ಕುಂದಾಪುರ:ಮಳೆಗಾಲದಲ್ಲಿ ಕಡಲು ಪ್ರಕ್ಷುಬ್ಧಗೊಳ್ಳುವುದರಿಂದ ಕಡಲಿಗೆ ಇಳಿಯದಂತೆ ನಿಷೇಧ ಹೇರಲಾಗಿದ್ದರು ತ್ರಾಸಿ-ಮರವಂತೆ ಬೀಚ್ಗೆ ಆಗಮಿಸುತ್ತಿರುವ ಪ್ರವಾಸಿಗರು ನಿಷೇಧದ ನಡುವೆಯೂ ಕಡಲಿಗೆ ಇಳಿದು ಮೋಜು ಮಸ್ತಿಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ.ಪ್ರವಾಸಿಗರ ಹಿತದೃಷ್ಟಿಯಿಂದ ಗಂಗೊಳ್ಳಿ ಠಾಣೆಯ ಠಾಣಾಧಿಕಾರಿ ಹರೀಶ್.ಆರ್ ನಾಯ್ಕ್ ಅವರು ಕಡಲ ಪ್ರಕ್ಷುಬ್ಧತೆ ಕುರಿತು ಪ್ರವಾಸಿಗರಿಗೆ ತಿಳಿ ಹೇಳುತ್ತಿರುವ ಪಾಠ ಜನ ಮೆಚ್ಚುಗೆಗೆ ಪಾತ್ರವಾಗಿದೆ.
ದೈತ್ಯಾಕಾರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿರುವ ದೃಶ್ಯವನ್ನು ತಮ್ಮ ಸೆಲ್ಫಿ ಜತೆಗೆ ಸೇರೆ ಹಿಡಿಯಲು ಕೆಂಪು ಪಟ್ಟಿಯನ್ನು ದಾಟಿ ಬ್ರೆಕ್ ವಾಟರ್ ಮೇಲೆ ಪ್ರವಾಸಿಗರು ತೆರಳುತ್ತಿದ್ದಾರೆ.ಕಲ್ಲಿನ ಮೇಲೆ ಪಾಚಿ ಬೆಳೆದಿದ್ದರಿಂದ ಕಲ್ಲು ಜಾರುವ ಸಂಭವ ಅಧಿಕವಾಗಿದ್ದು ಪ್ರವಾಸಿಗರು ಬ್ರೆಕ್ ವಾಟರ್ ಮೇಲೆ ತೆರಳುತ್ತಿರುವುದು ಅಪಾಯಕ್ಕೆ ಆಹ್ವಾನ ನೀಡಿದಂತೆ ಇದೆ.ಮಕ್ಕಳೊಂದಿಗೆ ಕಡಲ ತೀರಕ್ಕೆ ಇಳಿದು ನೀರಿನೊಂದಿಗೆ ಆಟವಾಡುತ್ತಾ ಮೋಜು ಮಸ್ತಿಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ.ಕಡಲಿಗೆ ಇಳಿಯದಂತೆ ಸೂಚನಾ ಫಲಕಗಳನ್ನು ಅಳವಡಿಕೆ ಮಾಡಿದ್ದರು ಪ್ರವಾಸಿಗರು ಗಾಡ್ರ್ಸ್ಗಳ ಮಾತು ಕೇಳುತ್ತಿಲ್ಲ.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…