ಕುಂದಾಪುರ

ಅಣಬೆ ಕೃಷಿಯಲ್ಲಿ ಯಶಸ್ವಿ ಸಾಧನೆ

Share

ಕುಂದಾಪುರ:ಬದುಕಿನಲ್ಲಿ ಏನಾದರೂ ಸಾಧಿಸಬೇಕು ಎನ್ನುವ ಛಲವನ್ನು ಹೊಂದಿರುವ ಬೈಂದೂರು ತಾಲೂಕಿನ ನಾವುಂದ ಗ್ರಾಮದ ಕುದ್ರುಕೋಡು ನಿವಾಸಿ ಲಂಬೋದರ ಶೆಟ್ಟಿ ಮತ್ತು ರಾಘು ಪೂಜಾರಿ ಅವರು ಅಣಬೆ ಕೃಷಿಯಲ್ಲಿ ಸ್ಫೂರ್ತಿದಾಯಕವಾಗಿ ಹೆಜ್ಜೆಯನ್ನು ಇಡುವುದರ ಮುಖೇನ ಯಶಸ್ವಿಯಾಗಿದ್ದಾರೆ.
ಉದ್ಯೋಗಕ್ಕಾಗಿ ದೂರ ದೂರದ ಊರಿಗೆ ತೆರಳದೆ ತಮ್ಮ ಊರಿನಲ್ಲಿ ಇದ್ದು ಕೊಂಡು ಏನಾದರೂ ಸಾಧಿಸಬೇಕು ಎನ್ನುವ ಹಂಬಲವನ್ನು ಹೊಂದಿರುವ ಯುವಕರಿಬ್ಬರು ವಿನೂತನ ಮಾದರಿಯಲ್ಲಿ “ಆರ್ಯ ಮಶ್ರೂಮ್ ಪ್ಲಾಂಟ್” ಅನ್ನು ಮಾಡಿದ್ದಾರೆ,ಇವರ ಫಾರ್ಮ್‍ನಲ್ಲಿ ಉತ್ಕøಷ್ಟ ಗುಣಮಟ್ಟದ ಅಣಬೆಗಳು ದೊರೆಯುತ್ತದೆ.ರಿಯಾತಿ ದರದಲ್ಲಿ ಮಾರಾಟವನ್ನು ಮಾಡಲಾಗುತ್ತಿದ್ದು ಅಣಬೆ ಪ್ರೀಯರು ಇವರ ಫಾರ್ಮ್ ಹೌಸ್‍ಗೆ ಹೋಗಿ ನೆರವಾಗಿ ಖರೀದಿಸಬಹುದು.ಉಪ್ಪಿನ ಕಾಯಿ,ಅಣಬೆ ಪೌಢರ್ ಸಹಿತ ನಾನಾ ರೀತಿಯ ಖಾದ್ಯಗಳಲ್ಲಿ ಬಳಕೆ ಮಾಡುತ್ತಾರೆ.ಔಷಧೀಯ ಗುಣಗಳನ್ನು ಹೊಂದಿರುವ ಅಣಬೆ ಪೌಷ್ಟಿಕಯುಕ್ತ ಆಹಾರ ಕೂಡ ಹೌದು.ಸುಮಾರು ಐದು ಸಾವಿರ ಯೂನಿಟ್ ಅಣಬೆ ಇವರ ಫಾರ್ಮ್ ಹೌಸ್‍ನಲ್ಲಿ ಬೆಳೆಯುತ್ತಿದೆ.
ಆರ್ಯ ಮಶ್ರೂಮ್ ಪ್ಲಾಂಟ್ ಕೃಷಿಕರಾದ ಲಂಬೋದರ ಶೆಟ್ಟಿ ಅವರು ಮಾತನಾಡಿ,ಬಹಳಷ್ಟು ಮಹಾತ್ವಾಕಾಂಕ್ಷೆಯನ್ನು ಇಟ್ಟುಕೊಂಡು ಅಣಬೆ ಕೃಷಿಯನ್ನು ಮಾಡಲಾಗಿದ್ದು,ಕೃಷಿ ಜೊತೆಗೆ ಉದ್ಯೋಗ ಸೃಷ್ಟಿ ಮಾಡುವುದು ನಮ್ಮ ಗುರಿಯಾಗಿದೆ.ನಮ್ಮನ್ನು ಪ್ರೋತ್ಸಾಹಿಸಬೇಕೆಂದು ಕೇಳಿಕೊಂಡರು.
ಆರ್ಯ ಮಶ್ರೂಮ್ ಪ್ಲಾಂಟ್‍ನ ಇನ್ನೊರ್ವ ಕೃಷಿಕರಾದ ರಾಘವ ಪೂಜಾರಿ ಮಾತನಾಡಿ,ಉದ್ಯೋಗದ ದೃಷ್ಟಿಯಿಂದ ಮತ್ತು ಕೃಷಿ ಮೇಲಿನ ಆಸಕ್ತಿಯಿಂದಾಗಿ ವಿನೂತನ ಮಾದರಿಯಲ್ಲಿ ಅಣಬೆ ಕೃಷಿಯನ್ನು ಮಾಡಲಾಗಿದೆ.ತಾವೆಲ್ಲರೂ ನಮಗೆ ಬೆಂಬಲವನ್ನು ನೀಡಬೇಕೆಂದರು.
ನಾಗೇಂದ್ರ ದೇವಾಡಿಗ ಮಾತನಾಡಿ,ಗ್ರಾಮೀಣ ಪ್ರದೇಶದಲ್ಲಿ ವಿನೂತನ ಮಾದರಿಯಲ್ಲಿ ಅಣಬೆ ಕೃಷಿಯನ್ನು ಮಾಡಲಾಗಿದ್ದು.ಉತ್ತಮ ರೀತಿಯಲ್ಲಿ ನಿರ್ವಹಣೆಯನ್ನು ಕೂಡ ಮಾಡಲಾಗುತ್ತಿದೆ.ಅಣಬೆಗೆ ಜಾಗತಿಕವಾಗಿ ಮಣ್ಣನೆ ಇರುವುದರಿಂದ ಮಾರುಕಟ್ಟೆಯಲ್ಲಿ ಕೂಡ ಒಳ್ಳೆ ಬೇಡಿಕೆ ಇದೆ ಎಂದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago