ಕುಂದಾಪುರ:ಬೈಂದೂರು ತಾಲೂಕಿನ ಬಡಾಕೆರೆ ಗ್ರಾಮದ ಪೋಸ್ಟ್ ನಿವಾಸಿ ಕೃಷಿಕ ಮಂಜುನಾಥ ಶೇಟ್ (85) ಎಂಬುವವರು ತೆಂಗಿನ ತೋಟದಲ್ಲಿ ತೆಂಗಿನಕಾಯಿ ಹೆಕ್ಕಲು ಹೋದಂತಹ ಸಮಯದಲ್ಲಿ ಬಾವಿ ಬದಿಯಲ್ಲಿ ಬಿದ್ದಿರುವ ತೆಂಗಿನಕಾಯಿಯನ್ನು ಹೆಕ್ಕುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.
ಮಂಜುನಾಥ ಶೇಟ್ ಅವರು ಬೆಳಗಿನ ಸಮಯದಲ್ಲಿ ತೆಂಗಿನ ತೋಟಕ್ಕೆ ಹೋಗಿ ತೋಟದಲ್ಲಿ ಬಿದ್ದಿರುವ ಕಾಯಿಯನ್ನು ಹೆಕ್ಕುವ ಅಭ್ಯಾಸವನ್ನು ಇಟ್ಟುಕೊಂಡಿದ್ದರು.ದಿನ ನಿತ್ಯದ ರೂಢಿಯಂತೆ ಬುಧವಾರ ಬೆಳಗಿನ ಸಮಯದಲ್ಲಿ ತೋಟಕ್ಕೆ ಕಾಯಿಯನ್ನು ಹೆಕ್ಕಲು ಮನೆಯಿಂದ ಹೋಗಿದ್ದ ಅವರು ಬಹಳ ಸಮಯದ ವರೆಗೆ ಮನೆಗೆ ಬಾರದೆ ಇರುವುದನ್ನು ಗಮನಿಸಿದ ಮಗ ರಾಘವೇಂದ್ರ ಶೇಟ್ ತಮ್ಮ ತಂದೆಯನ್ನು ಹುಡುಕುತ್ತಾ ತೋಟಕ್ಕೆ ತೆರಳಿದ್ದರು.ತೋಟದಲ್ಲಿ ತೀವೃವಾಗಿ ಹುಡುಕಿದ ಬಳಿಕ ಬಾವಿಯಲ್ಲಿ ತಂದೆ ಧರಿಸಿರುವ ಚಪ್ಪಲಿ ತೇಲುತ್ತಿರುವುದನ್ನು ಗಮನಿಸಿ ಬೈಂದೂರು ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ.ಅಗ್ನಿ ಶಾಮಕದಳದ ಸಿಬ್ಬಂದಿಗಳು ಬಾವಿಯಲ್ಲಿ ಹುಡುಕಾಟ ಮಾಡಿದ ಬಳಿಕ ಮಂಜುನಾಥ ಶೇಟ್ ಮೃತ ಶರೀರ ಬಾವಿಯಲ್ಲಿ ಪತ್ತೆಯಾಗಿದೆ.ಬೈಂದೂರು ಠಾಣೆ ಠಾಣಾಧಿಕಾರಿ ತಿಮ್ಮೇಶ್ ಡಿ.ಎನ್ ಮತ್ತು ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಸ್ಥಳ ಮಹಜರು ನಡೆಸಿದರು.ಮಗ ರಾಘವೇಂದ್ರ ಶೇಟ್ ನೀಡಿದ ದೂರಿನಂತೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…