡವನ್ನು ಉದ್ಘಾಟನೆ ಮಾಡಲಿದ್ದಾರೆ.ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಅಧ್ಯಕ್ಷತೆ ವಹಿಸಿಸಲಿದ್ದಾರೆ.ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ ಮತ್ತು ಬಿ.ಎಂ ಸುಕುಮಾರ ಶೆಟ್ಟಿ,ದ.ಕ ಜಿಲ್ಲಾ ಸಹಕಾರಿ ಬ್ಯಾಂಕ್ ನಿರ್ದೇಶಕ ಮಹೇಶ್ ಹೆಗ್ಡೆ,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಸೇರಿದಂತೆ ಅತಿಥಿ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ರಾಜು.ಎಸ್ ಪೂಜಾರಿ ಅವರು ತಿಳಿಸಿದ್ದಾರೆ.

Advertisement

Share
Team Kundapur Times

Recent Posts

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

6 days ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

1 month ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

3 months ago