ಬೈಂದೂರು,ಕುಂದಾಪುರ, ಬ್ರಹ್ಮಾವರ ತಾಲೂಕಿನ ಶಾಲಾ ಕಾಲೇಜ್‌ಗೆ ಜು.5 ರಂದು ರಜೆ ಘೋಷಣೆ

Share

Advertisement
Advertisement

ಕುಂದಾಪುರ:ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ರಿಂದ, ಹಲವೆಡೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ.ಬೈಂದೂರು, ಕುಂದಾಪುರ ತಾಲೂಕಿನಲ್ಲಿ ಭಾರೀ ವರ್ಷಧಾರೆ ಆಗುತ್ತಿದ್ದು, ನೆರೆ ಭೀತಿ ಉಂಟಾಗಿದೆ.ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಉಡುಪಿ ಜಿಲ್ಲೆಯ ಬೈಂದೂರು,ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 5) ರಜೆ ಘೋಷಿಸಲಾಗಿದೆ.

Advertisement

ಭಾರೀ ಗಾಳಿಮಳೆಗೆ ತಾಲೂಕಿನಾದ್ಯಂತ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಮಳೆ ಮುಂದುವರಿಯುವ ಸಾಧ್ಯತೆ ಇರುವ ಕಾರಣ ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ ಎಸ್.ಆ‌ರ್. ರಜೆ ಘೋಷಿಸಿ ಆದೇಶ ನೀಡಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ. ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

Advertisement
Advertisement


Share

Leave a comment

Your email address will not be published. Required fields are marked *

You cannot copy content of this page