ಕುಂದಾಪುರ

ಬೈಂದೂರು ಯು.ಬಿ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳ ಪರಿಷತ್ ಚುನಾವಣೆ

Share

ಕುಂದಾಪುರ:ಬೈಂದೂರಿನ ಯು.ಬಿ.ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ
ವಿದ್ಯಾರ್ಥಿಗಳ ಪರಿಷತ್ತಿಗೆ ಚುನಾವಣೆ ನಡೆಯಿತು.
ಜುಲೈ 14,2024 ಶುಕ್ರವಾರದಂದು ಬೈಂದೂರಿನ ಯು.ಬಿ.ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮುಖ್ಯೋಪಾಧ್ಯಾಯಿನಿ ಅಮಿತಾ ಶೆಟ್ಟಿ ಇವರ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪರಿಷತ್ತಿಗೆ ಚುನಾವಣೆ ನಡೆಯಿತು.ಶಾಲಾ ಚಟುವಟಿಕೆಗಳು ಮತ್ತು ಸೇವಾ ಯೋಜನೆಗಳನ್ನು ಆಯೋಜಿಸುವ ಮತ್ತು ನಿರ್ವಹಿಸುವ ಮೂಲಕ ವಿದ್ಯಾರ್ಥಿಗಳಿಗೆ ನಾಯಕತ್ವದ ಗುಣಗಳನ್ನು ಬೆಳೆಸಲು ವೇದಿಕೆಯನ್ನು ಒದಗಿಸುವುದು ವಿದ್ಯಾರ್ಥಿ ಪರಿಷತ್ತಿನ ನೇಮಕದ ಉದ್ದೇಶವಾಗಿದೆ.
ಮೊದಲ ಸುತ್ತಿನಲ್ಲಿ ನಾಮಪತ್ರ ಸಲ್ಲಿಸಿದ ವಿದ್ಯಾರ್ಥಿಗಳು ತಾವು ನಿಂತಿರುವ ಸ್ಥಾನಗಳಿಗೆ ಆಯ್ಕೆಯಾಗಲು ಮತಯಾಚನೆ ಮಾಡಿದರು. ಇದರ ಬೆನ್ನಲ್ಲೇ ವಿದ್ಯಾರ್ಥಿಗಳು ಮತದಾನ ಮಾಡಿದರು.ವಿದ್ಯಾರ್ಥಿ ನಾಯಕ ಹಾಗೂ ವಿದ್ಯಾರ್ಥಿ ನಾಯಕಿ ಹುದ್ದೆಗಳಿಗೆ ಒಟ್ಟು 12 ಜನ ವಿದ್ಯಾರ್ಥಿಗಳು ನಾಮಪತ್ರ ಸಲ್ಲಿಸಿದ್ದರು.ಎರಡನೇ ಸುತ್ತಿನಲ್ಲಿ ಮತಗಟ್ಟೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸಹ ಶಿಕ್ಷಕಿ ಶ್ರೀಮತಿ ರಮ್ಯಾ ಹಾಗೂ ಸಹ ಶಿಕ್ಷಕಿ ಶ್ರೀಮತಿ ರೇಷ್ಮಾಅಡಪ್ಪಾ, ಶ್ರೀಮತಿ ರೇಷ್ಮಾ ಹಾಗೂ ಕುಮಾರಿ ವಿದ್ಯಾ ರವರು ಮತಗಟ್ಟೆಯ ಸಹಾಯಕ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದರು.
ಮತದಾನದ ನಂತರ ಅಭ್ಯರ್ಥಿಗಳ ಸಮ್ಮುಖದಲ್ಲಿಯೇ ಮತ ಎಣಿಕೆ ಕಾರ್ಯಕ್ರಮವನ್ನು ನಿರ್ವಹಿಸಲಾಯಿತು. ಪ್ರಸ್ತುತ 2024-25 ನೇ ಸಾಲಿನ ಶ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ನಾಯಕನಾಗಿ ಕುಮಾರ.ನಫೀಸ್ ಹಾಗೂ ವಿದ್ಯಾರ್ಥಿ ನಾಯಕಿಯಾಗಿ ಕುಮಾರಿ. ಮೆಹೆಕ್ ಅವರು ಆಯ್ಕೆ ಆಗಿರುತ್ತಾರೆ.
ಮುಖ್ಯೋಪಾಧ್ಯಾಯಿನಿಯವರಾದ ಅಮಿತಾ ಶೆಟ್ಟಿಯವರು ಹಾಗೂ ಸಿಬ್ಬಂದಿ ವರ್ಗದವರು ಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳನ್ನು ಅಭಿನಂದಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 months ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

4 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago