ಕುಂದಾಪುರ

ಬೈಂದೂರು;ಬಂಟರ ಯಾನೆ ನಾಡವರ ಸಂಘದ ವತಿಯಿಂದ ಬೈಂದೂರು ತಹಶೀಲ್ದಾರ್ ಗೆ ಮನವಿ ಸಲ್ಲಿಕೆ

Share

ಕುಂದಾಪುರ:ವಿದ್ಯಾರ್ಥಿಗಳ ಪ್ರಸ್ತುತ ದಾಖಲೆಗಳನ್ನು ಪಡೆದುಕೊಳ್ಳುವುದರ ಮೂಲಕ ಅಥವಾ ಓ.ಟಿ. ಮುಖಾಂತರ ಜಾತಿ ಪ್ರಮಾಣ ಪತ್ರವನ್ನು ನೀಡುವ ಕುರಿತು ಮನವಿ ಪತ್ರವನ್ನು ಬೈಂದೂರು ಬಂಟರ ಸಂಘದ ವತಿಯಿಂದ ಬೈಂದೂರು ತಹಶೀಲ್ದಾರ್ ಗೆ ಮನವಿಯನ್ನು ಸಲ್ಲಿಸಲಾಯಿತು.
ಬೈಂದೂರು ಬಂಟ ಸಂಘದ ಅಧ್ಯಕ್ಷರಾದ ಶಶಿಧರ್ ಶೆಟ್ಟಿ ಸಾಲ್ಗೆದೆ ಅವರು ಮಾತಮಾಡಿ,
ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಹಿಂದಿನಿಂದಲೂ ಬಂಟರ ಯಾನೆ ನಾಡವ ಎಂಬುವುದು ಎರಡು ಒಂದೇ ಆಗಿರುತ್ತದೆ. ಅದೇ ರೀತಿ ಕಳೆದ ಐವತ್ತು ವರ್ಷದ ಹಿಂದೆ ಹಿಂದೂ ನಾಡವ ಅಥವಾ ನಾಡವ ಎಂಬುದಾಗಿ ಕೆಲವೊಂದು ದಾಖಲೆಗಳಲ್ಲಿ ನಮೂದಾಗಿರುತ್ತದೆ. ಅದೇ ರೀತಿ 1925ರ ನಂತರದ ದಿನಗಳಲ್ಲಿ ಹಿಂದೂ ನಾಡವ ಬದಲಿಗೆ ಹಿಂದೂ ಬಂಟ ಎಂದು ಎಲ್ಲಾ ದಾಖಲೆಗಳಲ್ಲಿ ನಮೂದಾಗಿರುತ್ತದೆ. ಆದ್ದರಿಂದ ಬಂಟಿ ಯಾನೆ ನಾಡವ ಎನ್ನುವುದು ಒಂದೇ ಆಗಿರುತ್ತದೆ. ಕೆಲವೊಂದು ಕುಟುಂಬದಲ್ಲಿ ಅನಕ್ಷರಸ್ಥರಿರುವುದರಿಂದ ಮತ್ತು ಕೆಲವೊಂದು ದಾಖಲೆಗಳಲ್ಲಿ ನಾಡವ ಎನ್ನುವುದು ನಮೂದಾಗಿದ್ದು ಮತ್ತು ಬಂಟ ಅಥವಾ ನಾಡವ ಎನ್ನುವುದರ ಬಗ್ಗೆ ಈಗಲೂ ಕೂಡ ಅವರಲ್ಲಿರುವ ಶಾಲಾ ದಾಖಲೆಗಳಲ್ಲಿ ನಮೂದಾಗಿರುವುದಿಲ್ಲ. ನಾವು ತಮ್ಮಲ್ಲಿ ಕೇಳಿಕೊಳ್ಳುವುದೇನೆಂದರೆ, ನಾಡವ ಯಾನೆ ಬಂಟ ಅಥವಾ ಹಿಂದೂ ನಾಡವ ಅಥವಾ ಹಿಂದೂ ಬಂಟ ಇವೆಲ್ಲವೂ 3ಬಿಯ ಅಡಿಯಲ್ಲಿ ಬರುವುದರಿಂದ ಸದ್ದಿ ವಿಚಾರವನ್ನು ಗಣನೆಗೆ ತೆಗೆದುಕೊಂಡು ಜಾತಿ ಪ್ರಮಾಣ ಪತ್ರವನ್ನು ನೀಡಬೇಕಾಗಿ ಕೇಳಿಕೊಳ್ಳುವುದು ಎಂದರು.


