ಬೈಂದೂರು ವಲಯದ ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಗಾರ

Share

ಕುಂದಾಪುರ:ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಉಡುಪಿ ಜಿಲ್ಲೆ,ಬೈಂದೂರು ವಲಯದ ವತಿಯಿಂದ ಒಂದು ದಿನದ ಶೈಕ್ಷಣಿಕ ಕಾರ್ಯಗಾರ ಎಂ.ಭಾಸ್ಕರ್ ಪೈ ಸರ್ಕಾರಿ ಪ್ರೌಢಶಾಲೆ ಗುಜ್ಜಾಡಿ ಇಲ್ಲಿ ನಡೆಯಿತು.
ಶಾಲಾ ಎಸ್ ಡಿಎಂಸಿ ಅಧ್ಯಕ್ಷ ಸದಾನಂದ ಮೊವಾಡಿ ಅಧ್ಯಕ್ಷತೆ ವಹಿಸಿದ್ದರು.ಸಂಪನ್ಮೂಲ ವ್ಯಕ್ತಿ ಆಜಾದ್ ಅಹ್ಮದ್ ಅವರನ್ನು ಸನ್ಮಾನಿಸಲಾಯಿತು.ಕಂಬದ ಕೋಣೆ ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ ಚಂದ್ರ ಶೆಟ್ಟಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾದಿಕಾರಿ ಚಂದ್ರಶೇಖರ್ ಶೆಟ್ಟಿ ,ಎಸ್ ಡಿ ಎಂ ಸಿ ಸದಸ್ಯ ನಾಗರಾಜ್ ಮೋವಾಡಿ,ಜಿಲ್ಲಾ ಸಂಘದ ಉಪಾಧ್ಯಕ್ಷ ರವಿಶಂಕರ್ ಹೆಗ್ಡೆ ಯುವಜನ ಕ್ರೀಡಾಧಿಕಾರಿ ಪ್ರಭಾಕರ್ ಎಸ್ ಹಾಗೂ ಸಂಘದ ಗೌರವಾಧ್ಯಕ್ಷ ರಾಜು ಎಸ್ ಮಯ್ಯಾಡಿ ಉಪಸ್ಥಿತರಿದ್ದರು.ಸಂಪನ್ಮೂಲ ವ್ಯಕ್ತಿಗಳಾಗಿ ಆಜಾದ್ ಅಹಮದ್ ಹಾಗೂ ಮಂಜುನಾಥ್ ಶೆಟ್ಟಿ ಕಾರ್ಯ ನಿರ್ವಹಿಸಿದರು.ಸಂಘದ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಗುರುರಾಜ್ ಪೂಜಾರಿ ವಂದಿಸಿದರು. ರಾಜೀವ ಶೆಟ್ಟಿ ನೀಡುಟ್ಟಿ ನಿರೂಪಿಸಿದರು.

Advertisement

Share

Leave a comment

Your email address will not be published. Required fields are marked *

You cannot copy content of this page