ಮಂಗಳೂರು:ಬಜಪೆ ಮಾರುಕಟ್ಟೆ ಸಮೀಪದ ಖಾಸಗಿ ಫೈನಾನ್ಸೊಂದಕ್ಕೆ ಮೂವರು ಅಪರಿಚಿತ ವ್ಯಕ್ತಿಗಳು ಗುರುವಾರ ದಿಢೀರ್ ನುಗ್ಗಿ ಕ್ಲೋರೋಫಾರ್ಮ್ ಬಳಸಿ ದರೋಡೆಗೆ ಯತ್ನಿಸಿ ಪರಾರಿಯಾಗಿರುವ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಜೆ ಸುಮಾರು 4:30ರ ವೇಳೆಗೆ ಆಕ್ಟೀವ(ಸ್ಕೂಟಿ)ದಲ್ಲಿ ಬಜಪೆಯ ಮಸೀದಿ ಕಡೆಯಿಂದ ಆಗಮಿಸಿ ಹೂವಿನ ಮಾರುಕಟ್ಟೆ ಬಳಿಗೆ ಹೋಗಿ ವಾಪಾಸು ಬಂದು ಮಾರುಕಟ್ಟೆ ಸಮೀಪದ ಖಾಸಗಿ ಫೈನಾನ್ಸ್ ನ ಒಳಗೆ ಏಕಾಏಕಿ ನುಗ್ಗಿ ಚಿಕ್ಕ ಆಸಿಡ್ ತುಂಬಿದ ಡಬ್ಬವೊಂದರ ಮುಚ್ಚಳ ತೆಗೆದು ಟೇಬಲ್ ಮೇಲಿಟ್ಟು ಕ್ಯಾಶ್ ಗೆ ಬಲಾತ್ಕಾರವಾಗಿ ಕೈ ಹಾಕಲು ಪ್ರಯತ್ನಿಸಿದ ವೇಳೆ ತಡೆಯಲು ಯತ್ನಿಸಿದ ಫೈನಾನ್ಸ್ ನ ಇಬ್ಬರು ಸಿಬ್ಬಂದಿಗಳನ್ನು ದೂಡಿ ಹಾಕಿದಾಗ ಸಿಬ್ಬಂದಿಗಳು ಜೋರಾಗಿ ಕಿರುಚಿದ ಕಾರಣದಿಂದಾಗಿ ಆರೋಪಿಗಳು ಪ್ರಯತ್ನ ಕೈಬಿಟ್ಟು ಪರಾರಿಯಾಗಿದ್ದಾರೆ. ಮೂವರು ಆರೋಪಿಗಳ ಪೈಕಿ ಓರ್ವ ಹೆಲ್ಮೆಟ್ ಧಾರಿ ಸ್ಕೂಟರನ್ನು ಸ್ಟಾರ್ಟಿಂಗ್ ನಲ್ಲಿಯೇ ಕಾಯುತ್ತಿದ್ದು ಇಬ್ಬರ ಪೈಕಿ ಓರ್ವ ಬುರ್ಖಾಧಾರಿಯಾಗಿದ್ದು ಸವಾರನ ಹಿಂಬದಿಯಲ್ಲಿ (ಮಧ್ಯದಲ್ಲಿ) ಕುಳಿತು ಹೋದ ಚಲನವಲನಗಳನ್ನು ಪ್ರತ್ಯಕ್ಷದರ್ಶಿಯಾಗಿ ಹಾಗೂ ಸಿಸಿ ಕ್ಯಾಮರಾದ ದೃಶ್ಯಗಳನ್ನು ಗಮನಿಸಿ ಬುರ್ಖಾಧಾರಿ ವ್ಯಕ್ತಿ ಮಹಿಳೆಯಲ್ಲ ಗಂಡಸು ಎಂದು ಶಂಕಿಸಲಾಗಿದೆ. ಫೈನಾನ್ಸ್ ಗೆ ನುಗ್ಗಿದ ಇಬ್ಬರಲ್ಲಿ ಓರ್ವ ಹೆಲ್ಮೆಟ್ ಹಾಗೂ ರೈನ್ ಕೋಟ್ ಧರಿಸಿಯೇ ಇದ್ದ ಎನ್ನಲಾಗಿದೆ. ಪ್ರಕರಣದ ತನಿಖೆಗಾಗಿ ಫೋರೇನ್ಸಿಕ್, ಬೆರಳಚ್ಚು ತಜ್ಞರ ತಂಡ ಹಾಗೂ ಬಜಪೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ದರೋಡೆಗೆ ಯತ್ನಿಸಿದ ಮೂವರು ಅಪರಿಚಿತರ ತಂಡ ಒಂದೇ ಸ್ಕೂಟರ್ ನಲ್ಲಿ ಅತಿವೇಗದಿಂದ ಮಸೀದಿ ಪಕ್ಕದ ರಸ್ತೆಯ ಮುರಾ ಜಂಕ್ಷನ್ ಮೂಲಕ ಕೊಳಂಬೆ ಮಾರ್ಗವಾಗಿ ಗುರುಪುರ ಕೈಕಂಬ ಕಡೆಗೆ ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆರೋಪಿಗಳು ತಂದಿಟ್ಟ ಆಸಿಡ್ ಕ್ಲೋರೋಫಾರ್ಮ್ ಎನ್ನಲಾಗಿದ್ದು ಹೆಚ್ಚುವರಿ ತಪಾಸಣೆಯ ಬಳಿಕ ದೃಢಪಡಬೇಕಾಗಿದ್ದು ವ್ಯವಸ್ಥಿತ ಸಂಚು ನಡೆಸಿ ಹಗಲುದರೋಡೆಯ ಪ್ರಯತ್ನ ನಡೆಸಿರುವುದರ ಹಿಂದೆ ಜಾಲವೊಂದರ ಕೈವಾಡ ಇರಬಹುದೆಂದು ಶಂಕಿಸಲಾಗಿದೆ. ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…