ಶಿರೂರು ಬಂಟರ ಸಂಘ ಮಾಜಿ ಅಧ್ಯಕ್ಷರು ಪುಷ್ಪರಾಜ್ ಶೆಟ್ಟಿ ಅವರು ಮಾತನಾಡಿ,
ಪ್ರಸ್ತುತ ಶಾಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯಲು ಹಾಗೂ ಉದ್ಯೋಗವನ್ನು ಪಡೆಯಲು ಜಾತಿ ಪ್ರಮಾಣ ಪತ್ರ ಅಗತ್ಯವಿರುವುದರಿಂದ ಸಂಬಂಧಪಟ್ಟ ಕಛೇರಿಗಳಲ್ಲಿ ಜಾತಿ ಪ್ರಮಾಣ ಪತ್ರವನ್ನು ನೀಡಲು ತಿಳಿಸಿದರೇ ತಂದೆಯ ಶಾಲಾ ದಾಖಲಾತಿ ಮತ್ತು ಜಾತಿ ಪ್ರಮಾಣ ಪತ್ರ ಕೇಳುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ತುಂಬಾ ಸಮಸ್ಯೆಯಾಗಿ ಜಾತಿ ಪ್ರಮಾಣ ಪತ್ರ ಸಿಗುತ್ತಿಲ್ಲ ತಮ್ಮಲ್ಲಿ ತಿಳಿಸುವುದೆನೆಂದರೆ, ಬಂಟ ಯಾನೆ ನಾಡವ ಎನ್ನುವುದು ಎರಡು ಒಂದೇ ಜಾತಿ ಆಗಿರುತ್ತದೆ. ಕಳೆದ ಒಂದು ವರ್ಷದ ಹಿಂದೆ ಓಟಿಸಿ, ಮುಖಾಂತರ ಅಂದರೆ ಕುಟುಂಬದ ಪಡಿತರ ಚೀಟಿಯನ್ನು ಗಣನೆಗೆ ತೆಗೆದುಕೊಂಡು ಜಾತಿ ಪ್ರಮಾಣ ಪತ್ರವನ್ನು ತಮ್ಮ ಕಛೇರಿಯಲ್ಲ ಮತ್ತು ಗ್ರಾಮ ಒಂದರಲ್ಲಿ ಕೂಡ ನೀಡುತ್ತಿದ್ದು, ಅಲ್ಲದೇ ಬಂಟ ಯಾನೆ ನಾಡವ ಎನ್ನುವುದರ ಬಗ್ಗೆ ಸಂಬಂಧಪಟ್ಟ ಪಂಚಾಯತ್‌ನಲ್ಲಿ ಕುಟುಂಬದ ದಾಖಲೆಗಳನ್ನು ಪಡೆದುಕೊಂಡು ಸಾಕ್ಷಿದಾರರ ಮಹಜರನ್ನು ಮಾಡಿಕೊಂಡು ಸಹಾ ಜಾತಿ ಪ್ರಮಾಣ ಪತ್ರವನ್ನು ನಮ್ಮ ಈ ಭಾಗದಲ್ಲಿ ಮತ್ತು ಕುಂದಾಪುರದಲ್ಲಿ ಕೂಡಾ ನೀಡುತ್ತಿದ್ದಾರೆ.


