ಸಾರ್ವಜನಿಕ ಅಭಿನಂದನಾ ಸಮಾರಂಭ ಕಾರ್ಯಕ್ರಮ

Share

Advertisement
Advertisement

ಕುಂದಾಪುರ:ಆಲೂರು ಹರ್ಕೂರು ಗ್ರಾಮಸ್ಥರ ವತಿಯಿಂದ ಅಭಿನಂದನಾ ಸಮಾರಂಭ ಕಾರ್ಯಕ್ರಮ ಆಲೂರು ಮೂಕಾಂಬಿಕಾ ಸಭಾಭವನದಲ್ಲಿ ಬುಧವಾರ ನಡೆಯಿತು.ಆಲೂರು ಪಂಚಾಯಿತಿ ಅಧ್ಯಕ್ಷ ರಾಜೇಶ್ ಎನ್ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು.
ಆಲೂರು ಮಹಾಬಲ ಜೋಯಿಸ್,ಆಲೂರು ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಚ್.ಮಂಜಯ್ಯ ಶೆಟ್ಟಿ,ಶಾಖಾಧಿಕಾರಿ ಸಂಜೀವ ಪೂಜಾರಿ,ಅಪ್ಪು ಕುಲಾಲ್,ತೇಜಪ್ಪ ಶೆಟ್ಟಿ,ರವಿ ಶೆಟ್ಟಿ ಆಲೂರು,ಸತೀಶ ಶೆಟ್ಟಿ,ಪ್ರಶಾಂತ ಕುಲಾಲ್,ಅರುಣ ಶೆಟ್ಟಿ,ಕೃಷ್ಣ ಶೆಟ್ಟಿ,ವಾಸುದೇವ ಶ್ಯಾನುಭಾಗ್,ರಾಘವೇಂದ್ರ ದೇವಾಡಿಗ,ಸಂತೋಷ ಪೂಜಾರಿ ಉಪಸ್ಥಿತರಿದ್ದರು.
ನಿವೃತ್ತ ಶಿಕ್ಷಕ ಪ್ರವೀಣ್ ಕುಮಾರ್ ಶೆಟ್ಟಿ ಮತ್ತು ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಟೆಂಡರ್ ಆಗಿ ಸೇವೆ ಸಲ್ಲಿಸಿ ನಿವೃತ್ತರಾದ ವಿಠಲ್ ಸುವರ್ಣ ಹಾಗೂ ಆಲೂರು-ಹರ್ಕೂರು ಗ್ರಾಮಾಧಿಕಾರಿಯಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಆಶಿಕ್ ಹುಸೇನ್,ವಲಯ ಅರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ದಿಲೀಫ್ ಕುಮಾರ್ ಅವರನ್ನು ಆಲೂರು ಹರ್ಕೂರು ಗ್ರಾಮಸ್ಥರ ವತಿಯಿಂದ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.ಕೆ.ಕೆ ರಾಘು ರಟ್ಟಾಡಿ ಸ್ವಾಗತಿಸಿದರು.ಶಿಕ್ಷಕ ಉದಯ ಕುಮಾರ್ ಶೆಟ್ಟಿ ನಿರೂಪಿಸಿದರು.ಸುನೀಲ್ ನಾರ್ಕಳಿ ವಂದಿಸಿದರು.

Advertisement
Advertisement
Advertisement


Share

Leave a comment

Your email address will not be published. Required fields are marked *

You cannot copy content of this page