ಸ್ಟೆಲ್ಲಾ ಮಾರಿಸ್ ಶಾಲೆಯ ಸಂಸತ್ತಿನ ಉದ್ಘಾಟನಾ ಸಮಾರಂಭವು ದಿನಾಂಕ: 2024, ಜೂನ್ 25 ರಂದು ಬಹಳ ಅರ್ಥಪೂರ್ಣವಾಗಿ ಶಾಲಾ ಸಭಾಂಗಣದಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಕ್ರೆಸೆನ್ಸ್ ಎ.ಸಿ, ಸಿಸ್ಟರ್ ಡಯಾನ ಎ. ಸಿ, ಶಾಲೆಯ ಹಳೆ ವಿದ್ಯಾರ್ಥಿನಿ ಪ್ರಸ್ತುತ ಗುಮಾಸ್ತೆ ಶ್ರೀಮತಿ ಸಂಧ್ಯಾ, ಶಾಲಾ ನಾಯಕ ಮತ್ತು ಉಪನಾಯಕ ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಸತ್ತಿನ ರಾಜ್ಯಪಾಲೆ ಸಿಸ್ಟರ್ ಕ್ರಿಸ್ಸೆನ್ಸ್ ಮಂತ್ರಿಗಳ ಪ್ರತಿಜ್ಞೆ ಸ್ವೀಕರಿಸಿದರು. ಮುಖ್ಯ ಅತಿಥಿಯಾಗಿ, ರಕ್ಷಕ ಶಿಕ್ಷಕ ಸಂಘದ ನೂತನ ಪದಾಧಿಕಾರಿ ಶ್ರೀಭಾಸ್ಕರ್ ಖಾರ್ವಿ ಉಪಸ್ಥಿತರಿದ್ದರು. ಶ್ರೀಮತಿ ಸಂಧ್ಯಾ ಖಾರ್ವಿರವರು ಈ ಶಾಲೆಯಲ್ಲಿ ಪಡೆದ ಶಿಕ್ಷಣದ ಅನುಭವವನ್ನು ಹಂಚಿಕೊಂಡರು. ಸಂವಿಧಾನದ ಮೂಲಭೂತ ನಿಯಮಗಳನ್ನು ಭಗಿನಿ.ಡಯಾನರವರು ತಿಳಿಸಿದರು.
ಶಾಲಾ ನಾಯಕನಾಗಿ ಕುಮಾರ ಆದಿತ್ಯ ಖಾರ್ವಿ, ಉಪನಾಯಕನಾಗಿ ಕುಮಾರ ವಿಕಾಸ ಖಾರ್ವಿ, ವಿರೋಧ ಪಕ್ಷದ ನಾಯಕಿಯಾಗಿ ಕುಮಾರಿ ಸ್ಪೂರ್ತಿ ಮತ್ತು ಇತರ 16 ಮಂತ್ರಿಗಳೊಂದಿಗೆ ತಮ್ಮ ಜವಾಬ್ದಾರಿಯನ್ನು ಸಭೆಯಲ್ಲಿ ಓದಿ ಹೇಳಿ ಅಧಿಕೃತ ಕಡತಕ್ಕೆ ಸಹಿ ಹಾಕಿ, ಬ್ಯಾಡ್ಜ್ ಧರಿಸಿಕೊಂಡರು.
ಕುಮಾರಿ ಕೃತಿಕಾ ಮತ್ತು ಭಾನ್ವಿತ ಕಾರ್ಯಕ್ರಮವನ್ನು ನಿರೂಪಿಸಿದರು. ಸಿಸ್ಟರ್ ವೈಲೆಟ್ ಎ.ಸಿ ಇವರ ಮಾರ್ಗದರ್ಶನದಲ್ಲಿ, ಶಿಕ್ಷಕ- ಶಿಕ್ಷಕೇತರ ವೃಂದದವರ ಸಹಕಾರದಿಂದ ಈ ಕಾರ್ಯಕ್ರಮ ಯಶಸ್ವಿಗೊಂಡಿತು. ಶಾಲಾ ಗೀತೆ ಮತ್ತು ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…