ಕುಂದಾಪುರ:ಬೈಂದೂರಿನ ಯು.ಬಿ.ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ
ವಿದ್ಯಾರ್ಥಿಗಳ ಪರಿಷತ್ತಿಗೆ ಚುನಾವಣೆ ನಡೆಯಿತು.
ಜುಲೈ 14,2024 ಶುಕ್ರವಾರದಂದು ಬೈಂದೂರಿನ ಯು.ಬಿ.ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮುಖ್ಯೋಪಾಧ್ಯಾಯಿನಿ ಅಮಿತಾ ಶೆಟ್ಟಿ ಇವರ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪರಿಷತ್ತಿಗೆ ಚುನಾವಣೆ ನಡೆಯಿತು.ಶಾಲಾ ಚಟುವಟಿಕೆಗಳು ಮತ್ತು ಸೇವಾ ಯೋಜನೆಗಳನ್ನು ಆಯೋಜಿಸುವ ಮತ್ತು ನಿರ್ವಹಿಸುವ ಮೂಲಕ ವಿದ್ಯಾರ್ಥಿಗಳಿಗೆ ನಾಯಕತ್ವದ ಗುಣಗಳನ್ನು ಬೆಳೆಸಲು ವೇದಿಕೆಯನ್ನು ಒದಗಿಸುವುದು ವಿದ್ಯಾರ್ಥಿ ಪರಿಷತ್ತಿನ ನೇಮಕದ ಉದ್ದೇಶವಾಗಿದೆ.
ಮೊದಲ ಸುತ್ತಿನಲ್ಲಿ ನಾಮಪತ್ರ ಸಲ್ಲಿಸಿದ ವಿದ್ಯಾರ್ಥಿಗಳು ತಾವು ನಿಂತಿರುವ ಸ್ಥಾನಗಳಿಗೆ ಆಯ್ಕೆಯಾಗಲು ಮತಯಾಚನೆ ಮಾಡಿದರು. ಇದರ ಬೆನ್ನಲ್ಲೇ ವಿದ್ಯಾರ್ಥಿಗಳು ಮತದಾನ ಮಾಡಿದರು.ವಿದ್ಯಾರ್ಥಿ ನಾಯಕ ಹಾಗೂ ವಿದ್ಯಾರ್ಥಿ ನಾಯಕಿ ಹುದ್ದೆಗಳಿಗೆ ಒಟ್ಟು 12 ಜನ ವಿದ್ಯಾರ್ಥಿಗಳು ನಾಮಪತ್ರ ಸಲ್ಲಿಸಿದ್ದರು.ಎರಡನೇ ಸುತ್ತಿನಲ್ಲಿ ಮತಗಟ್ಟೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸಹ ಶಿಕ್ಷಕಿ ಶ್ರೀಮತಿ ರಮ್ಯಾ ಹಾಗೂ ಸಹ ಶಿಕ್ಷಕಿ ಶ್ರೀಮತಿ ರೇಷ್ಮಾಅಡಪ್ಪಾ, ಶ್ರೀಮತಿ ರೇಷ್ಮಾ ಹಾಗೂ ಕುಮಾರಿ ವಿದ್ಯಾ ರವರು ಮತಗಟ್ಟೆಯ ಸಹಾಯಕ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದರು.
ಮತದಾನದ ನಂತರ ಅಭ್ಯರ್ಥಿಗಳ ಸಮ್ಮುಖದಲ್ಲಿಯೇ ಮತ ಎಣಿಕೆ ಕಾರ್ಯಕ್ರಮವನ್ನು ನಿರ್ವಹಿಸಲಾಯಿತು. ಪ್ರಸ್ತುತ 2024-25 ನೇ ಸಾಲಿನ ಶ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ನಾಯಕನಾಗಿ ಕುಮಾರ.ನಫೀಸ್ ಹಾಗೂ ವಿದ್ಯಾರ್ಥಿ ನಾಯಕಿಯಾಗಿ ಕುಮಾರಿ. ಮೆಹೆಕ್ ಅವರು ಆಯ್ಕೆ ಆಗಿರುತ್ತಾರೆ.
ಮುಖ್ಯೋಪಾಧ್ಯಾಯಿನಿಯವರಾದ ಅಮಿತಾ ಶೆಟ್ಟಿಯವರು ಹಾಗೂ ಸಿಬ್ಬಂದಿ ವರ್ಗದವರು ಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳನ್ನು ಅಭಿನಂದಿಸಿದರು.
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…
ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…