ಕುಂದಾಪುರ:ತುಮಕೂರು ಜಿಲ್ಲೆಯ ತಿಪಟೂರು ನಿವಾಸಿ ಯೋಗೀಶ್ ( 22) ಎಂಬಾತ ಯುವಕ ಜೂ.19 ರಂದು ಕುಂದಾಪುರ ತಾಲೂಕಿನ ಬಿಜಾಡಿ ಸಮುದ್ರ ತೀರದಲ್ಲಿ ತನ್ನ ಸ್ನೇಹಿತನೊಂದಿಗೆ ವಿಹಾರ ನಡೆಸುತ್ತಿದ್ದ ಸಮಯದಲ್ಲಿ ಕಡಲ ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋಗಿ ಸಮುದ್ರದಲ್ಲಿ ನಾಪತ್ತೆಯಾಗಿದ್ದರು.
ಯೋಗೀಶ್ ಮೃತ ದೇಹ ಜೂನ್.25 ರ ಮಂಗಳವಾರ ಕಾರವಾರ ಕಡಲ ತೀರದಲ್ಲಿ ಪತ್ತೆಯಾಗಿದೆ.ಮಳೆ ಮತ್ತು ಗಾಳಿ ಅಬ್ಬರದಿಂದ ಬಿಜಾಡಿ ಸಮುದ್ರ ಕಿನಾರೆಯಿಂದ ಯೋಗೀಶ್ ಮೃತ ಶರೀರ ಕಾರವಾರದತ್ತ ತೇಲಿಕೊಂಡು ಹೋಗಿದೆ ಎಂದು ಮುಳುಗು ತಜ್ಞ ದಿನೇಶ್ ಖಾರ್ವಿ ಮತ್ತು ಅವರ ತಂಡ ಅಭಿಪ್ರಾಯಪಟ್ಟಿದೆ.
ಸಮುದ್ರದಲ್ಲಿ ನಾಪತ್ತೆಯಾಗಿರುವ ಯೋಗೀಶ್ ಗಾಗಿ ವಿಶೇಷ ಕಾರ್ಯಾಚರಣೆ ಮೂಲಕ ಸಮುದ್ರದಲ್ಲಿ ಹುಡುಕಾಟ ಮಾಡಿದ್ದರು.ಹವಾಮಾನ ವೈಪರೀತ್ಯದಿಂದ ಕಾರ್ಯಾಚರಣೆ ಅಡ್ಡಿಯಾಗಿತ್ತು.ಒಂದು ವಾರದ ಬಳಿಕ ಯೋಗೀಶ್ ಮೃತ ಶರೀರ ಉಬ್ಬಿದ ಸ್ಥಿತಿಯಲ್ಲಿ ಕಾರವಾರದಲ್ಲಿ ಪತ್ತೆಯಾಗಿದೆ.
ಯೋಗೀಶ್ ಮೃತ ಶರೀರ ಹುಡುಕಾಟ ಕಾರ್ಯಾಚರಣೆಯಲ್ಲಿ ಗಂಗೊಳ್ಳಿ ಮತ್ತು ಕುಂದಾಪುರ ಪೊಲೀಸ್ ಠಾಣೆ ಠಾಣಾಧಿಕಾರಿ ಗಳು ಮತ್ತು ಸಿಬ್ಬಂದಿಗಳು,ಜೀವ ರಕ್ಷಕ ದಿನೇಶ್ ಖಾರ್ವಿ ಮತ್ತು ತಂಡದ ಸದಸ್ಯರು,ಬಿಜಾಡಿ ಫ್ರೆಂಡ್ಸ್ ಹಾಗೂ ಟೈಲರ್ ಅಸೋಸಿಯೇಶನ್ ಉಡುಪಿ ಭಾಗವಹಿಸಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…