ಮಂಗಳೂರು:ಭಾರಿ ಮಳೆಗೆ
ಕಂಪೌಂಡ್ ಗೋಡೆ ಮನೆ ಗೋಡೆ ಮೇಲೆ ಕುಸಿದು ಬಿದ್ದು ಒಂದೆ ಕುಟುಂಬದ ನಾಲ್ವರು ಮಲಗಿದ್ದಲ್ಲೇ ಸಾವನ್ನಪ್ಪಿದ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿನಗರದಲ್ಲಿ ಮಂಗಳವಾರ ನಸುಕಿನ ಜಾವ ಸಂಭವಿಸಿದೆ.
ಮನೆಯೊಳಗೆ ವಿಶ್ರಾಂತಿ ಪಡೆದು ಕೊಳ್ಳುತ್ತಿದ್ದ ರಿಹಾನ ಮಂಝಿಲ್ ಯಾಸಿರ್(45), ಮರಿಯಮ್ಮ(40) ಮಕ್ಕಳಾದ ರಿಹಾನ (11)ಮತ್ತು ರಿಫಾನ (17) ಎಂಬುವರು ದುರ್ಘಟನೆಯಲ್ಲಿ ಸಾವನ್ನಪ್ಪಿದ್ದಾರೆ.
ಯಾಸೀರ್ ಮಂಗಳೂರಿನ ಬಂದರಿನಲ್ಲಿ ಮಡ್ಡಿ ಆಯಿಲ್ ನಿರ್ವಹಣೆ ಕಾರ್ಯ ನಿರ್ವಹಿಸುತ್ತಿದ್ದರು.
ರಾತ್ರಿ ಸಮಯದಲ್ಲಿ ಸುರಿದ ಧಾರಾಕಾರ ಮಳೆಗೆ ಕಂಪೌಂಡ್ ಗೋಡೆ ಹಾಗೂ ಎರಡು ಅಡಕೆ ಮರ ಯಾಸಿರ್ ಅವರ ಮನೆ ಮೇಲೆ ಉರುಳಿಬಿದ್ದಿದೆ.ಘಟನೆಯಲ್ಲಿ
ಮನೆಯೊಳಗೆ ನಿದ್ರಿಸುತ್ತಿದ್ದ ಒಂದೆ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.ರಿಹಾನಾ ಹಾಗೂ ರಿಫಾನ ನಗರದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಾಲೆ ಹಾಗೂ ಕಾಲೇಜಿಗೆ ಹೋಗುತ್ತಿದ್ದಾರೆ.ಆರು ವರ್ಷಗಳ ಹಿಂದೆ ಮನೆ ಖರೀದಿಸಿದ್ದ ಯಾಸಿರ್ ಒಂದು ವರ್ಷ ಮನೆಯನ್ನು ಲೀಸ್ ಗೆ ನೀಡಿ ಆರು ತಿಂಗಳ ಹಿಂದೆಯಷ್ಟೇ ಮನೆಗೆ ವಾಪಸ್ಸಾಗಿದ್ದರು.ಎರಡು ವರ್ಷಗಳ ಹಿಂದೆಯೂ ಮನೆ ಮೇಲೆ ಇದೇ ರೀತಿ ಕಂಪೌಂಡ್ ಕುಸಿದಿದ್ದು,ಯಾವುದೇ ಪ್ರಾಣಾಪಾಯವಾಗಿರಲಿಲ್ಲ ಎನ್ನಲಾಗಿದೆ.ಸತತ ಕಾರ್ಯಾಚರಣೆ ಮೂಲಕ ಮೃತ ದೇಹವನ್ನು ಹೊಸ ಹೊರ ತೆಗೆಯಲಾಗಿದೆ.ತನಿಖೆ ಮುಂದುವರಿದಿದೆ.
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…