ಕುಂದಾಪುರ:ಸ್ತ್ರೀ ಸಾಮಾನ್ಯರು ಕೂಲಿ ಕಾರ್ಮಿಕರು ವಿದ್ಯಾರ್ಥಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ದಿನಂಪ್ರತಿ ದೂರದ ಕುಂದಾಪುರ ಪೇಟೆಗೆ ತೆರಳುತ್ತಾರೆ.ಜನ ಸಂಖ್ಯೆಗೆ ಅನುಗುಣವಾಗಿ ಆಲೂರು-ಗುಡ್ಡೆಯಂಗಡಿ ಮಾರ್ಗದಲ್ಲಿ ಬಸ್ಗಳು ಓಡಾಟ ಮಾಡದೆ ಇದ್ದಿದ್ದರಿಂದ ಹಳ್ಳಿ ಭಾಗದ ಜನರಿಗೆ ಬಹಳಷ್ಟು ತೊಂದರೆ ಆಗುತ್ತಿದೆ.ವಿದ್ಯಾರ್ಥಿಗಳಿಗೆ ಹಾಗೂ ಜನ ಸಾಮಾನ್ಯರಿಗೆ ಆಗುತ್ತಿರುವ ಸಂಕಷ್ಟವನ್ನು ತಪ್ಪಿಸಲು ಆಲೂರು ಗುಡ್ಡೆಯಂಗಡಿ ಭಾಗಕ್ಕೆ ಸರಕಾರಿ ಬಸ್ ಓಡಿಸಲು ಕೂಡಲೆ ಕ್ರಮ ಕೈಗೊಳ್ಳಬೇಕೆಂದು ರಾಜು ಪಡುಕೋಣೆ ಆಗ್ರಹಿಸಿದರು.
ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ ಆಲೂರು,ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘ ಆಲೂರು,ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಆಲೂರು ಘಟಕ,ಜನವಾದಿ ಮಹಿಳಾ ಸಂಘಟನೆ ನಾಡ ವಲಯ ವತಿಯಿಂದ ಸೋಮವಾರ ಆಲೂರುನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ ಅಧ್ಯಕ್ಷ ಸುರೇಶ ಕಲಾಗಾರ್ ಮಾತನಾಡಿ ಶಕ್ತಿ ಯೋಜನೆ ಪ್ರಯೋಜನಾ ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿಯರಿಗೆ,ಮಹಿಳೆಯರಿಗೆ ದೊರಕಬೇಕು ಎಂದು ಹೇಳಿದರು.
ಶ್ರೀಧರ ನಾಡ,ಗಣೇಶ ಆಲೂರು,ಶೋಭಾ ಕೆರೆಮನೆ,ಮನೋರಮಾ ಭಂಡಾರಿ,ನಾಗರತ್ನ ನಾಡ,ವೇಂಕಟೇಶ ಕೋಣಿ,ಸಂತೋಷ್ ಹೆಮ್ಮಾಡಿ, ಮತ್ತು ಸಂಘಟನೆಗಳ ಪದಾಧಿಕಾರಿಗಳು,ಸದಸ್ಯರು,ಗ್ರಾಮಸ್ಥರು ಉಪಸ್ಥಿತರಿದ್ದರು.ಮಳೆಯನ್ನು ಲೆಕ್ಕಿಸದೆ ಕೊಡೆಯನ್ನು ಹಿಡಿದುಕೊಂಡು ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.ಆಲೂರು ಪಂಚಾಯಿತಿ ಅಧ್ಯಕ್ಷರು ಮತ್ತು ಪಿಡಿಒ ಮುಖೇನ ಸರಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…