ಕುಂದಾಪುರ:ಮಳೆಗಾಲದಲ್ಲಿ ಕಡಲು ಪ್ರಕ್ಷುಬ್ಧಗೊಳ್ಳುವುದರಿಂದ ಕಡಲಿಗೆ ಇಳಿಯದಂತೆ ನಿಷೇಧ ಹೇರಲಾಗಿದ್ದರು ತ್ರಾಸಿ-ಮರವಂತೆ ಬೀಚ್ಗೆ ಆಗಮಿಸುತ್ತಿರುವ ಪ್ರವಾಸಿಗರು ನಿಷೇಧದ ನಡುವೆಯೂ ಕಡಲಿಗೆ ಇಳಿದು ಮೋಜು ಮಸ್ತಿಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ.ಪ್ರವಾಸಿಗರ ಹಿತದೃಷ್ಟಿಯಿಂದ ಗಂಗೊಳ್ಳಿ ಠಾಣೆಯ ಠಾಣಾಧಿಕಾರಿ ಹರೀಶ್.ಆರ್ ನಾಯ್ಕ್ ಅವರು ಕಡಲ ಪ್ರಕ್ಷುಬ್ಧತೆ ಕುರಿತು ಪ್ರವಾಸಿಗರಿಗೆ ತಿಳಿ ಹೇಳುತ್ತಿರುವ ಪಾಠ ಜನ ಮೆಚ್ಚುಗೆಗೆ ಪಾತ್ರವಾಗಿದೆ.
ದೈತ್ಯಾಕಾರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿರುವ ದೃಶ್ಯವನ್ನು ತಮ್ಮ ಸೆಲ್ಫಿ ಜತೆಗೆ ಸೇರೆ ಹಿಡಿಯಲು ಕೆಂಪು ಪಟ್ಟಿಯನ್ನು ದಾಟಿ ಬ್ರೆಕ್ ವಾಟರ್ ಮೇಲೆ ಪ್ರವಾಸಿಗರು ತೆರಳುತ್ತಿದ್ದಾರೆ.ಕಲ್ಲಿನ ಮೇಲೆ ಪಾಚಿ ಬೆಳೆದಿದ್ದರಿಂದ ಕಲ್ಲು ಜಾರುವ ಸಂಭವ ಅಧಿಕವಾಗಿದ್ದು ಪ್ರವಾಸಿಗರು ಬ್ರೆಕ್ ವಾಟರ್ ಮೇಲೆ ತೆರಳುತ್ತಿರುವುದು ಅಪಾಯಕ್ಕೆ ಆಹ್ವಾನ ನೀಡಿದಂತೆ ಇದೆ.ಮಕ್ಕಳೊಂದಿಗೆ ಕಡಲ ತೀರಕ್ಕೆ ಇಳಿದು ನೀರಿನೊಂದಿಗೆ ಆಟವಾಡುತ್ತಾ ಮೋಜು ಮಸ್ತಿಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ.ಕಡಲಿಗೆ ಇಳಿಯದಂತೆ ಸೂಚನಾ ಫಲಕಗಳನ್ನು ಅಳವಡಿಕೆ ಮಾಡಿದ್ದರು ಪ್ರವಾಸಿಗರು ಗಾಡ್ರ್ಸ್ಗಳ ಮಾತು ಕೇಳುತ್ತಿಲ್ಲ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…