ಕುಂದಾಪುರ:ತುಮಕೂರು ಜಿಲ್ಲೆಯ ತಿಪಟೂರು ನಿವಾಸಿಯಾದ ಯೋಗೀಶ್ ( 22) ಎನ್ನುವ ಯುವಕ ತನ್ನ ಸ್ನೇಹಿತನೊಂದಿಗೆ ಕುಂದಾಪುರ ತಾಲೂಕಿನ ಬಿಜಾಡಿ ಸಮುದ್ರ ಕಿನಾರೆ ಬಳಿ ಜೂನ್.19 ರಂದು ವಿಹಾರ ನಡೆಸುತ್ತಿದ್ದ ಸಮಯದಲ್ಲಿ ಕಡಲ ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದಾರೆ.ಯೋಗೀಶ್ ಅವರ ಪತ್ತೆಗಾಗಿ ವಿಶೇಷ ಕಾರ್ಯಾಚರಣೆ ಮೂಲಕ ಸಮುದ್ರದಲ್ಲಿ ಹುಡುಕಾಟ ಮುಂದುವರೆಸಲಾಗಿದೆ.
ಗಂಗೊಳ್ಳಿ ಕಡಲ ತೀರದಿಂದ ಸುಮಾರು ಎಂಟು ಮಾರು ದೂರದಲ್ಲಿ ಸಮುದ್ರದಲ್ಲಿ ಶವ ತೇಲುತ್ತಿರುವುದರ ಬಗ್ಗೆ ಸ್ಥಳೀಯ ಮೀನುಗಾರರು ನೀಡಿದ ಮಾಹಿತಿ ಮೇರೆಗೆ ಬೋಟ್ ಮೂಲಕ ಶುಕ್ರವಾರ ವಿಶೇಷ ಕಾರ್ಯಾಚರಣೆ ಮೂಲಕ ಹುಡುಕಾಟ ನಡೆಸಲಾಗಿದೆ.ಆದರೆ ತಿಪಟೂರಿನ ಯೋಗೀಶ್ ಇನ್ನೂ ಪತ್ತೆ ಆಗಿಲ್ಲ.
ಕಾರ್ಯಾಚರಣೆಯಲ್ಲಿ ಕುಂದಾಪುರ ಸಿಪಿಐ ನಂದಕುಮಾರ ಮತ್ತು ಪಿಎಸ್ಐ ಪ್ರಸಾದ್,ಬೈಂದೂರು ಸಿಪಿಐ ಸವಿತ್ರತೇಜ,ಗಂಗೊಳ್ಳಿ ಪಿಎಸ್ಐ ಬಸವರಾಜ್ ಕಣಶೆಟ್ಟಿ ಹಾಗೂ ಅಶೋಕ ಪೂಜಾರಿ ಬಿಜಾಡಿ ಭಾಗವಹಿಸಿದ್ದರು.ಮುಳುಗುತಜ್ಞ ದಿನೇಶ್ ಖಾರ್ವಿ ಲೈಟ್ಹೌಸ್ ಗಂಗೊಳ್ಳಿ ಮತ್ತು ಕರಾವಳಿ ಪೆÇಲೀಸ್ ಪಡೆ ಸಿಬ್ಬಂದಿಗಳು ಬೋಟ್ ಮೂಲಕ ಸಮುದ್ರದಲ್ಲಿ ಕಾರ್ಯಚರಣೆ ನಡೆಸಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…