ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರವಾರ ದಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರವಾರ ಪೊಲೀಸ್ ಠಾಣೆಗೆ ಸಂಬಂಧಿಸಿದ ಜೀಪ್ನಲ್ಲಿ ಉಂಟಾದ ತಾಂತ್ರಿಕ ಸಮಸ್ಯೆಯಿಂದಾಗಿ ಚಲಿಸುತ್ತಿದ್ದಾಗಲೆ ನಿಯಂತ್ರಣ ಕಳೆದುಕೊಂಡು ಮುಳ್ಳಿಕಟ್ಟೆ ಸರ್ಕಲ್ನಲ್ಲಿ ಸ್ಕಿಡ್ಡ್ ಆಗಿ ಪಲ್ಟಿ ಹೊಡೆದು ರಸ್ತೆ ಮೇಲೆ ಉರುಳಿ ಬಿದ್ದ ಘಟನೆ ಸೋಮವಾರ ನಡೆದಿದೆ.ಅಪಘಾತದಲ್ಲಿ ಪೊಲೀಸ್ ಜಿಪ್ ಡ್ರೈವರ್ ಸೇರಿದಂತೆ ಇಬ್ಬರು ಸಿಬ್ಬಂದಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೈಂದೂರು ಸರ್ಕಲ್ ಇನ್ಸ್ಪೆಕ್ಟರ್ ಸವಿತ್ರ ತೇಜ,ಗಂಗೊಳ್ಳಿ ಪೊಲೀಸ್ ಠಾಣೆ ಪಿಎಸ್ಐ ಹರೀಶ್ ಆರ್ ಮತ್ತು ಗುಪ್ತಚರ ಪಿಎಸ್ಐ ಬಸವರಾಜ ಕಣಶೆಟ್ಟಿ ಹಾಗೂ ಸಿಬ್ಬಂದಿಗಳು ಘಟನೆ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.ಅಪಘಾತಕ್ಕೆ ಈಡಾಗಿದ್ದ ಕಾರವಾರ ಪೊಲೀಸ್ ಠಾಣೆಗೆ ಸಂಬಂಧಿಸಿದ ಜೀಪ್ನಲ್ಲಿ ಕಾರವಾರ ಪೊಲೀಸ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ರಮೇಶ್ ಹುಣಾಗಾರ್ ಮತ್ತು ಸಿಬ್ಬಂದಿಗಳು ಸೇರಿ ಒಟ್ಟು ನಾಲ್ಕು ಜನ ಪ್ರಯಾಣಿಸುತ್ತಿದ್ದರು.ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಇಬ್ರಾಹಿಂ ಗಂಗೊಳ್ಳಿ ಆಂಬ್ಯುಲೆನ್ಸ್ ನೆರವಾದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…