ಕುಂದಾಪುರ

ಅಣಬೆ ಕೃಷಿಯಲ್ಲಿ ಯಶಸ್ವಿ ಸಾಧನೆ

Share

ಕುಂದಾಪುರ:ಬದುಕಿನಲ್ಲಿ ಏನಾದರೂ ಸಾಧಿಸಬೇಕು ಎನ್ನುವ ಛಲವನ್ನು ಹೊಂದಿರುವ ಬೈಂದೂರು ತಾಲೂಕಿನ ನಾವುಂದ ಗ್ರಾಮದ ಕುದ್ರುಕೋಡು ನಿವಾಸಿ ಲಂಬೋದರ ಶೆಟ್ಟಿ ಮತ್ತು ರಾಘು ಪೂಜಾರಿ ಅವರು ಅಣಬೆ ಕೃಷಿಯಲ್ಲಿ ಸ್ಫೂರ್ತಿದಾಯಕವಾಗಿ ಹೆಜ್ಜೆಯನ್ನು ಇಡುವುದರ ಮುಖೇನ ಯಶಸ್ವಿಯಾಗಿದ್ದಾರೆ.
ಉದ್ಯೋಗಕ್ಕಾಗಿ ದೂರ ದೂರದ ಊರಿಗೆ ತೆರಳದೆ ತಮ್ಮ ಊರಿನಲ್ಲಿ ಇದ್ದು ಕೊಂಡು ಏನಾದರೂ ಸಾಧಿಸಬೇಕು ಎನ್ನುವ ಹಂಬಲವನ್ನು ಹೊಂದಿರುವ ಯುವಕರಿಬ್ಬರು ವಿನೂತನ ಮಾದರಿಯಲ್ಲಿ “ಆರ್ಯ ಮಶ್ರೂಮ್ ಪ್ಲಾಂಟ್” ಅನ್ನು ಮಾಡಿದ್ದಾರೆ,ಇವರ ಫಾರ್ಮ್‍ನಲ್ಲಿ ಉತ್ಕøಷ್ಟ ಗುಣಮಟ್ಟದ ಅಣಬೆಗಳು ದೊರೆಯುತ್ತದೆ.ರಿಯಾತಿ ದರದಲ್ಲಿ ಮಾರಾಟವನ್ನು ಮಾಡಲಾಗುತ್ತಿದ್ದು ಅಣಬೆ ಪ್ರೀಯರು ಇವರ ಫಾರ್ಮ್ ಹೌಸ್‍ಗೆ ಹೋಗಿ ನೆರವಾಗಿ ಖರೀದಿಸಬಹುದು.ಉಪ್ಪಿನ ಕಾಯಿ,ಅಣಬೆ ಪೌಢರ್ ಸಹಿತ ನಾನಾ ರೀತಿಯ ಖಾದ್ಯಗಳಲ್ಲಿ ಬಳಕೆ ಮಾಡುತ್ತಾರೆ.ಔಷಧೀಯ ಗುಣಗಳನ್ನು ಹೊಂದಿರುವ ಅಣಬೆ ಪೌಷ್ಟಿಕಯುಕ್ತ ಆಹಾರ ಕೂಡ ಹೌದು.ಸುಮಾರು ಐದು ಸಾವಿರ ಯೂನಿಟ್ ಅಣಬೆ ಇವರ ಫಾರ್ಮ್ ಹೌಸ್‍ನಲ್ಲಿ ಬೆಳೆಯುತ್ತಿದೆ.
ಆರ್ಯ ಮಶ್ರೂಮ್ ಪ್ಲಾಂಟ್ ಕೃಷಿಕರಾದ ಲಂಬೋದರ ಶೆಟ್ಟಿ ಅವರು ಮಾತನಾಡಿ,ಬಹಳಷ್ಟು ಮಹಾತ್ವಾಕಾಂಕ್ಷೆಯನ್ನು ಇಟ್ಟುಕೊಂಡು ಅಣಬೆ ಕೃಷಿಯನ್ನು ಮಾಡಲಾಗಿದ್ದು,ಕೃಷಿ ಜೊತೆಗೆ ಉದ್ಯೋಗ ಸೃಷ್ಟಿ ಮಾಡುವುದು ನಮ್ಮ ಗುರಿಯಾಗಿದೆ.ನಮ್ಮನ್ನು ಪ್ರೋತ್ಸಾಹಿಸಬೇಕೆಂದು ಕೇಳಿಕೊಂಡರು.
ಆರ್ಯ ಮಶ್ರೂಮ್ ಪ್ಲಾಂಟ್‍ನ ಇನ್ನೊರ್ವ ಕೃಷಿಕರಾದ ರಾಘವ ಪೂಜಾರಿ ಮಾತನಾಡಿ,ಉದ್ಯೋಗದ ದೃಷ್ಟಿಯಿಂದ ಮತ್ತು ಕೃಷಿ ಮೇಲಿನ ಆಸಕ್ತಿಯಿಂದಾಗಿ ವಿನೂತನ ಮಾದರಿಯಲ್ಲಿ ಅಣಬೆ ಕೃಷಿಯನ್ನು ಮಾಡಲಾಗಿದೆ.ತಾವೆಲ್ಲರೂ ನಮಗೆ ಬೆಂಬಲವನ್ನು ನೀಡಬೇಕೆಂದರು.
ನಾಗೇಂದ್ರ ದೇವಾಡಿಗ ಮಾತನಾಡಿ,ಗ್ರಾಮೀಣ ಪ್ರದೇಶದಲ್ಲಿ ವಿನೂತನ ಮಾದರಿಯಲ್ಲಿ ಅಣಬೆ ಕೃಷಿಯನ್ನು ಮಾಡಲಾಗಿದ್ದು.ಉತ್ತಮ ರೀತಿಯಲ್ಲಿ ನಿರ್ವಹಣೆಯನ್ನು ಕೂಡ ಮಾಡಲಾಗುತ್ತಿದೆ.ಅಣಬೆಗೆ ಜಾಗತಿಕವಾಗಿ ಮಣ್ಣನೆ ಇರುವುದರಿಂದ ಮಾರುಕಟ್ಟೆಯಲ್ಲಿ ಕೂಡ ಒಳ್ಳೆ ಬೇಡಿಕೆ ಇದೆ ಎಂದರು.

Advertisement

Share
Team Kundapur Times

Recent Posts

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 days ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

3 days ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

1 week ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

3 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago