ತಾಂತ್ರಿಕ ಸಮಸ್ಯೆ:ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಪೊಲೀಸ್ ಜೀಪ್ ಪಲ್ಟಿ

Share

Advertisement
Advertisement

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರವಾರ ದಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರವಾರ ಪೊಲೀಸ್ ಠಾಣೆಗೆ ಸಂಬಂಧಿಸಿದ ಜೀಪ್‍ನಲ್ಲಿ ಉಂಟಾದ ತಾಂತ್ರಿಕ ಸಮಸ್ಯೆಯಿಂದಾಗಿ ಚಲಿಸುತ್ತಿದ್ದಾಗಲೆ ನಿಯಂತ್ರಣ ಕಳೆದುಕೊಂಡು ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಸ್ಕಿಡ್ಡ್ ಆಗಿ ಪಲ್ಟಿ ಹೊಡೆದು ರಸ್ತೆ ಮೇಲೆ ಉರುಳಿ ಬಿದ್ದ ಘಟನೆ ಸೋಮವಾರ ನಡೆದಿದೆ.ಅಪಘಾತದಲ್ಲಿ ಪೊಲೀಸ್ ಜಿಪ್ ಡ್ರೈವರ್ ಸೇರಿದಂತೆ ಇಬ್ಬರು ಸಿಬ್ಬಂದಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೈಂದೂರು ಸರ್ಕಲ್ ಇನ್‍ಸ್ಪೆಕ್ಟರ್ ಸವಿತ್ರ ತೇಜ,ಗಂಗೊಳ್ಳಿ ಪೊಲೀಸ್ ಠಾಣೆ ಪಿಎಸ್‍ಐ ಹರೀಶ್ ಆರ್ ಮತ್ತು ಗುಪ್ತಚರ ಪಿಎಸ್‍ಐ ಬಸವರಾಜ ಕಣಶೆಟ್ಟಿ ಹಾಗೂ ಸಿಬ್ಬಂದಿಗಳು ಘಟನೆ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.ಅಪಘಾತಕ್ಕೆ ಈಡಾಗಿದ್ದ ಕಾರವಾರ ಪೊಲೀಸ್ ಠಾಣೆಗೆ ಸಂಬಂಧಿಸಿದ ಜೀಪ್‍ನಲ್ಲಿ ಕಾರವಾರ ಪೊಲೀಸ್ ಠಾಣೆ ಪೊಲೀಸ್ ಇನ್‍ಸ್ಪೆಕ್ಟರ್ ರಮೇಶ್ ಹುಣಾಗಾರ್ ಮತ್ತು ಸಿಬ್ಬಂದಿಗಳು ಸೇರಿ ಒಟ್ಟು ನಾಲ್ಕು ಜನ ಪ್ರಯಾಣಿಸುತ್ತಿದ್ದರು.ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಇಬ್ರಾಹಿಂ ಗಂಗೊಳ್ಳಿ ಆಂಬ್ಯುಲೆನ್ಸ್ ನೆರವಾದರು.

Advertisement
Advertisement
Advertisement


Share

Leave a comment

Your email address will not be published. Required fields are marked *

You cannot copy content of this page