ಮಂಗಳೂರು:ಬಜಪೆ ಮಾರುಕಟ್ಟೆ ಸಮೀಪದ ಖಾಸಗಿ ಫೈನಾನ್ಸೊಂದಕ್ಕೆ ಮೂವರು ಅಪರಿಚಿತ ವ್ಯಕ್ತಿಗಳು ಗುರುವಾರ ದಿಢೀರ್ ನುಗ್ಗಿ ಕ್ಲೋರೋಫಾರ್ಮ್ ಬಳಸಿ ದರೋಡೆಗೆ ಯತ್ನಿಸಿ ಪರಾರಿಯಾಗಿರುವ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಜೆ ಸುಮಾರು 4:30ರ ವೇಳೆಗೆ ಆಕ್ಟೀವ(ಸ್ಕೂಟಿ)ದಲ್ಲಿ ಬಜಪೆಯ ಮಸೀದಿ ಕಡೆಯಿಂದ ಆಗಮಿಸಿ ಹೂವಿನ ಮಾರುಕಟ್ಟೆ ಬಳಿಗೆ ಹೋಗಿ ವಾಪಾಸು ಬಂದು ಮಾರುಕಟ್ಟೆ ಸಮೀಪದ ಖಾಸಗಿ ಫೈನಾನ್ಸ್ ನ ಒಳಗೆ ಏಕಾಏಕಿ ನುಗ್ಗಿ ಚಿಕ್ಕ ಆಸಿಡ್ ತುಂಬಿದ ಡಬ್ಬವೊಂದರ ಮುಚ್ಚಳ ತೆಗೆದು ಟೇಬಲ್ ಮೇಲಿಟ್ಟು ಕ್ಯಾಶ್ ಗೆ ಬಲಾತ್ಕಾರವಾಗಿ ಕೈ ಹಾಕಲು ಪ್ರಯತ್ನಿಸಿದ ವೇಳೆ ತಡೆಯಲು ಯತ್ನಿಸಿದ ಫೈನಾನ್ಸ್ ನ ಇಬ್ಬರು ಸಿಬ್ಬಂದಿಗಳನ್ನು ದೂಡಿ ಹಾಕಿದಾಗ ಸಿಬ್ಬಂದಿಗಳು ಜೋರಾಗಿ ಕಿರುಚಿದ ಕಾರಣದಿಂದಾಗಿ ಆರೋಪಿಗಳು ಪ್ರಯತ್ನ ಕೈಬಿಟ್ಟು ಪರಾರಿಯಾಗಿದ್ದಾರೆ. ಮೂವರು ಆರೋಪಿಗಳ ಪೈಕಿ ಓರ್ವ ಹೆಲ್ಮೆಟ್ ಧಾರಿ ಸ್ಕೂಟರನ್ನು ಸ್ಟಾರ್ಟಿಂಗ್ ನಲ್ಲಿಯೇ ಕಾಯುತ್ತಿದ್ದು ಇಬ್ಬರ ಪೈಕಿ ಓರ್ವ ಬುರ್ಖಾಧಾರಿಯಾಗಿದ್ದು ಸವಾರನ ಹಿಂಬದಿಯಲ್ಲಿ (ಮಧ್ಯದಲ್ಲಿ) ಕುಳಿತು ಹೋದ ಚಲನವಲನಗಳನ್ನು ಪ್ರತ್ಯಕ್ಷದರ್ಶಿಯಾಗಿ ಹಾಗೂ ಸಿಸಿ ಕ್ಯಾಮರಾದ ದೃಶ್ಯಗಳನ್ನು ಗಮನಿಸಿ ಬುರ್ಖಾಧಾರಿ ವ್ಯಕ್ತಿ ಮಹಿಳೆಯಲ್ಲ ಗಂಡಸು ಎಂದು ಶಂಕಿಸಲಾಗಿದೆ. ಫೈನಾನ್ಸ್ ಗೆ ನುಗ್ಗಿದ ಇಬ್ಬರಲ್ಲಿ ಓರ್ವ ಹೆಲ್ಮೆಟ್ ಹಾಗೂ ರೈನ್ ಕೋಟ್ ಧರಿಸಿಯೇ ಇದ್ದ ಎನ್ನಲಾಗಿದೆ. ಪ್ರಕರಣದ ತನಿಖೆಗಾಗಿ ಫೋರೇನ್ಸಿಕ್, ಬೆರಳಚ್ಚು ತಜ್ಞರ ತಂಡ ಹಾಗೂ ಬಜಪೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ದರೋಡೆಗೆ ಯತ್ನಿಸಿದ ಮೂವರು ಅಪರಿಚಿತರ ತಂಡ ಒಂದೇ ಸ್ಕೂಟರ್ ನಲ್ಲಿ ಅತಿವೇಗದಿಂದ ಮಸೀದಿ ಪಕ್ಕದ ರಸ್ತೆಯ ಮುರಾ ಜಂಕ್ಷನ್ ಮೂಲಕ ಕೊಳಂಬೆ ಮಾರ್ಗವಾಗಿ ಗುರುಪುರ ಕೈಕಂಬ ಕಡೆಗೆ ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆರೋಪಿಗಳು ತಂದಿಟ್ಟ ಆಸಿಡ್ ಕ್ಲೋರೋಫಾರ್ಮ್ ಎನ್ನಲಾಗಿದ್ದು ಹೆಚ್ಚುವರಿ ತಪಾಸಣೆಯ ಬಳಿಕ ದೃಢಪಡಬೇಕಾಗಿದ್ದು ವ್ಯವಸ್ಥಿತ ಸಂಚು ನಡೆಸಿ ಹಗಲುದರೋಡೆಯ ಪ್ರಯತ್ನ ನಡೆಸಿರುವುದರ ಹಿಂದೆ ಜಾಲವೊಂದರ ಕೈವಾಡ ಇರಬಹುದೆಂದು ಶಂಕಿಸಲಾಗಿದೆ. ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…