ಕುಂದಾಪುರ

ಮುಳ್ಳಿಕಟ್ಟೆ ಸೊಸೈಟಿಯಲ್ಲಿ ಕಳ್ಳತನಕ್ಕೆ ಯತ್ನ,ಕಳ್ಳನನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ ಪೊಲೀಸರು

Share

ಕುಂದಾಪುರ:ಸಿಸಿ ಟಿವಿ ಮಾನಿಟರಿಂಗ್ ತಂಡದ ಸೂಚನೆ ಮೇರೆಗೆ ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘ ಹೆಮ್ಮಾಡಿ ಅದರ ಹೊಸಾಡು-ಮುಳ್ಳಿಕಟ್ಟೆ ಶಾಖೆ ಕಟ್ಟಡದ ಕಿಟಕಿ ಬಾಗಿಲಿನ ಸರಳನ್ನು ಮುರಿದು ಒಳನುಗ್ಗಿ ಕಳ್ಳತನವನ್ನು ಮಾಡಲು ಯತ್ನಿಸುತ್ತಿದ್ದ ಕೇರಳ ರಾಜ್ಯದ ಕೊಲ್ಲಂ ಜಿಲ್ಲೆಯ ಪ್ರಕಾಶ್ ಬಾಬು (44) ಎಂಬಾತನನ್ನು ಗಂಗೊಳ್ಳಿ ಪೊಲೀಸ್ ಠಾಣೆ ಗುಪ್ತಚರ ಪಿಎಸ್‍ಐ ಬಸವರಾಜ್ ಕಣಶೆಟ್ಟಿ ಮತ್ತು ಸಿಬ್ಬಂದಿಗಳು ಮಿಂಚಿನ ಕಾರ್ಯಚರಣೆ ಮೂಲಕ ರೆಡ್‍ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಶುಕ್ರವಾರ ತಡ ರಾತ್ರಿ 1.44 ರ ಸುಮಾರಿಗೆ ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘ ಹೆಮ್ಮಾಡಿ ಅದರ ಮುಳ್ಳಿಕಟ್ಟೆ ಶಾಖೆ ಕಟ್ಟಡದ ಕಿಟಕಿ ಬಾಗಿಲಿನ ಸರಳನ್ನು ಮುರಿದು ಒಳನುಗ್ಗಿ ಮೇಜಿನ ಡ್ರಾವರ್ ಜಾಲಾಡುತ್ತಿರುವ ದೃಶ್ಯ ಅಂಕದಕಟ್ಟೆಯಲ್ಲಿ ಕಾರ್ಯಚರಣೆ ಮಾಡುತ್ತಿರುವ ಸೈನ್ ಇನ್ ಸೆಕ್ಯೂರಿಟಿ ಲೈವ್ ಮಾನಿಟರಿಂಗ್ ತಂಡದ ಸಿಬ್ಬಂದಿಗಳ ಗಮನಕ್ಕೆ ಬಂದಿದೆ.ಕಛೇರಿ ಸಿಬ್ಬಂದಿಗಳು ಕೂಡಲೆ ಗಂಗೊಳ್ಳಿ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಿದ್ದಾರೆ.ತಕ್ಷಣ ಕಾರ್ಯಪ್ರವೃತರಾದ ಗಂಗೊಳ್ಳಿ ಪೆÇಲೀಸ್ ಠಾಣೆ ಗುಪ್ತಚರ ಪಿಎಸ್‍ಐ ಬಸವರಾಜ್ ಕಣಶೆಟ್ಟಿ ನೇತೃತ್ವದ ಬೀಟ್ ಪೊಲೀಸ್ ತಂಡ ಮಾಹಿತಿ ಸಿಕ್ಕ ಹತ್ತೆ ನಿಮಿಷದಲ್ಲಿ ಘಟನಾ ಸ್ಥಳಕ್ಕೆ ಆಗಮಿಸಿ ಕ್ಷೀಪ್ರ ಕಾರ್ಯಚರಣೆ ಮೂಲಕ ಆರೋಪಿ ಕೇರಳದ ಮೂಲದ ಬಾಬು ಎಂಬುವವನನ್ನು ರೆಡ್‍ಹ್ಯಾಂಡ್ ಆಗಿ ಹಿಡಿದಿದ್ದಾರೆ.ಹಲವು ಪ್ರಕರಣಗಳಲ್ಲಿ ಭಾಗಿದಾರನಾಗಿರುವ ಆರೋಪಿಯನ್ನು ಹೆಚ್ಚಿನ ತನಿಖೆಗೆ ಒಳಪಡಿಸಲಾಗಿದೆ.


Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

4 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago