ಸ್ಟೆಲ್ಲಾ ಮಾರಿಸ್ ಶಾಲೆಯ ಸಂಸತ್ತಿನ ಉದ್ಘಾಟನಾ ಸಮಾರಂಭವು ದಿನಾಂಕ: 2024, ಜೂನ್ 25 ರಂದು ಬಹಳ ಅರ್ಥಪೂರ್ಣವಾಗಿ ಶಾಲಾ ಸಭಾಂಗಣದಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಕ್ರೆಸೆನ್ಸ್ ಎ.ಸಿ, ಸಿಸ್ಟರ್ ಡಯಾನ ಎ. ಸಿ, ಶಾಲೆಯ ಹಳೆ ವಿದ್ಯಾರ್ಥಿನಿ ಪ್ರಸ್ತುತ ಗುಮಾಸ್ತೆ ಶ್ರೀಮತಿ ಸಂಧ್ಯಾ, ಶಾಲಾ ನಾಯಕ ಮತ್ತು ಉಪನಾಯಕ ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಸತ್ತಿನ ರಾಜ್ಯಪಾಲೆ ಸಿಸ್ಟರ್ ಕ್ರಿಸ್ಸೆನ್ಸ್ ಮಂತ್ರಿಗಳ ಪ್ರತಿಜ್ಞೆ ಸ್ವೀಕರಿಸಿದರು. ಮುಖ್ಯ ಅತಿಥಿಯಾಗಿ, ರಕ್ಷಕ ಶಿಕ್ಷಕ ಸಂಘದ ನೂತನ ಪದಾಧಿಕಾರಿ ಶ್ರೀಭಾಸ್ಕರ್ ಖಾರ್ವಿ ಉಪಸ್ಥಿತರಿದ್ದರು. ಶ್ರೀಮತಿ ಸಂಧ್ಯಾ ಖಾರ್ವಿರವರು ಈ ಶಾಲೆಯಲ್ಲಿ ಪಡೆದ ಶಿಕ್ಷಣದ ಅನುಭವವನ್ನು ಹಂಚಿಕೊಂಡರು. ಸಂವಿಧಾನದ ಮೂಲಭೂತ ನಿಯಮಗಳನ್ನು ಭಗಿನಿ.ಡಯಾನರವರು ತಿಳಿಸಿದರು.
ಶಾಲಾ ನಾಯಕನಾಗಿ ಕುಮಾರ ಆದಿತ್ಯ ಖಾರ್ವಿ, ಉಪನಾಯಕನಾಗಿ ಕುಮಾರ ವಿಕಾಸ ಖಾರ್ವಿ, ವಿರೋಧ ಪಕ್ಷದ ನಾಯಕಿಯಾಗಿ ಕುಮಾರಿ ಸ್ಪೂರ್ತಿ ಮತ್ತು ಇತರ 16 ಮಂತ್ರಿಗಳೊಂದಿಗೆ ತಮ್ಮ ಜವಾಬ್ದಾರಿಯನ್ನು ಸಭೆಯಲ್ಲಿ ಓದಿ ಹೇಳಿ ಅಧಿಕೃತ ಕಡತಕ್ಕೆ ಸಹಿ ಹಾಕಿ, ಬ್ಯಾಡ್ಜ್ ಧರಿಸಿಕೊಂಡರು.
ಕುಮಾರಿ ಕೃತಿಕಾ ಮತ್ತು ಭಾನ್ವಿತ ಕಾರ್ಯಕ್ರಮವನ್ನು ನಿರೂಪಿಸಿದರು. ಸಿಸ್ಟರ್ ವೈಲೆಟ್ ಎ.ಸಿ ಇವರ ಮಾರ್ಗದರ್ಶನದಲ್ಲಿ, ಶಿಕ್ಷಕ- ಶಿಕ್ಷಕೇತರ ವೃಂದದವರ ಸಹಕಾರದಿಂದ ಈ ಕಾರ್ಯಕ್ರಮ ಯಶಸ್ವಿಗೊಂಡಿತು. ಶಾಲಾ ಗೀತೆ ಮತ್ತು ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…