ಕುಂದಾಪುರ:ಬೈಂದೂರಿನ ಯು.ಬಿ.ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ
ವಿದ್ಯಾರ್ಥಿಗಳ ಪರಿಷತ್ತಿಗೆ ಚುನಾವಣೆ ನಡೆಯಿತು.
ಜುಲೈ 14,2024 ಶುಕ್ರವಾರದಂದು ಬೈಂದೂರಿನ ಯು.ಬಿ.ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮುಖ್ಯೋಪಾಧ್ಯಾಯಿನಿ ಅಮಿತಾ ಶೆಟ್ಟಿ ಇವರ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪರಿಷತ್ತಿಗೆ ಚುನಾವಣೆ ನಡೆಯಿತು.ಶಾಲಾ ಚಟುವಟಿಕೆಗಳು ಮತ್ತು ಸೇವಾ ಯೋಜನೆಗಳನ್ನು ಆಯೋಜಿಸುವ ಮತ್ತು ನಿರ್ವಹಿಸುವ ಮೂಲಕ ವಿದ್ಯಾರ್ಥಿಗಳಿಗೆ ನಾಯಕತ್ವದ ಗುಣಗಳನ್ನು ಬೆಳೆಸಲು ವೇದಿಕೆಯನ್ನು ಒದಗಿಸುವುದು ವಿದ್ಯಾರ್ಥಿ ಪರಿಷತ್ತಿನ ನೇಮಕದ ಉದ್ದೇಶವಾಗಿದೆ.
ಮೊದಲ ಸುತ್ತಿನಲ್ಲಿ ನಾಮಪತ್ರ ಸಲ್ಲಿಸಿದ ವಿದ್ಯಾರ್ಥಿಗಳು ತಾವು ನಿಂತಿರುವ ಸ್ಥಾನಗಳಿಗೆ ಆಯ್ಕೆಯಾಗಲು ಮತಯಾಚನೆ ಮಾಡಿದರು. ಇದರ ಬೆನ್ನಲ್ಲೇ ವಿದ್ಯಾರ್ಥಿಗಳು ಮತದಾನ ಮಾಡಿದರು.ವಿದ್ಯಾರ್ಥಿ ನಾಯಕ ಹಾಗೂ ವಿದ್ಯಾರ್ಥಿ ನಾಯಕಿ ಹುದ್ದೆಗಳಿಗೆ ಒಟ್ಟು 12 ಜನ ವಿದ್ಯಾರ್ಥಿಗಳು ನಾಮಪತ್ರ ಸಲ್ಲಿಸಿದ್ದರು.ಎರಡನೇ ಸುತ್ತಿನಲ್ಲಿ ಮತಗಟ್ಟೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸಹ ಶಿಕ್ಷಕಿ ಶ್ರೀಮತಿ ರಮ್ಯಾ ಹಾಗೂ ಸಹ ಶಿಕ್ಷಕಿ ಶ್ರೀಮತಿ ರೇಷ್ಮಾಅಡಪ್ಪಾ, ಶ್ರೀಮತಿ ರೇಷ್ಮಾ ಹಾಗೂ ಕುಮಾರಿ ವಿದ್ಯಾ ರವರು ಮತಗಟ್ಟೆಯ ಸಹಾಯಕ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದರು.
ಮತದಾನದ ನಂತರ ಅಭ್ಯರ್ಥಿಗಳ ಸಮ್ಮುಖದಲ್ಲಿಯೇ ಮತ ಎಣಿಕೆ ಕಾರ್ಯಕ್ರಮವನ್ನು ನಿರ್ವಹಿಸಲಾಯಿತು. ಪ್ರಸ್ತುತ 2024-25 ನೇ ಸಾಲಿನ ಶ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ನಾಯಕನಾಗಿ ಕುಮಾರ.ನಫೀಸ್ ಹಾಗೂ ವಿದ್ಯಾರ್ಥಿ ನಾಯಕಿಯಾಗಿ ಕುಮಾರಿ. ಮೆಹೆಕ್ ಅವರು ಆಯ್ಕೆ ಆಗಿರುತ್ತಾರೆ.
ಮುಖ್ಯೋಪಾಧ್ಯಾಯಿನಿಯವರಾದ ಅಮಿತಾ ಶೆಟ್ಟಿಯವರು ಹಾಗೂ ಸಿಬ್ಬಂದಿ ವರ್ಗದವರು ಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳನ್ನು ಅಭಿನಂದಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…