ಕುಂದಾಪುರ:ಮಳೆಗಾಲದಲ್ಲಿ ಕಡಲು ಪ್ರಕ್ಷುಬ್ಧಗೊಳ್ಳುವುದರಿಂದ ಕಡಲಿಗೆ ಇಳಿಯದಂತೆ ನಿಷೇಧ ಹೇರಲಾಗಿದ್ದರು ತ್ರಾಸಿ-ಮರವಂತೆ ಬೀಚ್ಗೆ ಆಗಮಿಸುತ್ತಿರುವ ಪ್ರವಾಸಿಗರು ನಿಷೇಧದ ನಡುವೆಯೂ ಕಡಲಿಗೆ ಇಳಿದು ಮೋಜು ಮಸ್ತಿಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ.ಪ್ರವಾಸಿಗರ ಹಿತದೃಷ್ಟಿಯಿಂದ ಗಂಗೊಳ್ಳಿ ಠಾಣೆಯ ಠಾಣಾಧಿಕಾರಿ ಹರೀಶ್.ಆರ್ ನಾಯ್ಕ್ ಅವರು ಕಡಲ ಪ್ರಕ್ಷುಬ್ಧತೆ ಕುರಿತು ಪ್ರವಾಸಿಗರಿಗೆ ತಿಳಿ ಹೇಳುತ್ತಿರುವ ಪಾಠ ಜನ ಮೆಚ್ಚುಗೆಗೆ ಪಾತ್ರವಾಗಿದೆ.
ದೈತ್ಯಾಕಾರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿರುವ ದೃಶ್ಯವನ್ನು ತಮ್ಮ ಸೆಲ್ಫಿ ಜತೆಗೆ ಸೇರೆ ಹಿಡಿಯಲು ಕೆಂಪು ಪಟ್ಟಿಯನ್ನು ದಾಟಿ ಬ್ರೆಕ್ ವಾಟರ್ ಮೇಲೆ ಪ್ರವಾಸಿಗರು ತೆರಳುತ್ತಿದ್ದಾರೆ.ಕಲ್ಲಿನ ಮೇಲೆ ಪಾಚಿ ಬೆಳೆದಿದ್ದರಿಂದ ಕಲ್ಲು ಜಾರುವ ಸಂಭವ ಅಧಿಕವಾಗಿದ್ದು ಪ್ರವಾಸಿಗರು ಬ್ರೆಕ್ ವಾಟರ್ ಮೇಲೆ ತೆರಳುತ್ತಿರುವುದು ಅಪಾಯಕ್ಕೆ ಆಹ್ವಾನ ನೀಡಿದಂತೆ ಇದೆ.ಮಕ್ಕಳೊಂದಿಗೆ ಕಡಲ ತೀರಕ್ಕೆ ಇಳಿದು ನೀರಿನೊಂದಿಗೆ ಆಟವಾಡುತ್ತಾ ಮೋಜು ಮಸ್ತಿಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ.ಕಡಲಿಗೆ ಇಳಿಯದಂತೆ ಸೂಚನಾ ಫಲಕಗಳನ್ನು ಅಳವಡಿಕೆ ಮಾಡಿದ್ದರು ಪ್ರವಾಸಿಗರು ಗಾಡ್ರ್ಸ್ಗಳ ಮಾತು ಕೇಳುತ್ತಿಲ್ಲ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…