ಕುಂದಾಪುರ

ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ,ತುರ್ತು ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ

Share

ಬೈಂದೂರು:ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಕ್ಷೇತ್ರದ ಕೆಲವು ಭಾಗದಲ್ಲಿ ನೆರೆ ಆವರಿಸಿದ್ದ ಹಿನ್ನೆಲೆಯಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆಯವರು ಬೆಂಗಳೂರಿನಲ್ಲಿ ತಮ್ಮ ಪೂರ್ವ ನಿಯೋಜಿತ ಕಾರ್ಯಕ್ರಮಗಳನ್ನು ಹಠತ್ ರದ್ದುಗೊಳಿಸಿ ನೇರವಾಗಿ ಕ್ಷೇತ್ರಕ್ಕೆ ಆಗಮಿಸಿ,ಶುಕ್ರವಾರ ಬೆಳಗ್ಗೆಯಿಂದ ನೆರೆಪೀಡಿದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಾರ್ವಜನಿಕರು ಸೇರಿದಂತೆ ನೆರೆಹಾನಿಗೆ ಒಳಗಾದವರೊಂದಿಗೆ ಮಾತುಕತೆ ನಡೆಸಿದರು.
ನಾವುಂದ ಭಾಗದ ಸಾಲ್ಬುಡ, ನಾಡಾ ಗ್ರಾಮದ ಚಿಕ್ಕಳ್ಳಿ, ಸಂಸಾಡಿ, ಹೆಮ್ಮುಂಜಿ, ಕೊಂಣ್ಕೀ ಪ್ರದೇಶಗಳಲ್ಲಿ ಮಳೆಯಿಂದಾಗಿ ನೆರೆ, ಪ್ರವಾಹ, ಗುಡ್ಡೆ ಕುಸಿತ ಉಂಟಾಗಿದ್ದು ಸ್ಥಳಕ್ಕೆ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಭೇಟಿ ನೀಡಿ ಜನರ ರಕ್ಷಣೆ, ಸ್ಥಳಾಂತರ ಮತ್ತು ಪರಿಹಾರ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸಿ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತಕ್ಕೆ ಅಗತ್ಯ ಸೂಚನೆ ನೀಡಿದರು.
ನೆರೆ ಪೀಡಿದ ಪ್ರದೇಶದ ಜನತೆಗೆ ತುರ್ತಾಗಿ ಆಗಬೇಕಿರುವ ಅಗತ್ಯ ಮೂಲಸೌಕರ್ಯದ ಜತೆಗೆ ಶಾಶ್ವತ ಪರಿಹಾರ ಕಾರ್ಯಗಳ ಬಗ್ಗೆಯೂ ಆದಷ್ಟು ಬೇಗ ಕ್ರಮ ವಹಿಸಬೇಕು. ಯಾರಿಗೂ ಕೂಡ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇದೇ ವೇಳೆ ಸ್ಥಳೀಯರದಿಂದಲೂ ಶಾಸಕರು ಮಾಹಿತಿ ಪಡೆದುಕೊಂಡರು.
ಎಚ್ಚರಿಕೆ ವಹಿಸಲು ಮನವಿ
ಎಡೆಬಿಡದೆ ಸುರಿಯುತ್ತಿರುವ ಮಳೆಯು ಇನ್ನಷ್ಟು ಅಪಾಯ ತಂದೊಡ್ಡುವ ಭೀತಿ ಇದ್ದು, ಕ್ಷೇತ್ರದ ಜನರು ಸಂಭಾವ್ಯ ಅಪಾಯಗಳ ಬಗ್ಗೆ ಜಾಗರೂಕರಾಗಿರಬೇಕು. ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತಕ್ಕೆ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಬೇಕು. ವಿಶೇಷವಾಗಿ ಶಾಲಾ ಕಾಲೇಜಿಗೆ ಹೋಗುವ ವಿದ್ಯಾಾರ್ಥಿಗಳು ಎಚ್ಚರ ವಹಿಸಬೇಕು. ಸಮುದ್ರ, ನದಿ ಹಾಗೂ ಡ್ಯಾಮ್‌ಗಳಿಗೆ ಈಜುವುದು,‌ ಇಳಿಯುವುದು ಇತ್ಯಾದಿ ಮಾಡಬಾರದು.‌ ನದಿ, ಹೊಳೆ, ತೋಡು, ಹಳ್ಳ ದಾಟುವಾಗ ಎಚ್ಚರ ವಹಿಸಬೇಕು. ನೀರಿನ ಕರೆ, ಬಾವಿ ಸಹಿತ ಮೂಲಗಳಿಗೆ ಮಕ್ಕಳನ್ನು ಬಿಡಬಾರದು ಎಂದು ಶಾಸಕ ಗುರುರಾಜ್ ಗಂಟಿಹೊಳೆ ಅವರು ಮನವಿ ಮಾಡಿದ್ದಾರೆ.
ವಿಪತ್ತು ನಿರ್ವಹಣ ತಂಡದ ಜತೆ ಭೇಟಿ
ಗುಲ್ವಾಡಿ ಗ್ರಾಮ ಪಂಚಾಯತ್ ವ್ಯಾಾಪ್ತಿಯ ಸೌಕೂರು ಬಳಿ ಮನೆಗೆ ಮಳೆ ನೀರಿನಿಂದ ನೀರು ನುಗ್ಗಿದ್ದು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದ ವಿಪತ್ತು ನಿರ್ವಹಣ ತಂಡದ ಸದಸ್ಯರು ಭೇಟಿ ಸ್ಥಳಕ್ಕೆ ಭೇಟಿ ನೀಡಿದರು. ಮಳೆಗಾಲದ ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಈಗಾಗಲೇ ಶಾಸಕರ ನೇತೃತ್ವದಲ್ಲಿ ಎರಡು ತಂಡ ರಚನೆ ಮಾಡಲಾಗಿದ್ದು, ಆ ತಂಡವು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ವಿಪತ್ತು ನಿರ್ವಹಣೆ ಸಂಬಂಧ ಎರಡು ತಂಡಗಳು ಸ್ಥಳೀಯರು ಹಾಗೂ ಸ್ಥಳೀಯ ಕಾರ್ಯಕರ್ತರ ಮನ್ವಯದೊಂದಿಗೆ ಕಾರ್ಯ ನಿರ್ವಹಣೆ ಮಾಡುತ್ತಿದೆ.
ಕಟ್ ಬೆಲ್ತೂರು ಗ್ರಾಮ ಪಂಚಾಯತ್ ವ್ಯಾಾಪ್ತಿಯ ಪಡುಕುದ್ರು ಎಂಬಲ್ಲಿ ಮಳೆಯಿಂದ ನೆರೆ ಉಂಟಾಗಿದ್ದು ಶಾಸಕರಾದ ಗುರುರಾಜ್ ಗಂಟಿಹೊಳೆ ಇವರ ನೇತೃತ್ವದ ವಿಪತ್ತು ನಿರ್ವಹಣಾ ತಂಡದ ಸಂಚಾಲಕರಾದ ರಾಘವೇಂದ್ರ ನೆಂಪು, ಸದಸ್ಯರಾದ ಚಂದ್ರ ಜೋಗಿ ಶಾನ್ಕಟ್ಟು ಭೇಟಿ ನೀಡಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವೈಶಾಲಿ, ಗ್ರಾಮ ಪಂಚಾಯತ್ ಸದಸ್ಯರಾದ ಅಶೋಕ್ ಬಳೆಗಾರ್, ಆರ್.ಐ. ರಾಘವೇಂದ್ರ, ಪಿ.ಡಿ.ಓ. ರಿಯಾಜ್ ಅಹಮದ್, ವಿ.ಎ. ಸೋಮಣ್ಣ ಅವರು ನೆರೆ ಪೀಡಿತ ಸ್ಥಳದ ಬಗ್ಗೆ ಮಾಹಿತಿ ಕಲೆಹಾಕಿದರು.
ತಹಶೀಲ್ದಾಾರ್ ಭೇಟಿ
ಕಟ್ ಬೆಲ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಮ್ಲಾಡಿ ಎಂಬಲ್ಲಿ ಮನೆಗಳಿಗೆ ನೆರೆ ನೀರು ನುಗ್ಗಿದ್ದು ಸ್ಥಳಕ್ಕೆ ತಹಶೀಲ್ದಾರ್ ಶೋಭಾ ಲಕ್ಷ್ಮೀ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ವೈಶಾಲಿ, ಪಂಚಾಯತ್ ಸದಸ್ಯರಾದ ಅಶೋಕ್ ಬಳೆಗಾರ್, ಆರ್‌ಐ ರಾಘವೇಂದ್ರ, ಪಿಡಿಒ ರಿಯಾಜ್ ಅಹಮದ್, ವಿಎ ಸೋಮಣ್ಣ, ಹಾಗೂ ಶಾಸಕರಾದ ಗುರುರಾಜ್ ಗಂಟಿಹೊಳೆ ಇವರ ನೇತೃತ್ವದ ವಿಪತ್ತು ನಿರ್ವಹಣಾ ತಂಡದ ಸಂಚಾಲಕರಾದ ರಾಘವೇಂದ್ರ ನೆಂಪು, ಸದಸ್ಯರಾದ ಚಂದ್ರ ಜೋಗಿ ಶಾನ್ಕಟ್ಟು, ಹಾಗೂ ಸ್ಥಳೀಯರು ಭೇಟಿ ನೀಡಿದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago