ಕುಂದಾಪುರ:ಸಿಸಿ ಟಿವಿ ಮಾನಿಟರಿಂಗ್ ತಂಡದ ಸೂಚನೆ ಮೇರೆಗೆ ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘ ಹೆಮ್ಮಾಡಿ ಅದರ ಹೊಸಾಡು-ಮುಳ್ಳಿಕಟ್ಟೆ ಶಾಖೆ ಕಟ್ಟಡದ ಕಿಟಕಿ ಬಾಗಿಲಿನ ಸರಳನ್ನು ಮುರಿದು ಒಳನುಗ್ಗಿ ಕಳ್ಳತನವನ್ನು ಮಾಡಲು ಯತ್ನಿಸುತ್ತಿದ್ದ ಕೇರಳ ರಾಜ್ಯದ ಕೊಲ್ಲಂ ಜಿಲ್ಲೆಯ ಪ್ರಕಾಶ್ ಬಾಬು (44) ಎಂಬಾತನನ್ನು ಗಂಗೊಳ್ಳಿ ಪೊಲೀಸ್ ಠಾಣೆ ಗುಪ್ತಚರ ಪಿಎಸ್ಐ ಬಸವರಾಜ್ ಕಣಶೆಟ್ಟಿ ಮತ್ತು ಸಿಬ್ಬಂದಿಗಳು ಮಿಂಚಿನ ಕಾರ್ಯಚರಣೆ ಮೂಲಕ ರೆಡ್ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಶುಕ್ರವಾರ ತಡ ರಾತ್ರಿ 1.44 ರ ಸುಮಾರಿಗೆ ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘ ಹೆಮ್ಮಾಡಿ ಅದರ ಮುಳ್ಳಿಕಟ್ಟೆ ಶಾಖೆ ಕಟ್ಟಡದ ಕಿಟಕಿ ಬಾಗಿಲಿನ ಸರಳನ್ನು ಮುರಿದು ಒಳನುಗ್ಗಿ ಮೇಜಿನ ಡ್ರಾವರ್ ಜಾಲಾಡುತ್ತಿರುವ ದೃಶ್ಯ ಅಂಕದಕಟ್ಟೆಯಲ್ಲಿ ಕಾರ್ಯಚರಣೆ ಮಾಡುತ್ತಿರುವ ಸೈನ್ ಇನ್ ಸೆಕ್ಯೂರಿಟಿ ಲೈವ್ ಮಾನಿಟರಿಂಗ್ ತಂಡದ ಸಿಬ್ಬಂದಿಗಳ ಗಮನಕ್ಕೆ ಬಂದಿದೆ.ಕಛೇರಿ ಸಿಬ್ಬಂದಿಗಳು ಕೂಡಲೆ ಗಂಗೊಳ್ಳಿ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಿದ್ದಾರೆ.ತಕ್ಷಣ ಕಾರ್ಯಪ್ರವೃತರಾದ ಗಂಗೊಳ್ಳಿ ಪೆÇಲೀಸ್ ಠಾಣೆ ಗುಪ್ತಚರ ಪಿಎಸ್ಐ ಬಸವರಾಜ್ ಕಣಶೆಟ್ಟಿ ನೇತೃತ್ವದ ಬೀಟ್ ಪೊಲೀಸ್ ತಂಡ ಮಾಹಿತಿ ಸಿಕ್ಕ ಹತ್ತೆ ನಿಮಿಷದಲ್ಲಿ ಘಟನಾ ಸ್ಥಳಕ್ಕೆ ಆಗಮಿಸಿ ಕ್ಷೀಪ್ರ ಕಾರ್ಯಚರಣೆ ಮೂಲಕ ಆರೋಪಿ ಕೇರಳದ ಮೂಲದ ಬಾಬು ಎಂಬುವವನನ್ನು ರೆಡ್ಹ್ಯಾಂಡ್ ಆಗಿ ಹಿಡಿದಿದ್ದಾರೆ.ಹಲವು ಪ್ರಕರಣಗಳಲ್ಲಿ ಭಾಗಿದಾರನಾಗಿರುವ ಆರೋಪಿಯನ್ನು ಹೆಚ್ಚಿನ ತನಿಖೆಗೆ ಒಳಪಡಿಸಲಾಗಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…