ಕುಂದಾಪುರ:ತುಮಕೂರು ಜಿಲ್ಲೆಯ ತಿಪಟೂರು ನಿವಾಸಿ ಯೋಗೀಶ್ ( 22) ಎಂಬಾತ ಯುವಕ ಜೂ.19 ರಂದು ಕುಂದಾಪುರ ತಾಲೂಕಿನ ಬಿಜಾಡಿ ಸಮುದ್ರ ತೀರದಲ್ಲಿ ತನ್ನ ಸ್ನೇಹಿತನೊಂದಿಗೆ ವಿಹಾರ ನಡೆಸುತ್ತಿದ್ದ ಸಮಯದಲ್ಲಿ ಕಡಲ ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋಗಿ ಸಮುದ್ರದಲ್ಲಿ ನಾಪತ್ತೆಯಾಗಿದ್ದರು.
ಯೋಗೀಶ್ ಮೃತ ದೇಹ ಜೂನ್.25 ರ ಮಂಗಳವಾರ ಕಾರವಾರ ಕಡಲ ತೀರದಲ್ಲಿ ಪತ್ತೆಯಾಗಿದೆ.ಮಳೆ ಮತ್ತು ಗಾಳಿ ಅಬ್ಬರದಿಂದ ಬಿಜಾಡಿ ಸಮುದ್ರ ಕಿನಾರೆಯಿಂದ ಯೋಗೀಶ್ ಮೃತ ಶರೀರ ಕಾರವಾರದತ್ತ ತೇಲಿಕೊಂಡು ಹೋಗಿದೆ ಎಂದು ಮುಳುಗು ತಜ್ಞ ದಿನೇಶ್ ಖಾರ್ವಿ ಮತ್ತು ಅವರ ತಂಡ ಅಭಿಪ್ರಾಯಪಟ್ಟಿದೆ.
ಸಮುದ್ರದಲ್ಲಿ ನಾಪತ್ತೆಯಾಗಿರುವ ಯೋಗೀಶ್ ಗಾಗಿ ವಿಶೇಷ ಕಾರ್ಯಾಚರಣೆ ಮೂಲಕ ಸಮುದ್ರದಲ್ಲಿ ಹುಡುಕಾಟ ಮಾಡಿದ್ದರು.ಹವಾಮಾನ ವೈಪರೀತ್ಯದಿಂದ ಕಾರ್ಯಾಚರಣೆ ಅಡ್ಡಿಯಾಗಿತ್ತು.ಒಂದು ವಾರದ ಬಳಿಕ ಯೋಗೀಶ್ ಮೃತ ಶರೀರ ಉಬ್ಬಿದ ಸ್ಥಿತಿಯಲ್ಲಿ ಕಾರವಾರದಲ್ಲಿ ಪತ್ತೆಯಾಗಿದೆ.
ಯೋಗೀಶ್ ಮೃತ ಶರೀರ ಹುಡುಕಾಟ ಕಾರ್ಯಾಚರಣೆಯಲ್ಲಿ ಗಂಗೊಳ್ಳಿ ಮತ್ತು ಕುಂದಾಪುರ ಪೊಲೀಸ್ ಠಾಣೆ ಠಾಣಾಧಿಕಾರಿ ಗಳು ಮತ್ತು ಸಿಬ್ಬಂದಿಗಳು,ಜೀವ ರಕ್ಷಕ ದಿನೇಶ್ ಖಾರ್ವಿ ಮತ್ತು ತಂಡದ ಸದಸ್ಯರು,ಬಿಜಾಡಿ ಫ್ರೆಂಡ್ಸ್ ಹಾಗೂ ಟೈಲರ್ ಅಸೋಸಿಯೇಶನ್ ಉಡುಪಿ ಭಾಗವಹಿಸಿದ್ದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…