ಕುಂದಾಪುರ

ವಾರಾಹಿ ನೀರಿಗಾಗಿ ಗ್ರಾಮ ಮಟ್ಟದಲ್ಲಿ ಜನಾಂದೋಲನಕ್ಕೆ ಪೂರ್ವ ತಯಾರಿ:ಶಾಸಕ ಗುರುರಾಜ್ ಗಂಟಿಹೊಳೆ ‌ನೇತೃತ್ವದಲ್ಲಿ ಸಭೆ

Share

ಕುಂದಾಪುರ:ವಾರಾಹಿ‌ ನದಿ ನೀರು ಯೋಜನೆ ಬೈಂದೂರು ಕ್ಷೇತ್ರದ ಜನರಿಗೆ ಸಮರ್ಪಕವಾಗಿ ದೊರಕಬೇಕ್ಕೆನ್ನುವ ನಿಟ್ಟಿನಲ್ಲಿ ಹಾಗೂ ಯೋಜನೆಯ ಲಾಭ ಯಶಸ್ವಿಯಾಗಿ ಜಾರಿಗೆ ತರಲು ಒತ್ತಾಯಿಸಿ ಹೋರಾಟವನ್ನು ನಡೆಸುವ ಸಲುವಾಗಿ ಬೈಂದೂರು ಕ್ಷೇತ್ರದ
ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ ಸಿದ್ದಾಪುರದಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಿತು.
ಶಾಸಕರು ಸಭೆಯನ್ನುದ್ದೇಶಿಸಿ ಮಾತ‌ನಾಡಿ,ರಾಜ್ಯ ಸರ್ಕಾರ ವಾರಾಹಿ ಯೋಜನೆ ಅನುಷ್ಠಾನದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆ. ಯೋಜನೆ ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಇದ್ದರೂ ಬೈಂದೂರಿನ ಯಾವುದೇ ಗ್ರಾಮಕ್ಕೆ ಇದರ ಪ್ರಯೋಜನ ಆಗುತ್ತಿಲ್ಲ.ವಾರಾಹಿ ನೀರು ಬೈಂದೂರಿನ ಗ್ರಾಮಗಳ ರೈತರ ಕೃಷಿ ಚಟುವಟಿಕೆಗೆ ಸಿಗಬೇಕು. ಈ ನಿಟ್ಟಿನಲ್ಲಿ ಜನಾಂದೋಲನದ ಮಾದರಿಯಲ್ಲಿ ಹೋರಾಟ ನಡೆಸುವ ಅಗತ್ಯವಿದೆ ಎಂದರು.
ವಾರಾಹಿ ನೀರು ಜಿಲ್ಲೆಯ ಬೇರೆ ಬೇರೆ ತಾಲೂಕುಗಳಿಗೆ ಹೋಗುವಂತೆಯೇ ಬೈಂದೂರು ತಾಲೂಕಿಗೂ ಬರಬೇಕು.ಈ ನಿಟ್ಟಿನಲ್ಲಿ ಯೋಜನೆಯ ಸಮಗ್ರ ಅನುಷ್ಠಾನ ಆಗಬೇಕು. ಸಿದ್ದಾಪುರ ಏತ ನೀರಾವರಿ ಯೋಜನೆಯ ಕಾಮಗಾರಿಗೂ ವೇಗ ಸಿಗಬೇಕು.ವಾರಾಹಿ ಎಡದಂಡೆ ಯೋಜನೆಯ ಅನುಷ್ಠಾನದ ಮೂಲಕ ಕಾಲುವೆಗಳಿಂದ ಬೈಂದೂರಿನ ಗ್ರಾಮಗಳಿಗೆ ವಾರಾಹಿ ನೀರು ಪೂರೈಕೆ ಆಗಬೇಕು.ಈ ಹಿನ್ನೆಲೆಯಲ್ಲಿ ಈ ಹೋರಾಟ ರೂಪಿಸಲಾಗುತ್ತಿದೆ ಎಂದರು.
ಆಗಸ್ಟ್ 15ರ ನಂತರ ಬೃಹತ್ ಹೋರಾಟ ಅಥವಾ ಜಾನಾಂದೋಲನ