ಉಪಾಧ್ಯಕ್ಷರಾದ ಗೋಕುಲ್ ಶೆಟ್ಟಿ ಉಪ್ಪುಂದ ಅವರು ಮಾತನಾಡಿ,
ಈಗಾಗಲೇ ಈ ರೀತಿಯಾಗಿ ದಾಖಲೆಯನ್ನು ಪಡೆದುಕೊಂಡು ಜಾತಿ ಪ್ರಮಾಣ ಪತ್ರವನ್ನು ನೀಡಿರುವ ತಮ್ಮ ಕಛೇರಿಯಲ್ಲಿ ಪ್ರಸ್ತುತ ವಿದ್ಯಾರ್ಥಿಗಳಿಗೆ ಜಾತಿ ಪ್ರಮಾಣ ಪತ್ರಕ್ಕೆ ಅರ್ಜಿ ನೀಡಿದರೆ ತಂದೆಯ ದಾಖಲೆಯನ್ನು ನೀಡಿದರೇ ಮಾತ್ರ ಜಾತಿ ಪ್ರಮಾಣ ಪತ್ರ ನೀಡುವುದಾಗಿ ತಿಳಿಸಿದ್ದಿರಿ. ಆದರೆ ತಂದೆಯ ದಾಖಲೆಗಳಲ್ಲಿ ನಾಡವ ಎಂದೂ ನಮೂದಾಗಿದ್ದರೂ ಕೂಡ ಅದನ್ನು ಗಣನೆಗೆ ತೆಗೆದುಕೊಳ್ಳದೇ ಇರುವುದು ಶಾಲಾ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತದೆ. ಆದ್ದರಿಂದ ತಮ್ಮಲ್ಲಿ ಮೂಲಕ ಕೇಳಿಕೊಳ್ಳುವುದೇನೆಂದರೆ, ಪ್ರಸ್ತುತ ಶಾಲಾ ಮಕ್ಕಳ ಆಧಾರ್ ಕಾರ್ಡ್, ಪಡಿತರ ಚೀಟಿ, ಜನನ ಪ್ರಮಾಣ ಪತ್ರವನ್ನು ತೆಗೆದುಕೊಂಡು ಜಾತಿ ಪ್ರಮಾಣ ಪತ್ರವನ್ನು ನೀಡಬೇಕು ಅಥವಾ ಒಂದು ವರ್ಷದ ಹಿಂದೆ ಇರುವ ಓ.ಟಿ.ಸಿ. ಮುಖಾಂತರ ಜಾತಿ ಪ್ರಮಾಣ ಪತ್ರವನ್ನು ನೀಡಿದರೆ ವಿದ್ಯಾರ್ಥಿಗಳಿಗೆ ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಳ್ಳಲು ಅನುಕೂಲವಾಗುತ್ತದೆ. ಶಿಕ್ಷಣವನ್ನು ಪಡೆದು ಉನ್ನತ ಉದ್ಯೋಗಕ್ಕೆ ಹೋಗುತ್ತಿರುವ ವಿದ್ಯಾರ್ಥಿಗಳಿಗೆ ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಳ್ಳಲು ಈ ರೀತಿಯಲ್ಲಿ ಸಣ್ಣ ಪುಟ್ಟ ಸಮಸ್ಯೆಯಾದರೆ ವಿದ್ಯಾರ್ಥಿಗಳ ಉಜ್ವಲ ಭವಿಷ್ಯವನ್ನು ರೂಪಿಸಲು ಹೇಗೆ ಸಾಧ್ಯ? ಆದ್ದರಿಂದ ತಾವು ನಾಡವ, ಬಂಟ ಯಾನೆ ನಾಡವ, ಹಿಂದೂ ಬಂಟ, ಹಿಂದೂ ನಾಡವ ಈ ರೀತಿಯಲ್ಲಿ ಯಾವುದೇ ದಾಖಲೆಯನ್ನು ನೀಡಿದ್ದರೆ ಅಥವಾ ಮೇಲೆ ತಿಳಿಸಿದಂತೆ ವಿದ್ಯಾರ್ಥಿಗಳ ಮತ್ತು ಕುಟುಂಬದ ದಾಖಲೆಗಳನ್ನು ಪರಿಶೀಲಿಸಿ ಬಂಟ ಅಥವಾ ನಾಡವ ಬಂಟ ಪ್ರಕಾರ 3ಬಿ ರಲ್ಲಿ ಜಾತಿ ಪ್ರಮಾಣ ಪತ್ರವನ್ನು ನೀಡಬೇಕಾಗಿ
ನೀವು ತಿಳಿಸುವ ಹಾಗೇ ತಂದೆಯ ಜಾತಿ ಪ್ರಮಾಣ ಪತ್ರದಲ್ಲಿ ನಾಡವ ಎಂದು ನಮೂದಾಗಿದ್ದರೆ ಹಾಗೂ ಇನ್ನು ಕೆಲವರ ದಾಖಲೆಗಳಲ್ಲಿ ಬಂಟ ಅಥವಾ ನಾಡವ ಎನ್ನುವುದು ನಮೂದಾಗದೇ ಇರುವುದರಿಂದ ಈ ರೀತಿಯ ದಾಖಲೆಗಳನ್ನು ಪ್ರಸ್ತುತ ವಿದ್ಯಾರ್ಥಿಗಳಿಗೆ ನೀಡಲು ಸಾಧ್ಯವಿಲ್ಲ. ಆದ್ದರಿಂದ ಮೇಲೆ ತಿಳಿಸಿದ ರೀತಿಯಲ್ಲಿ ಜಾತಿ ಪ್ರಮಾಣ ಪತ್ರವನ್ನು ವಿದ್ಯಾರ್ಥಿಗಳಿಗೆ ನೀಡಿದರೆ ಅವರವರ ಭವಿಷ್ಯವನ್ನು ನೋಡಿಕೊಳ್ಳಲು ಸಹಾಯವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ
ನಿಕಟ ಪೂರ್ವ ಅಧ್ಯಕ್ಷರಾದ ಜಗನ್ನಾಥ್ ಶೆಟ್ಟಿ ನಾಕಟ್ಟೆ,
ಜೊತೆ ಕಾರ್ಯದರ್ಶಿ ಜಯರಾಮ್ ಶೆಟ್ಟಿ ಗಂಟಿಹೊಳೆ,ಮನೋಹರ್ ಶೆಟ್ಟಿ ಉಪ್ಪುಂದ,
N.ದಿವಾಕರ್ ಶೆಟ್ಟಿ ನೆಲ್ಯಾಡಿ, ಜಯರಾಮ್ ಶೆಟ್ಟಿ ಬಿಜೂರು ವಿದ್ಯಾರ್ಥಿ ವೇತನ ಸಮಿತಿ ಸಂಚಾಲಕರು,ಸಂತೋಷ ಕುಮಾರ್ ಶೆಟ್ಟಿ ಸಂಘಟನಾ ಕಾರ್ಯದರ್ಶಿ, ಶಾಮ್ ಶೆಟ್ಟಿ ನಾಕಟ್ಟೆ,ನಿತಿನ್ ಬಿ ಶೆಟ್ಟಿ ಕಾರ್ಯದರ್ಶಿ,ಚಂದ್ರಶೀಲ ಶೆಟ್ಟಿ ನಾವುಂದ ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago