ಮುಳ್ಳಿಕಟ್ಟೆ ಸರ್ಕಲ್ನಲ್ಲಿ ಸಕ್ಕರೆ ತುಂಬಿದ ಲಾರಿ ಪಲ್ಟಿ

ಕುಂದಾಪುರ:ರಾಷ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರ ಕಡೆಯಿಂದ ಬಂಟ್ವಾಡಿ ಕಡೆಗೆ ಸಾಗುತ್ತಿದ್ದ ಟ್ರಕ್ ಮುಳ್ಳಿಕಟ್ಟೆ ಸರ್ಕಲ್ನಲ್ಲಿ ಯೂರ್ಟನ್ ತೆಗೆದು ಕೊಳ್ಳುತ್ತಿದ್ದ ಸಮಯದಲ್ಲಿ ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ವೇಗವಾಗಿ ಸಾಗುತ್ತಿದ್ದ ಸಕ್ಕರೆ ತುಂಬಿದ ಲಾರಿ ಟ್ರಕ್ನ ಹಿಂಭಾಗಕ್ಕೆ ಡಿಕ್ಕಿ ಹೊಡೆದು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ರಸ್ತೆ ಮೇಲೆ ಉರುಳಿ ಬಿದ್ದಿದ ಘಟನೆ ಶುಕ್ರವಾರ ನಡೆದಿದೆ.
ಅಪಘಾತದಲ್ಲಿ ಲಾರಿ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.ಸಕ್ಕರೆ ಚೀಲ ರಸ್ತೆ ತುಂಬೆಲ್ಲಾ ಉರುಳಿ ಬಿದ್ದಿದ್ದು.ಧಾರಾಕಾರವಾಗಿ ಮಳೆ ಸುರಿಯುತ್ತಿದ್ದ ಪರಿಣಾಮ ಸಕ್ಕರೆ ಚೀಲಕ್ಕೆ ಮಳೆ ನೀರು ತಾಗಿ ಸಾಕಷ್ಟು ಹಾನಿ ಉಂಟಾಗಿದೆ.ಅಪಘಾತದಲ್ಲಿ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಘಟನಾ ಸ್ಥಳಕ್ಕೆ ಗಂಗೊಳ್ಳಿ ಠಾಣೆ ಸಿಬ್ಬಂದಿಗಳು ಭೇಟಿ ನೀಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.ಅಜಾಗರುಕತೆಯಿಂದ ಸರ್ಕಲ್ನಲ್ಲಿ ಟ್ರಕ್ ಚಾಲಕ ಯೂರ್ಟನ್ ತೆಗೆದುಕೊಂಡಿದ್ದರ ಪರಿಣಾಮ ಅಪಘಾತ ಸಂಭವಿಸಲು ಪ್ರಮುಖ ಕಾರಣ ಎಂದು ಸ್ಥಳೀಯರು ಅಭಿಪ್ರಾಯ ಪಟ್ಟಿದ್ದಾರೆ.ಸಕ್ಕರೆ ಚೀಲಗಳನ್ನು ಶಂಕರ್ ನಾಗ್ ಆಟೋ ಸ್ಟ್ಯಾಂಡ್ನ ಒಳಗಡೆ ದಾಸ್ತಾನು ಮಾಡಿದ ಬಳಿಕ ಬದಲಿ ವಾಹನದಲ್ಲಿ ಸಾಗಾಟವನ್ನು ಮಾಡಲಾಯಿತು.