ಮನೆ ಗೋಡೆ ಮೇಲೆ ಕಂಪೌಂಡ್ ಕುಸಿದು ಬಿದ್ದು,ಒಂದೇ ಕುಟುಂಬದ ನಾಲ್ವರು ದುರ್ಮರಣ

Share

Advertisement
Advertisement

ಮಂಗಳೂರು:ಭಾರಿ ಮಳೆಗೆ
ಕಂಪೌಂಡ್ ಗೋಡೆ ಮನೆ ಗೋಡೆ ಮೇಲೆ ಕುಸಿದು ಬಿದ್ದು ಒಂದೆ ಕುಟುಂಬದ ನಾಲ್ವರು ಮಲಗಿದ್ದಲ್ಲೇ ಸಾವನ್ನಪ್ಪಿದ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿನಗರದಲ್ಲಿ ಮಂಗಳವಾರ ನಸುಕಿನ ಜಾವ ಸಂಭವಿಸಿದೆ.
ಮನೆಯೊಳಗೆ ವಿಶ್ರಾಂತಿ ಪಡೆದು ಕೊಳ್ಳುತ್ತಿದ್ದ ರಿಹಾನ ಮಂಝಿಲ್ ಯಾಸಿರ್(45), ಮರಿಯಮ್ಮ(40) ಮಕ್ಕಳಾದ ರಿಹಾನ (11)ಮತ್ತು ರಿಫಾನ (17) ಎಂಬುವರು ದುರ್ಘಟನೆಯಲ್ಲಿ ಸಾವನ್ನಪ್ಪಿದ್ದಾರೆ.
ಯಾಸೀರ್ ಮಂಗಳೂರಿನ ಬಂದರಿನಲ್ಲಿ ಮಡ್ಡಿ ಆಯಿಲ್ ನಿರ್ವಹಣೆ ಕಾರ್ಯ ನಿರ್ವಹಿಸುತ್ತಿದ್ದರು.
ರಾತ್ರಿ ಸಮಯದಲ್ಲಿ ಸುರಿದ ಧಾರಾಕಾರ ಮಳೆಗೆ ಕಂಪೌಂಡ್ ಗೋಡೆ ಹಾಗೂ ಎರಡು ಅಡಕೆ ಮರ ಯಾಸಿರ್ ಅವರ ಮನೆ ಮೇಲೆ ಉರುಳಿಬಿದ್ದಿದೆ.ಘಟನೆಯಲ್ಲಿ
ಮನೆಯೊಳಗೆ ನಿದ್ರಿಸುತ್ತಿದ್ದ ಒಂದೆ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.ರಿಹಾನಾ ಹಾಗೂ ರಿಫಾನ ನಗರದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಾಲೆ ಹಾಗೂ ಕಾಲೇಜಿಗೆ ಹೋಗುತ್ತಿದ್ದಾರೆ.ಆರು ವರ್ಷಗಳ ಹಿಂದೆ ಮನೆ ಖರೀದಿಸಿದ್ದ ಯಾಸಿರ್ ಒಂದು ವರ್ಷ ಮನೆಯನ್ನು ಲೀಸ್ ಗೆ ನೀಡಿ ಆರು ತಿಂಗಳ ಹಿಂದೆಯಷ್ಟೇ ಮನೆಗೆ ವಾಪಸ್ಸಾಗಿದ್ದರು.ಎರಡು ವರ್ಷಗಳ ಹಿಂದೆಯೂ ಮನೆ ಮೇಲೆ ಇದೇ ರೀತಿ ಕಂಪೌಂಡ್ ಕುಸಿದಿದ್ದು,ಯಾವುದೇ ಪ್ರಾಣಾಪಾಯವಾಗಿರಲಿಲ್ಲ ಎನ್ನಲಾಗಿದೆ.ಸತತ ಕಾರ್ಯಾಚರಣೆ ಮೂಲಕ ಮೃತ ದೇಹವನ್ನು ಹೊಸ ಹೊರ ತೆಗೆಯಲಾಗಿದೆ.ತನಿಖೆ ಮುಂದುವರಿದಿದೆ.

Advertisement
Advertisement
Advertisement


Share

Leave a comment

Your email address will not be published. Required fields are marked *

You cannot copy content of this page