ಆರಂಭದಲ್ಲಿ ಪ್ರತಿ ಗ್ರಾಮದಲ್ಲೂ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ವಾರಾಹಿ ಯೋಜನೆಯಡಿ ಬೈಂದೂರಿಗೆ ಆಗಿರುವ ಅನ್ಯಾಯ, ನಿರ್ಲಕ್ಷ್ಯದ ಬಗ್ಗೆ ಮಾಹಿತಿ ನೀಡಲಾಗುವುದು. ಆ.‌15 ರ ನಂತರ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಹೋರಾಟ ಅಥವಾ ಜನಾಂದೋಲನ ನಡೆಸಲಾಗುವುದು. ಕಾಲುವೆಗಳ ಮೂಲಕ ಬೈಂದೂರಿನ ಗ್ರಾಮಗಳಿಗೆ ವಾರಾಹಿ ನೀರು ಒದಗಿಸುವುದು, ವಾರಾಹಿ ಎಡದಂಡೆ ಯೋಜನೆ ಮತ್ತು ಸಿದ್ದಾಪುರ ಏತ ನೀರಾವರಿ ಯೋಜನೆ ಶಕ್ತಿ ತುಂಬುವುದು ಇದರ ಉದ್ದೇಶವಾಗಿದೆ.
ಜಿಲ್ಲೆಯ ಕಾಪು,ಕಾರ್ಕಳ, ಹೇಳಿ ಹೆಬ್ರಿ,ಉಡುಪಿ,ಉಡುಪಿ ನಗರಕ್ಕೆ ವಾರಾಹಿ ನೀರು ನೀಡುವ ಯೋಜನೆ ಜಾರಿಯಲ್ಲಿದೆ.ಆದರೆ ಬೈಂದೂರು ಕ್ಷೇತ್ರವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಈ ಯೋಜನೆಯ ಪೂರ್ಣ ಅನುಕೂಲ ಬೈಂದೂರು ಕ್ಷೇತ್ರದ ಜನತೆಗೂ ಆಗಬೇಕು ಎನ್ನುವ ನಿಟ್ಟಿನಲ್ಲಿ ಹೋರಾಟ ಸಾಗಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಸಭೆಯಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸದಾನಂದ ಉಪ್ಪಿನಕುದ್ರು,ಮಹಾ ಶಕ್ತಿಕೇಂದ್ರದ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಪ್ರಮುಖರಾದ ಉಮೇಶ್ ಕಲ್ಗದ್ದೆ, ಸತೀಶ್ ಶೆಟ್ಟಿ, ಡಾ. ಅತುಲ್ ಕುಮಾರ್ ಶೆಟ್ಟಿ, ಪ್ರಾಣೇಶ್, ರವಿಶೆಟ್ಟಿ, ರೋಹಿತ್ ಕುಮಾರ್ ಶೆಟ್ಟಿ, ಪ್ರಭಾಕರ ಕುಲಾಲ್, ಹಟ್ಟಿಯಂಗಡಿ ರಾಜೀವ್ ಶೆಟ್ಟಿ, ಹಕ್ಲಾಡಿ ಶುಭಾಶ್ ಶೆಟ್ಟಿ, ಹರ್ಕುರು ಮಂಜಯ್ಯ ಶೆಟ್ಟಿ, ಹರ್ಷ ಮೊಗವೀರ ಸಿದ್ದಾಪುರ, ಕೃಷ್ಣ ಪೂಜಾರಿ, ರವಿ ಕುಲಾಲ್ ಸೇರಿದಂತೆ ಸುಮಾರು 25 ಗ್ರಾಮ ಪಂಚಾಯತಿಗಳ ಮುಖಂಡರು ಭಾಗವಹಿಸಿ, ಯೋಜನೆಯ ಬಗ್ಗೆ ಸಮಗ್ರ ಚರ್ಚೆ ನಡೆಸಿದ್ದಾರೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago