ಮಂಗಳೂರು:ಬಜಪೆ ಮಾರುಕಟ್ಟೆ ಸಮೀಪದ ಖಾಸಗಿ ಫೈನಾನ್ಸೊಂದಕ್ಕೆ ಮೂವರು ಅಪರಿಚಿತ ವ್ಯಕ್ತಿಗಳು ಗುರುವಾರ ದಿಢೀರ್ ನುಗ್ಗಿ ಕ್ಲೋರೋಫಾರ್ಮ್ ಬಳಸಿ ದರೋಡೆಗೆ ಯತ್ನಿಸಿ ಪರಾರಿಯಾಗಿರುವ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಜೆ ಸುಮಾರು 4:30ರ ವೇಳೆಗೆ ಆಕ್ಟೀವ(ಸ್ಕೂಟಿ)ದಲ್ಲಿ ಬಜಪೆಯ ಮಸೀದಿ ಕಡೆಯಿಂದ ಆಗಮಿಸಿ ಹೂವಿನ ಮಾರುಕಟ್ಟೆ ಬಳಿಗೆ ಹೋಗಿ ವಾಪಾಸು ಬಂದು ಮಾರುಕಟ್ಟೆ ಸಮೀಪದ ಖಾಸಗಿ ಫೈನಾನ್ಸ್ ನ ಒಳಗೆ ಏಕಾಏಕಿ ನುಗ್ಗಿ ಚಿಕ್ಕ ಆಸಿಡ್ ತುಂಬಿದ ಡಬ್ಬವೊಂದರ ಮುಚ್ಚಳ ತೆಗೆದು ಟೇಬಲ್ ಮೇಲಿಟ್ಟು ಕ್ಯಾಶ್ ಗೆ ಬಲಾತ್ಕಾರವಾಗಿ ಕೈ ಹಾಕಲು ಪ್ರಯತ್ನಿಸಿದ ವೇಳೆ ತಡೆಯಲು ಯತ್ನಿಸಿದ ಫೈನಾನ್ಸ್ ನ ಇಬ್ಬರು ಸಿಬ್ಬಂದಿಗಳನ್ನು ದೂಡಿ ಹಾಕಿದಾಗ ಸಿಬ್ಬಂದಿಗಳು ಜೋರಾಗಿ ಕಿರುಚಿದ ಕಾರಣದಿಂದಾಗಿ ಆರೋಪಿಗಳು ಪ್ರಯತ್ನ ಕೈಬಿಟ್ಟು ಪರಾರಿಯಾಗಿದ್ದಾರೆ. ಮೂವರು ಆರೋಪಿಗಳ ಪೈಕಿ ಓರ್ವ ಹೆಲ್ಮೆಟ್ ಧಾರಿ ಸ್ಕೂಟರನ್ನು ಸ್ಟಾರ್ಟಿಂಗ್ ನಲ್ಲಿಯೇ ಕಾಯುತ್ತಿದ್ದು ಇಬ್ಬರ ಪೈಕಿ ಓರ್ವ ಬುರ್ಖಾಧಾರಿಯಾಗಿದ್ದು ಸವಾರನ ಹಿಂಬದಿಯಲ್ಲಿ (ಮಧ್ಯದಲ್ಲಿ) ಕುಳಿತು ಹೋದ ಚಲನವಲನಗಳನ್ನು ಪ್ರತ್ಯಕ್ಷದರ್ಶಿಯಾಗಿ ಹಾಗೂ ಸಿಸಿ ಕ್ಯಾಮರಾದ ದೃಶ್ಯಗಳನ್ನು ಗಮನಿಸಿ ಬುರ್ಖಾಧಾರಿ ವ್ಯಕ್ತಿ ಮಹಿಳೆಯಲ್ಲ ಗಂಡಸು ಎಂದು ಶಂಕಿಸಲಾಗಿದೆ. ಫೈನಾನ್ಸ್ ಗೆ ನುಗ್ಗಿದ ಇಬ್ಬರಲ್ಲಿ ಓರ್ವ ಹೆಲ್ಮೆಟ್ ಹಾಗೂ ರೈನ್ ಕೋಟ್ ಧರಿಸಿಯೇ ಇದ್ದ ಎನ್ನಲಾಗಿದೆ. ಪ್ರಕರಣದ ತನಿಖೆಗಾಗಿ ಫೋರೇನ್ಸಿಕ್, ಬೆರಳಚ್ಚು ತಜ್ಞರ ತಂಡ ಹಾಗೂ ಬಜಪೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ದರೋಡೆಗೆ ಯತ್ನಿಸಿದ ಮೂವರು ಅಪರಿಚಿತರ ತಂಡ ಒಂದೇ ಸ್ಕೂಟರ್ ನಲ್ಲಿ ಅತಿವೇಗದಿಂದ ಮಸೀದಿ ಪಕ್ಕದ ರಸ್ತೆಯ ಮುರಾ ಜಂಕ್ಷನ್ ಮೂಲಕ ಕೊಳಂಬೆ ಮಾರ್ಗವಾಗಿ ಗುರುಪುರ ಕೈಕಂಬ ಕಡೆಗೆ ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆರೋಪಿಗಳು ತಂದಿಟ್ಟ ಆಸಿಡ್ ಕ್ಲೋರೋಫಾರ್ಮ್ ಎನ್ನಲಾಗಿದ್ದು ಹೆಚ್ಚುವರಿ ತಪಾಸಣೆಯ ಬಳಿಕ ದೃಢಪಡಬೇಕಾಗಿದ್ದು ವ್ಯವಸ್ಥಿತ ಸಂಚು ನಡೆಸಿ ಹಗಲುದರೋಡೆಯ ಪ್ರಯತ್ನ ನಡೆಸಿರುವುದರ ಹಿಂದೆ ಜಾಲವೊಂದರ ಕೈವಾಡ ಇರಬಹುದೆಂದು ಶಂಕಿಸಲಾಗಿದೆ. ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…