ಕುಂದಾಪುರ

ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡಿದ,ಯು.ಬಿ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು

Share

ಬೈಂದೂರು:ಶಾಲೆಗಳಲ್ಲಿ ಸಾಮಾನ್ಯವಾಗಿ ಆಟ – ಪಾಠದ ಜತೆಗೆ ಕೆಲ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವುದು ಸಾಮಾನ್ಯ.ಆದರೆ, ಬೈಂದೂರು ತಾಲೂಕಿನ ಯು ಬಿ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯೊಂದರಲ್ಲಿ ಮಕ್ಕಳನ್ನು ಗದ್ದೆಗೆ ಇಳಿಸಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸುವ ಮೂಲಕ ವಿಭಿನ್ನವಾಗಿ ಪಾಠ ಮಾಡಲಾಗಿದೆ.ನಾಲ್ಕು ಗೋಡೆಗಳ ಮಧ್ಯೆ ಪಾಠ ಕೇಳುತ್ತಾ ತಲ್ಲೀನರಾಗುತ್ತಿದ್ದ, ಮಕ್ಕಳಿಗೆ ಗದ್ದೆ ಎಂದರೆ ಏನು?, ಬೇಸಾಯ ಎಂದರೆ ಹೇಗೆ?, ನಾಟಿ ಹೇಗೆ ಮಾಡಬೇಕು ಎಂದೆಲ್ಲ ಮಾಹಿತಿ ನೀಡುತ್ತಾ ಮಕ್ಕಳನ್ನು ಕೃಷಿ ಚಟುವಟಿಕೆಯಲ್ಲಿ ತೊಡಗಿಸಲಾಗಿತ್ತು.
ಕೃಷಿಕರಾದ ಮಂಜುನಾಥ ಶೆಟ್ಟಿ, ರಾಘವೇಂದ್ರ,ಕೃಷ್ಣ ಪೂಜಾರಿ ಹಾಗೂ ಗ್ರಾಮಸ್ಥರು ಮಾತನಾಡಿ
ಮಕ್ಕಳು ಮಳೆಯನ್ನು ಲೆಕ್ಕಿಸದೇ ಉತ್ಸುಕತೆಯಲ್ಲಿ ಪಾಲ್ಗೊಂಡು ಗದ್ದೆಯಲ್ಲಿ ನಾಟಿ ಮಾಡುವುದು ಎಲ್ಲರ ಗಮನ ಸೆಳೆಯಿತು ತರಗತಿಯಲ್ಲಿ ಪಾಠ ಮಾಡುವುದಕ್ಕಿಂತ, ಪ್ರಾಯೋಗಿಕವಾಗಿ ತೋರ್ಪಡಿಸುವುದರಿಂದ, ವಿದ್ಯಾರ್ಥಿಗಳಿಗೆ ಸಂಪೂರ್ಣ ಮಾಹಿತಿಯನ್ನು ಮನದಟ್ಟು ಮಾಡಲು ಸಾಧ್ಯ ಎಂಬ ಆಶಯದೊಂದಿಗೆ ಸ್ಥಳೀಯರ ಸಹಕಾರದಲ್ಲಿ ಗದ್ದೆಯಲ್ಲಿ ಭತ್ತದ ನಾಟಿ ಮಾಡುವ ಮೂಲಕ ಕೃಷಿ ಶಿಕ್ಷಣವನ್ನು ನೀಡಲಾಯಿತು ಎಂದರು.

102 ವರ್ಷ ಕುಪ್ಪಯ್ಯ ಪೂಜಾರಿ ಅವರು ಶಾಲೆಯ ಮುಖ್ಯೋಪಾಧ್ಯಾಯರಿಗೆ ಭತ್ತದ ಸಸಿ ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಕೃಷಿ ಬಗ್ಗೆ ತಮಗೆ ತಿಳಿದ ಮಾಹಿತಿಯನ್ನು ನೀಡಿದರು. ತದನಂತರ ಮಕ್ಕಳಿಗೆ ಹಾಡಿನ ಮೂಲಕ ಕೃಷಿ ಬಗ್ಗೆ ಅರಿವನ್ನು ಮೂಡಿಸಿದರು
ಯು.ಬಿ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆ ಮುಖ್ಯೋಪಾಧ್ಯಾಯರು ಅಮಿತಾ ಮೇಡಂ ಅವರು ಮಾತನಾಡಿ
ಪಠ್ಯದಲ್ಲಿರುವ ಕೃಷಿ ಚಟುವಟಿಕೆ ಪಾಠ ಮಾಡಬೇಕಿದ್ದ ಶಿಕ್ಷಕರು ವಿದ್ಯಾರ್ಥಿಗಳನ್ನು ನೇರವಾಗಿ ಭತ್ತದ ಗದ್ದೆಗೆ ಕರೆದುಕೊಂಡು ಭತ್ತದ ನಾಟಿ ಮಾಡುವ ಪ್ರಾತ್ಯಕ್ಷಿಕೆ ತೋರಿಸಿದ್ದಾರೆ. ರೈತರ ಪರಿಶ್ರಮವನ್ನು ಅರಿತ ವಿದ್ಯಾರ್ಥಿಗಳು ಗದ್ದೆಯಲ್ಲಿ ಭತ್ತ ನಾಟಿ ಮಾಡುವ ಪಾಠವನ್ನು ಮಾಡುತ್ತಿರುವ ಸಂದರ್ಭದಲ್ಲಿ ಹಲವು ಪ್ರಶ್ನೆಗಳನ್ನು ಕೇಳಿ, ತಮ್ಮಲ್ಲಿರುವ ಅನುಮಾನಗಳನ್ನು ಬಗೆಹರಿಸಿಕೊಂಡರು. ಹಾಗೆಯೇ ಮಕ್ಕಳ ನಾಟಿ ಮಾಡುವ ಉತ್ಸಾಹವನ್ನು ಕಂಡ ಪಾಲಕರು ಹಾಗೂ ಗ್ರಾಮಸ್ಥರು ಸಂತೋಷ ವ್ಯಕ್ತಪಡಿಸಿದರು.
ರೈತರ ಕಷ್ಟ ಅರಿವಿಗೆ ಬಂದಿದೆ ಎಂದರು.
ಈ ಸಂದರ್ಭದಲ್ಲಿ
ತರಗತಿ ಶಿಕ್ಷಕರು, ದೈಹಿಕ ಶಿಕ್ಷಕರು, ಹಾಗೂ ಶಾಲಾ ಕಛೇರಿಯ ಸಿಬ್ಬಂದಿಗಳು ಕೂಡ ಈ ಕಾಯ೯ಕ್ರಮದಲ್ಲಿ ಭಾಗವಹಿಸಿದ್ದರು _.

Advertisement

Share
Team Kundapur Times

Recent Posts

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 days ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 days ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

1 week ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

3 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago